ಬಳ್ಳಾರಿ | ಲಿಫ್ಟ್ ಕುಸಿದು ಕಾರ್ಮಿಕ ಸಾವು

Date:

Advertisements

ಕಟ್ಟಡಕ್ಕೆ ತಾತ್ಕಾಲಿಕವಾಗಿ ನಿರ್ಮಿಸಿದ್ದ ಲಿಫ್ಟ್ ಕುಸಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬಳ್ಳಾರಿ ನಗರದ ಚಂದ್ರ ಕಾಲೋನಿಯಲ್ಲಿ ನಡೆದಿದೆ.

ಜಿ ವೀರಾಂಜನೇಯಲು ಮೃತಪಟ್ಟ ವ್ಯಕ್ತಿ ನಗರದ ಗೋನಾಳು ರಸ್ತೆಯ ಆಶ್ರಯ ಕಾಲೋನಿಯ ನಿವಾಸಿ ಎಂದು ತಿಳಿದುಬಂದಿದೆ. ನಿರ್ಮಾಣದ ಹಂತದ ಕಟ್ಟಡದಲ್ಲಿ ಅಳವಡಿಸಿದ್ದ ತಾತ್ಕಾಲಿಕ ಲಿಫ್ಟ್ ಕುಸಿದು ಸಾವನ್ನಪ್ಪಿದ್ದಾರೆ.

ಕಟ್ಟಡ ಮಾಲೀಕ ಭೀಮಪ್ಪ ಚಂದ್ರ ಕಾಲೋನಿಯಲ್ಲಿ ಮನೆ ನಿರ್ಮಾಣ ಮಾಡುತ್ತಿದ್ದು, ವೀರಾಂಜನೇಯಲು ಅವರಿಗೆ ಪೈಂಟಿಂಗ್ ಗುತ್ತಿಗೆ ನೀಡಿದ್ದರು. ಕಟ್ಟಡ ನಿರ್ಮಾಣದ ಉದ್ದೇಶ ತಾತ್ಕಾಲಿಕವಾಗಿ ಲಿಫ್ಟ್ ಅಳವಡಿಸಲಾಗಿತ್ತು. ಪೈಂಟಿಂಗ್ ಕಾರ್ಯನಿರ್ವಹಿಸುವುದಕ್ಕೆ ವೀರಾಂಜನೇಯಲು ನಾಲ್ಕನೇ ಮಹಡಿಗೆ ಹೋಗುವ ವೇಳೆ ಲಿಫ್ಟ್ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅಲ್ಲಿದ್ದ ಜನರು ಸ್ಥಳೀಯ ವಿಮ್ಸ್ ಟ್ರಾಮ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿ ನಿಧನರಾದರು ಎನ್ನಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ದರ್ವೇಶ್ ಗುಂಪಿನಿಂದ ಅವ್ಯವಹಾರ; ವಿಚಾರಣೆ ಮುಂದೂಡಿಕೆ

ವೀರಾಂಜನೇಯಲು ಪತ್ನಿ ಲಕ್ಷ್ಮಿ ಅವರು ಕೌಲ್ ಬಜಾರ್ ಠಾಣೆಗೆ ಕಟ್ಟಡ ಮಾಲೀಕನ ವಿರುದ್ಧ ದೂರು ನೀಡಿ ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X