ಬಳ್ಳಾರಿ | ವಿಮ್ಸ್ ಆಸ್ಪತ್ರೆಯ ಸಮೀಪವಿರುವ ಕ್ರಷರ್ ಸ್ಥಳಾಂತರಕ್ಕೆ ಒತ್ತಾಯಿಸಿ ಮನವಿ

Date:

Advertisements

ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಸಭಾಂಗಣದ ಪಕ್ಕದಲ್ಲಿರುವ ಕಟ್ಟಡ ನಿರ್ಮಾಣಕ್ಕೆ ಹಾಕಿರುವ ಕ್ರಷರ್ ಸ್ಥಳಾಂತರಿಸಬೇಕು ಎಂದು ದಲಿತ ಸೇನೆ ಸಂಘಟನೆ ವತಿಯಿಂದ ವಿಮ್ಸ್ ನಿರ್ದೇಶಕರಿಗೆ ಗಂಗಾಧರ ಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ನಗರದ ವಿಮ್ಸ್ ಆಸ್ಪತ್ರೆಯ ಸಭಾಂಗಣದ ಪಕ್ಕದಲ್ಲಿರುವ ನೂತನ ಕಟ್ಟಡ ಕಾಮಗಾರಿ ನಡೆಯುತ್ತಿದ್ದು ಅದರ ಪಕ್ಕದಲ್ಲಿ ಕ್ರಷರ್ ಸ್ಥಾಪಿಸಿ ದಿನನಿತ್ಯ ಓಡಾಡುವ ಸಾರ್ವಜನಿಕರಿಗೆ ಬಹಳಷ್ಟು ಧೂಳಿನ ಸಮಸ್ಯೆ ಎದುರಾಗಿದೆ ಎಂದು ಮನವಿಯಲ್ಲಿ ದೂರಿದ್ದಾರೆ.

ಈ ಬಗ್ಗೆ ರಾಜ್ಯ ಸಂಘಟನೆ ಕಾರ್ಯದರ್ಶಿ ಕಟ್ಟೆಸ್ವಾಮಿ ಮಾತನಾಡಿ, ವಿಮ್ಸ್ ಆಸ್ಪತ್ರೆ ಪಕ್ಕದಲ್ಲಿ ನೂತನ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಇದರಿಂದ ಸಾಕಷ್ಟು ಧೂಳು ಬರುತ್ತಿದೆ. ವಿಮ್ಸ್ ಆಸ್ಪತ್ರೆಯಲ್ಲಿ ನೂರಾರು ರೋಗಿಗಳು ದಾಖಲಾಗಿದ್ದಾರೆ. ಇದರಿಂದಾಗಿ ಬೇಸತ್ತು ಹೋಗಿದ್ದಾರೆ ಎಂದರು.

Advertisements

ಇದನ್ನು ಓದಿದ್ದೀರಾ? ಬೆಂಗಳೂರು | ಆನ್‌ಲೈನ್ ಉದ್ಯೋಗದ ಹೆಸರಲ್ಲಿ 6 ಕೋಟಿ ವಂಚನೆ: 10 ಮಂದಿ ಆರೋಪಿಗಳ ಬಂಧನ

ಆರೋಗ್ಯ ಕಾಪಾಡುವ ಸ್ಥಳದಲ್ಲಿ ಆರೋಗ್ಯ ಹಾಳಾಗುವ ಸಾಧ್ಯತೆ ಇದೆ. ಕ್ರಷರ್ ಬೇರೆ ಕಡೆ ಸ್ಥಾಪಿಸಬೇಕು ಇಲ್ಲದಿದ್ದರೆ ಪರ್ಯಾಯ ವ್ಯವಸ್ಥೆ ಮಾಡಿ, ಕಟ್ಟಡ ಕೆಲಸ ಕಾರ್ಯ ಮಾಡುವುದಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು.

ಈ ವೇಳೆ ದಲಿತ ಸೇನೆ ಸಂಘಟನೆಯ ಜಿಲ್ಲಾಧ್ಯಕ್ಷ ಮುರಳಿ ಕೃಷ್ಣ , ರತ್ನಯ್ಯ , ಮಾನಪ್ಪ ,ಸಿದ್ದೇಶ್ ನಗರ, ಪ್ರಸಾದ್ ,ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X