ಬಳ್ಳಾರಿ |ಎಸ್‌ಸಿ/ಎಸ್‌ಟಿ ಅನುದಾನ ದುರ್ಬಳಕೆ ಅಕ್ಷಮ್ಯ: ಭೀಮ್ ಆರ್ಮಿ

Date:

Advertisements

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯವೆಂದು ಭೀಮ್ ಆರ್ಮಿ (ಭಾರತ ಏಕಾತ್ ಮಿಷನ್) ವಿದ್ಯಾರ್ಥಿ ಘಟಕದ ರಾಜ್ಯ ಅಧ್ಯಕ್ಷ ರಘು ಸಿ ಬಳ್ಳಾರಿ ಹೇಳಿದ್ದಾರೆ.

ಈ ಕುರಿತು ಬಳ್ಳಾರಿಯಲ್ಲಿ ಮಾತಾಡಿದ ಅವರು, “ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಜನತೆಗೆ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸಲು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ 11,000 ಕೋಟಿ ಮೊತ್ತವನ್ನು ಬಳಸಿಕೊಳ್ಳಲು ಮುಂದಾಗಿರುವುದು ದುರಂತ” ಎಂದಿದ್ದಾರೆ.

“ಲಳೆದ ತಿಂಗಳಲ್ಲಿ ಸರ್ಕಾರವೇ ಎಲ್ಲ ಸಚಿವರ ಸಭೆ ಕರೆದು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನ ಕೇವಲ ದಲಿತ ಜನಾಂಗದ ಅಭಿವ್ರದ್ದಿಗೆ ಮಾತ್ರ ಮೀಸಲಾಗಬೇಕು. ಬೇರೆ ಯೋಜನೆಗಳಿಗೆ ಬಳಕೆಯಾಗಬಾರದೆಂದು 7ಡಿ ಕಾಯ್ದೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿಸಡ. ಆದರೆ, ಆದೇಶ ಹೊರಡಿಸಿದ ತಿಂಗಳಲ್ಲಿಯೇ ತನ್ನದೇ ಆದೇಶವನ್ನು ಗಾಳಿಗೆ ತೂರಿ ದಲಿತರ ಹಣವನ್ನು ದುರುಪಯೋಗಕ್ಕೆ ಸರ್ಕಾರ ಮುಂದಾಗಿರುವುದು ಸರಿಯಲ್ಲ” ಎಂದು ಕಿಡಿಕಾರಿದ್ದಾರೆ.

Advertisements

“ಕಳೆದ 2018ರಲ್ಲಿಯೂ ಕೂಡಾ ಕಾಂಗ್ರೆಸ್ ರೈತರ ಸಾಲ ಮನ್ನಾ ಮಾಡಲು ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ ಒಟ್ಟು 929.41 ಕೋಟಿ ರೂ. ಬಳಕೆ ಮಾಡಿಕೊಂಡಿದೆ. ಅದಲ್ಲದೇ, ಅದೇ 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ರಾಜ್ಯಕೀಯ ಪರಸ್ಥಿತಿಗಳ ಬಗ್ಗೆ ಮಾಹಿತಿ ಕಲೆ ಹಾಕಲು ಪೂರಕ ಅಂದಾಜಿನಲ್ಲಿ 10 ಕೋಟಿ ಅನುದಾನವನ್ನು ಪೋಲೀಸ್ ಇಲಾಖೆಗೆ ವರ್ಗಾಯಿಸಿ ದಲಿತರ ಮೀಸಲು ಹಣವನ್ನ ದುರ್ಬಳಕೆ ಮಾಡಿಕೊಂಡಿದೆ. ಚುನಾವಣಾ ಕರ್ತವ್ಯಕ್ಕೆ ಪೋಲೀಸರನ್ನು ನಿಯೋಜಿಸುವದಕ್ಕಾಗಿ 10 ಕೋಟಿ ದಲಿತರ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ವಂಚಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೂಡಲೇ ರಾಜ್ಯ ಸರ್ಕಾರ ದಲಿತರ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸುವದನ್ನು ನಿಲ್ಲಿಸಬೇಕು. ದಲಿತರ ಅಭಿವ್ರದ್ದಿಗೆ ಆಧ್ಯತೆ ನೀಡಬೇಕು. ಇಲ್ಲದೇ ಹೋದಲ್ಲಿ ಸರ್ಕಾರದ ವಿರುದ್ದ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X