ಬಳ್ಳಾರಿ | ಸಮರ್ಪಕ ರಸಗೊಬ್ಬರ ಪೂರೈಕೆಗೆ ಪ್ರಾಂತ ರೈತ ಸಂಘ ಆಗ್ರಹ

Date:

Advertisements

ಬಳ್ಳಾರಿ ಜಿಲ್ಲೆಯಾದ್ಯಂತ ಯೂರಿಯಾ ಗೊಬ್ಬರದ ಕೊರತೆ ಹಾಗೂ ಬೆಲೆ ಏರಿಕೆ ಹೆಚ್ಚಾಗಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಗೊಬ್ಬರದ ಕೊರತೆ ನೀಗಿಸಿ, ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದನ್ನು ನಿಲ್ಲಿಸಬೇಕು. ರೈತರಿಗೆ ಯೂರಿಯಾ ಗೊಬ್ಬರವನ್ನು ಸಮರ್ಪಕವಾಗಿ ಪೂರೈಸಬೇಕು ಎಂದು ಆಗ್ರಹಿಸಿ ರಾಜ್ಯ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಅನಿಲ್‌ಕುಮಾರ್ ಗೆ ಮನವಿ ಸಲ್ಲಿಸಿದರು.

ಸಂಡೂರು ತಾಲೂಕಿನಾದ್ಯಂತ ಯೂರಿಯಾ ಗೊಬ್ಬರದ ಕೊರತೆ ಹೆಚ್ಚಾಗಿದ್ದಲ್ಲದೇ ಕಾಳಸಂತೆಯಲ್ಲಿ ಹೆಚ್ವಿನ ಬೆಲೆಗೆ ಮಾರಾಟವಾಗುತ್ತಿದೆ. ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದರು.

ಸಂಘಟನೆ ಅಧ್ಯಕ್ಷ ಜಿ.ಪಂಪನಗೌಡ ಮಾತನಾಡಿ, “ತಾಲೂಕಿನಾದ್ಯಂತ ಉತ್ತಮ ಮಳೆ ಸುರಿದಿದೆ. ರೈತರು ಬಿತ್ತನೆ ಮಾಡಿದ ಹೈಬ್ರಿಡ್ ಜೋಳ, ಮೆಕ್ಕೆಜೋಳ ಸೇರಿ ನಾನಾ ಬೆಳೆಗಳಿಗೆ ಯೂರಿಯಾ ಸೇರಿದಂತೆ ಗೊಬ್ಬರದ ಬೇಡಿಕೆ ಹೆಚ್ಚಾಗಿದೆ. ಸರಕಾರ ಯೂರಿಯಾ ಸೇರಿ ಇತರೆ ಗೊಬ್ಬರದ ಬೆಲೆ ಏರಿಸಿರುವುದು ಅನ್ಯಾಯ. ರೈತರಿಗೆ ಅಗತ್ಯಕ್ಕೆ ತಕ್ಕಷ್ಟು ಗೊಬ್ಬರದ ಪೂರೈಕೆ ಮಾಡದಿರುವುದರಿಂದ ಕಾಳಸಂತೆಯಲ್ಲಿ ನಿಗದಿಗಿಂತ ಹೆಚ್ಚಿನ ಬೆಲೆಯಲ್ಲಿ ಗೊಬ್ಬರ ಮಾರಾಟ ಮಾಡಿ ರೈತರನ್ನು ವಂಚಿಸಲಾಗುತ್ತಿದೆ. ಕೃತಕ ಗೊಬ್ಬರದ ಅಭಾವ ಸೃಷ್ಟಿಸಬಾರದು” ಎಂದು ಆಗ್ರಹಿಸಿದರು.

Advertisements

ಇದನ್ನೂ ಓದಿ: ಬಳ್ಳಾರಿ | ರೈತರಿಗೆ ಸಮರ್ಪಕ ರಸಗೊಬ್ಬರ ಪೂರೈಸುವಂತೆ ಎಐಕೆಕೆಎಂಎಸ್ ಆಗ್ರಹ

ಈ ವೇಳೆ ಕೆ.ನಾಯ್ಡು, ಪ್ರಾಂತ ರೈತ ಸಂಘದ ಕಾರ್ಯದರ್ಶಿ ಖಲಂದರ್ ಬಾಷಾ, ಕೆ.ಆರ್.ಎಸ್.ಪಕ್ಷದ ತಾಲೂಕು ಅಧ್ಯಕ್ಷ ಖಾದರ್ ಬಾಷಾ, ಜನ ಸಂಗ್ರಾಮ ಪರಿಷತ್‌ನ ಶ್ರೀಶೈಲ ಆಲ್ಟಳ್ಳಿ, ಕೆಪಿಆರ್‌ಎಸ್ ಅಧ್ಯಕ್ಷ ಪಿ.ರಮೇಶ ಹಾಗೂ ಇತರರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X