ಬಳ್ಳಾರಿ | ಗ್ರಾಮೀಣ ಭಾಗದಲ್ಲಿ ನಾಡಿನ ಸಾಹಿತ್ಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಿ: ಬಿ ವೀಣಾ ಕುಮಾರಿ

Date:

‘ನಾಡಿನ ಸಾಹಿತ್ಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅವಶ್ಯಕತೆಯಿದೆ’ ಎಂದು ಹಿರಿಯ ರಂಗಭೂಮಿ ಕಲಾವಿದೆ ಬಿ. ವೀಣಾ ಕುಮಾರಿ ಅವರು ಹೇಳಿದರು.

- Advertisement -

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ರಾಮಸಾಗರ ಸ.ಹಿ.ಪ್ರಾ.ಶಾಲೆ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮಸಾಗರ ಇವರ ಸಂಯುಕ್ತಾಶ್ರಯದೊಂದಿಗೆ ಏರ್ಪಡಿಸಿದ್ದ ʼಸೌರಭ ಸಾಂಸ್ಕೃತಿಕʼ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಗ್ರಾಮೀಣ ಭಾಗದ ಮಕ್ಕಳು ತಮ್ಮಲ್ಲಿನ ಕಲಾ ಪ್ರತಿಭೆಗಳನ್ನು ಹೊರಹಾಕಬೇಕು. ಸಾಂಸ್ಕೃತಿಕವಾಗಿ ದೇಶಕ್ಕೆ ಕೊಡುಗೆ ನೀಡಬೇಕು” ಎಂದರು.

ರಾಮಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ ಆಶಾ ಮಾತನಾಡಿ, “ರಾಮಸಾಗರ ಅನೇಕ ಜಾನಪದ ಕಲಾವಿದರು ಮತ್ತು ವಿದ್ವಾಂಸರನ್ನು ಹೊಂದಿದ್ದು, ನಾಡಿಗೆ ಅನನ್ಯ ಕೂಡುಗೆಯನ್ನು ನೀಡಿದೆ” ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಮಾತನಾಡಿ, “ಕರ್ನಾಟಕವು ರಂಗ ಕಲೆಯ ಶ್ರೀಮಂತ ನೆಲೆಯಾಗಿದ್ದು, ಇದಕ್ಕೆ ಪ್ರಾಚೀನ ಇತಿಹಾಸವಿದೆ. ಗ್ರಾಮೀಣ ಭಾಗದ ಎಲ್ಲ ಕಲಾವಿದರೂ ಇಂತಹ ಕಾರ್ಯಕ್ರಮಗಳ ವೇದಿಕೆಯನ್ನು ಸದುಪಯೋಗ ಪಡೆಸಿಕೊಂಡು ತಮ್ಮಲ್ಲಿರುವ ಕಲೆಯನ್ನು ಹೊರಹಾಕಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲಿ ಬಳ್ಳಾರಿಯ ಮೋಹನ್ ಕಲಬುರಗಿ ಅವರಿಂದ ವಾಯಲಿನ್ ವಾದನ, ಕೆ ದೊಡ್ಡಬಸಪ್ಪ ಗವಾಯಿ ತಂಡದಿಂದ ಸುಗಮ ಸಂಗೀತ, ವನಮಾಲ ಕುಲಕರ್ಣಿ ಸಂಗಡಿಗರಿಂದ ಸಮೂಹ ನೃತ್ಯ, ಯಲ್ಲನಗೌಡ ಶಂಕರಬಂಡೆ ತಂಡದಿಂದ ಜಾನಪದ ಗೀತೆ, ಏಳುಬೆಂಚಿಯ ಸಿ ಎಂ ಕರುಣಾಮೂರ್ತಿ ಅವರಿಂದ ಕಥಾ ಕೀರ್ತನೆ, ಬಳ್ಳಾರಿಯ ವರಲಕ್ಷ್ಮೀ ಸಂಗಡಿಗರಿಂದ ಐತಿಹಾಸಿಕ ʼಹೇಮರೆಡ್ಡಿ ಮಲ್ಲಮ್ಮʼ ನಾಟಕ ಸೇರಿದಂತೆ ಇತರೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಸಾಂಸ್ಕೃತಿಕ ಸೌರಭ ಅಂಗವಾಗಿ ʼಜಾನಪದ ಕಲಾ ತಂಡʼಗಳ ಮೆರವಣಿಗೆ ನಡೆಯಿತು. ಕಂಪ್ಲಿಯ ಶಿಕಾರಿ ರಾಮು ಮತ್ತು ಸಂಗಡಿಗರಿಂದ ತಾಷರಂಡೋಲ್, ಹಳೇ ದರೋಜಿಯ ವೈ, ಮಲ್ಲಿಕಾರ್ಜುನಪ್ಪ ಮತ್ತು ಸಂಗಡಿಗರಿಂದ ಹಗಲುವೇಷಗಾರಿಕೆ, ತಾರನಗರದ ಎನ್ ಎಂ ಚಂದ್ರಯ್ಯ ಸ್ವಾಮಿ ಮತ್ತು ಸಂಗಡಿಗರಿಂದ ವೀರಗಾಸೆ ಸೇರಿದಂತೆ ಇನ್ನಿತರೆ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿ ಮೆರಗು ನೀಡಿದವು.

ಈ ಸುದ್ದಿ ಓದಿದ್ದೀರಾ? ಪುತ್ತೂರು-ಮಂಗಳೂರು ತಡೆರಹಿತ ಬಸ್‍ಗೆ ಶಾಸಕ ಅಶೋಕ್ ಕುಮಾರ್ ಚಾಲನೆ

ರಾಮಸಾಗರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಆರ್ ಎಂ ರಾಮಯ್ಯ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ನಿರ್ವಹಣಾ ಸಮಿತಿ ಅಧ್ಯಕ್ಷ ಎಂ ಪ್ರಶಾಂತ್, ರಂಗಭೂಮಿ ಕಲಾವಿದೆ ಎ ವರಲಕ್ಷ್ಮೀ, ಹಿರಿಯ ನೃತ್ಯ ಕಲಾವಿದೆ ವನಮಾಲ ಕುಲಕರ್ಣಿ, ಸೀತಾ ಚಪ್ಪರ್ ಸೇರಿದಂತೆ ಶಾಲಾ ಶಿಕ್ಷಕರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...