ಬಳ್ಳಾರಿ | ಪ.ಪಂ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಪಾಲಿಕೆ ಸದಸ್ಯ ಕೆ ಹನುಮಂತಪ್ಪ ಭೇಟಿ, ಪರಿಶೀಲನೆ

Date:

Advertisements

ಬಳ್ಳಾರಿ ನಗರದ 22ನೇ ವಾರ್ಡಿನ ಪರಿಶಿಷ್ಟ ವರ್ಗಗಳ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಇಂದು ಮುಂಜಾನೆ ಮಹಾನಗರ ಪಾಲಿಕೆ ಸದಸ್ಯ ಕೆ ಹನುಮಂತಪ್ಪ ದಿಢೀರ್ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಿದರು.

“ಊಟದಲ್ಲಿ ತರಕಾರಿ ಹಾಕುವುದಿಲ್ಲ. ಊಟಕ್ಕೆ ಸಮಯ ನಿಗದಿಪಡಿಸಿದ್ದು, ತಡವಾಗಿ ಬರುವ ವಿದ್ಯಾರ್ಥಿನಿಯರಿಗೆ ಊಟ ನೀಡುವುದಿಲ್ಲ. ಅಡುಗೆದಾರರು ಊಟವನ್ನು ತಾವೇ ಡಬ್ಬಿಯಲ್ಲಿ ತುಂಬಿಕೊಂಡು ಹೋಗುತ್ತಾರೆ. ಇದರಿಂದ ನಮಗೆ ಊಟ ಸರಿಯಾಗಿ ಸಿಗದೆ ತೊಂದರೆಯಾಗುತ್ತದೆ, ಶೌಚಾಲಯ ಹಾಗೂ ಕೋಣೆಗಳನ್ನು ಶುಚಿಗೊಳಿಸುವುದಿಲ್ಲ” ಎಂದು ವಿದ್ಯಾರ್ಥಿನಿಯರು ತಮ್ಮ ಅಹವಾಲನ್ನು ಪಾಲಿಕೆ ಸದಸ್ಯರ ಎದುರು ಹೇಳಿಕೊಂಡರು.

ಹಾಸ್ಟೆಲ್‌ ವಿದ್ಯಾರ್ಥಿನಿಯರು ಅನುಭವಿಸುತ್ತಿರುವ ಸಮಸ್ಯೆಯನ್ನು ತಿಳಿದುಕೊಂಡು ಅಧಿಕಾರಿಗಳಿಗೆ ಎಲ್ಲ ಸಮಸ್ಯೆಗಳನ್ನು ಪರಿಹರಿಸುವಂತೆ ತಾಕೀತು ಮಾಡಿದ ಹನುಮಂತಪ್ಪ, ಪ್ರತಿ ತಿಂಗಳು ವಿದ್ಯಾರ್ಥಿನಿಯರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಿ ಬಾಲಕಿಯರ ಆರೋಗ್ಯವನ್ನು ಕಾಪಾಡಬೇಕೆಂದು ಜಿಲ್ಲಾ ಅಧಿಕಾರಿ ಮತ್ತು ತಾಲೂ ಅಧಿಕಾರಿಗಳಿಗೆ ಸೂಚಿಸಿದರು. ಅಷ್ಟೇ ಅಲ್ಲದೆ ಸ್ಥಳದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಅಬ್ದುಲ್ಲಾ ಅವರನ್ನು ಸಂಪರ್ಕಿಸಿ ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಬೇಕೆಂದು ವಿನಂತಿಸಿದರು.

