ಬಳ್ಳಾರಿ | ಜನತಾದರ್ಶನದಲ್ಲಿ ನೂಕು ನುಗ್ಗಲು: ಅಹವಾಲು ನೀಡಲು ಹೈರಾಣಾದ ಜನತೆ

Date:

ಬಳ್ಳಾರಿ ನಗರದ ಹೊಸ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ ಝಡ್‌ ಜಮೀರ್ ಅಹಮದ್‌ ಖಾನ್‌ ಉಪಸ್ಥಿತಿಯೊಂದಿಗೆ ನಡೆದ ಜನತಾದರ್ಶನಕ್ಕೆ ನಗರದ ಹಾಗೂ ಸುತ್ತಮುತ್ತಲ ಪ್ರದೇಶದ ಬಹಳಷ್ಟು ಸಾರ್ವಜನಿಕರು ನೆರೆದಿದ್ದು, ಅರ್ಜಿ ಸಲ್ಲಿಸಲು ನಾ ಮುಂದು ತಾ ಮುಂದು ಎಂದು ವೇದಿಕೆ ಕಡೆ ನುಗ್ಗತೊಡಗಿದರು. ಜನರನ್ನು ತಡೆದು ಸರತಿ ಸಾಲಿನಲ್ಲಿ ನಿಲ್ಲಿಸಲು ಕಂದಾಯ ಇಲಾಖೆಯ ಪರಿವೀಕ್ಷಕರು ಗ್ರಾಮಾಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು ಪೊಲೀಸರೊಂದಿಗೆ ಸೇರಿ ಹರಸಾಹಸಪಟ್ಟರು.

- Advertisement -

ಅಹವಾಲು ಸಲ್ಲಿಸಲು ಸೇರಿದ ಜನ ನಾವು ಸಚಿವರಿಗೇ ಮನವಿ ಕೊಡಬೇಕೆಂದು ಪಟ್ಟು ಹಿಡಿದುಕೊಂಡಿದ್ದರಿಂದ ಈ ನೂಕುನುಗ್ಗಲು ಮತ್ತು ಗೊಂದಲಕ್ಕೆ ಕಾರಣವಾಯಿತು. ಜನತಾದರ್ಶನ ಆಯೋಜಿಸಿದ ಜಿಲ್ಲಾಡಳಿತ ವ್ಯವಸ್ಥಿತವಾದ ಸಿದ್ಧತೆಯನ್ನು ಮಾಡಿಕೊಳ್ಳದೇ ಇದ್ದುದರಿಂದ ಈ ಗೊಂದಲಕ್ಕೆ ಕಾರಣವಾಯಿತೆಂದು ಮನವಿ ಕೊಡಲು ಬಂದವರು ದೂರಿದರು. ಇದಕ್ಕೆ ಕೆಲ ಹೊತ್ತು ಮಳೆರಾಯನ ಕಾಟದಿಂದಲೂ ಕಾರ್ಯಕ್ರಮ ಗಲಿಬಿಲಿಯಾಗಲು ಕಾರಣವಾಯಿತು. ಈ ನಡುವೆ ಅಹವಾಲು ಸಲ್ಲಿಸಲು ಬಂದ ಜನತೆ ಹೈರಾಣಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? ಗದಗ | ಜಿಲ್ಲೆಯಲ್ಲಿ 1,12,438 ಹೆಕ್ಟೇರ ಪ್ರದೇಶ ಬೆಳೆ ಹಾನಿ; 121.33 ಕೋಟಿ ರೂ ಪರಿಹಾರ ನೀಡಲು ಪ್ರಸ್ತಾವನೆ : ಸಚಿವ ಎಚ್ ಕೆ ಪಾಟೀಲ

ಜಿಲ್ಲಾ ಉಸ್ತುವಾರಿ ಸಚಿವರು, ಗ್ರಾಮೀಣ ಶಾಸಕ ನಾಗೇಂದ್ರ, ನಗರ ಶಾಸಕ ಭರತ್ ರೆಡ್ಡಿಯವರು ಸಾಧ್ಯವಾದಷ್ಟು ಎಲ್ಲರಿಂದಲೂ ಮನವಿ ಪತ್ರಗಳನ್ನು ಪಡೆದುಕೊಂಡು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.

ವೇದಿಕೆ ಮೇಲೆ ಬರಲು ಸಾಧ್ಯವಾಗದ ಜನರ ಹತ್ತಿರ ಖುದ್ದಾಗಿ ಉಸ್ತುವಾರಿ ಸಚಿವರು ಮತ್ತು ಶಾಸಕರುಗಳು ಹೋಗಿ ಮನವಿ ಪತ್ರವನ್ನು ಪಡೆದುಕೊಂಡು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...