ಬಳ್ಳಾರಿ | ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾ. ಪಂ. ಸದಸ್ಯರಿಂದ ಅ. 4ಕ್ಕೆ ‘ಬೆಂಗಳೂರು ಚಲೋ’

Date:

Advertisements

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲ ವೃಂದಗಳ ಹಾಗೂ ಕರ್ನಾಟಕ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 4ರಂದು ಬೆಂಗಳೂರು ಚಲೋ ಹಾಗೂ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ನಾಗರಾಜ್ ಗೌಡ ಅವರು ಹೇಳಿದರು.

ಬಳ್ಳಾರಿ ನಗರದ ರೇಣುಕಾ ಕಿಚನ್ ಹೋಟೆಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯವಾಗಿ ಗ್ರಾಮ ಪಂಚಾಯತಿಗಳು ಸ್ವಯಂ ಪ್ರೇರಿತ ಸ್ಥಳೀಯ ಸರ್ಕಾರ ನಡೆಸಲು ರಾಜ್ಯದಲ್ಲಿ 1993ನೇ ಇಸವಿಯಲ್ಲಿ 73 ಮತ್ತು 74ನೇ ತಿದ್ದುಪಡಿ ಪ್ರಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾಯ್ದೆಯನ್ನು ಜಾರಿಗೆ ತರಲಾಯಿತು. ಜವಾಬ್ದಾರಿ ನಕ್ಷೆ, ಶಿಷ್ಟಾಚಾರ, ಆರೋಗ್ಯ ವಿಮೆ, ಗೌರವಧನ ಹೆಚ್ಚಳ, ಬಸ್ ಪಾಸ್ ನೀಡುವಂತೆ ಒತ್ತಾಯಿಸಲಾಗುವುದು ಎಂದರು.

ಬಳ್ಳಾರಿ

ಹುಸೇನ್ ಅವರು ಮಾತನಾಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯನ್ನು ಬಿ ಗ್ರೂಪ್ ಹುದ್ದೆ ಎಂದು ಪರಿಗಣಿಸಬೇಕು. ವರ್ಗಾವಣೆ ಆದೇಶ ರದ್ದು, ಜೇಷ್ಟತಾ ಪಟ್ಟಿ ಮಾಡುವುದು, ನರೇಗಾ ಯೋಜನೆ ಸೇರಿದಂತೆ ಮುಂತಾದ ಯೋಜನೆಗಳಿಗೆ ಗುರಿ ನಿಗದಿಪಡಿಸಲಾಗಿದೆ ಅದನ್ನು ರದ್ದುಪಡಿಸಬೇಕು ಎಂದರು.

Advertisements

ಇದನ್ನು ಓದಿದ್ದೀರಾ? ರಾಯಚೂರು | ಲಿಂಗಸುಗೂರು ಪುರಸಭೆಗೆ ಅಧ್ಯಕ್ಷರಾಗಿ ಬಾಬುರೆಡ್ಡಿ ಅವಿರೋಧ ಆಯ್ಕೆ

ದಾದಾ ಸಾಹೇಬ್ ಅವರು ಮಾತನಾಡಿ, ಕನಿಷ್ಠ ವೇತನ ಕೈ ಬಿಟ್ಟು ಇಲಾಖೆ ವೇತನ ಜಾರಿ ಮಾಡಬೇಕು. ಹಳೇ ವೇತನ ಹೆಚ್ಚಳ ಮಾಡಬೇಕು. ಮುಂಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ರಾಜ್ಯ ಉಪಾಧ್ಯಕ್ಷರಾದ  ಪಂಪಯ್ಯ, ಸದಾಶಿವ ಎಂ ಶ್ರೀಧರ್, ಶೇಕ್ಷಾವಲಿ ಹುಸೇನ್ ಮರಿಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X