Advertisements

“ವಿದ್ಯಾರ್ಥಿನಿಯರಿಗೆ ನಿಲಯದಲ್ಲಿ ಸ್ವಚ್ಛ ಭಾರತ್ ಅಭಿಯಾನ ಅಳವಡಿಸಿಕೊಂಡು ಶುಚಿತ್ವವನ್ನು ಕಾಪಾಡಿಕೊಳ್ಳಬೇಕು ಮತ್ತು ಬಳಸಿ ಬಿಸಾಡುವ ಪ್ಯಾಡ್‌ಗಳನ್ನು ಶೌಚಾಲಯಗಳಲ್ಲಿ ಎಸೆಯಬಾರದು. ಇದರಿಂದ ಒಳಚರಂಡಿ ವ್ಯವಸ್ಥೆಗೆ ತೊಂದರೆಯಾಗುತ್ತದೆ” ಎಂದು ಸಲಹೆ ನೀಡಿದರು.

ಫುಡ್ ಪಾಯಿಸನ್‌ನಿಂದ ಮಹಾದೇವಿ, ಚಂದನ ಮತ್ತು ಅಶ್ವಿನಿ ಎಂಬ ವಿದ್ಯಾರ್ಥಿನಿಯರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಸೂಕ್ತ ಚಿಕಿತ್ಸೆಯನ್ನು ನೀಡಿ ಗುಣಮಟ್ಟದ ಆಹಾರ ಮತ್ತು ಶುದ್ಧವಾದ ಕುಡಿಯುವ ನೀರನ್ನು ಒದಗಿಸಲು ಇಲಾಖೆಯ ಜಿಲ್ಲಾ ಅಧಿಕಾರಿ ದಿವಾಕರ್, ತಾಲೂಕು ಅಧಿಕಾರಿ ಗಾದಿಲಿಂಗಪ್ಪ ಅವರಿಗೆ ಸೂಚಿಸಿದರು.

ಫುಡ್ ಪಾಯಿಸನ್ ಕುರಿತು ವಾರ್ಡನ್ ಅವರಲ್ಲಿ ವಿಚಾರಿಸಿದಾಗ, “ವಿದ್ಯಾರ್ಥಿ ನಿಲಯದಲ್ಲಿ ಸುಮಾರು 70 ಜನ ವಿದ್ಯಾರ್ಥಿನಿಯರಿದ್ದಾರೆ. ಅವರಿಗೆಲ್ಲ ಬಿಟ್ಟು ಕೇವಲ ಮೂರು ಮಂದಿಗೆ ಮಾತ್ರ ಫುಡ್ ಪಾಯಿಸನ್ ಆಗಿದೆ, ಕೆಲ ವಿದ್ಯಾರ್ಥಿನಿಯರು ಎಷ್ಟು ಹೇಳಿದರೂ ಕೇಳದೆ ಜಂಕ್ ಫುಡ್ ತಿಂದು ಆರೋಗ್ಯವನ್ನು ಕೆಡಿಸಿಕೊಳ್ಳುತ್ತಿದ್ದಾರೆ. ಬಳಸಿದ ಪ್ಯಾಡ್‌ಗಳನ್ನು ಶೌಚಾಲಯದಲ್ಲಿ ಹಾಕಿ ಅವುಗಳನ್ನು ಬ್ಲಾಕ್ ಆಗುವಂತೆ ಮಾಡುತ್ತಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೊರಟಗೆರೆ | ಬೈಚಾಪುರ ಗ್ರಾಪಂ ಅಧ್ಯಕ್ಷೆಯಾಗಿ ರಾಮಲಕ್ಷ್ಮಮ್ಮ ಆಯ್ಕೆ

“ಏನೇ ಆಗಲಿ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ” ಎಂದು ತಾಲೂಕು ಅಧಿಕಾರಿ ಗಾದಿಲಿಂಗಪ್ಪ ತಿಳಿಸಿದರು

ಪರಿಶಿಷ್ಟ ವರ್ಗಗಳ ಜಿಲ್ಲಾ ಅಧಿಕಾರಿ ದಿವಾಕರ್, ಪಾಲಿಕೆ ಸದಸ್ಯ ಹನುಮಂತಪ್ಪ, ಗಡ್ಡಂ ತಿಮ್ಮಪ್ಪ, ಊಳೂರು ಸಿದ್ದೇಶ್, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X