ಬಳ್ಳಾರಿ | ಶ್ರೀಧರಗಡ್ಡೆ ಗ್ರಾಮದ ನಿವೇಶನರಹಿತರಿಗೆ ನಿವೇಶನ ಹಂಚಿಕೆಗೆ ಎಸ್‌ಯುಸಿಐಸಿ ಆಗ್ರಹ

Date:

ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮದ ನಿವೇಶನ ರಹಿತರಿಗೆ ನಿವೇಶನ ನೀಡಬೇಕು. ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವಂತೆ ಆಗ್ರಹಿಸಿ ಎಸ್‌ಯುಸಿಐಸಿಯಿಂದ ಶ್ರೀಧರಗಡ್ಡೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಜಾಸಾಬ್ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಎಸ್‌ಯುಸಿಐನ ಸದಸ್ಯ ಪ್ರಮೋದ ಮಾತನಾಡಿ, “ಸುಮಾರು 25 ವರ್ಷಗಳಿಂದ ಹೋರಾಟ ನಡೆಸುತ್ತಲೇ ಬಂದಿದ್ದೆವೆ. ಪಟ್ಟಿ ಸಿದ್ಧವಿದ್ದರೂ ಕೂಡ ಈವರೆಗೂ ಯಾವುದೇ ಬೆಳವಣಿಗೆ ಆಗಿಲ್ಲ. ಸರ್ಕಾರಿ ಜಮೀನಿನಲ್ಲಿ ಬಡವರಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು ಇರುವ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಿ ಜನರಿಗೆ ನಿವೇಶನ ಹಂಚಿಕೆ ಮಾಡಬೇಕು. ಈ ಹಿಂದೆ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ”‌ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಸಮಸ್ಯೆ ಪರಿಹಾರವಾಗಬೇಕು. ಆದ್ದರಿಂದ ಶೀಘ್ರದಲ್ಲಿ ನಿವೇಶನಗಳನ್ನು ಫಲಾನುಭವಿಗಳಿಗೆ ಹಂಚಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ಮಾತುಗಳನ್ನಾಡಿದರು.

ಈ ಸುದ್ದಿ ಓದಿದ್ದೀರಾ? ಸುಪ್ರೀಂ ಕೋರ್ಟ್‌ನ ಮುಂದಿನ ಸಿಜೆಐ ಬಿ ಆರ್ ಗವಾಯಿಯವರ ವಿಶೇಷತೆಗಳೇನು?

ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಹಾಗೂ ಸದಸ್ಯರು “ಈ ಕುರಿತು ತುರ್ತು ಸಭೆ ಕರೆದು ಚರ್ಚಿಸಿ ಬಡವರಿಗೆ ಸಿಗಬೇಕಾದ ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಎಸ್‌ಯುಸಿಐಸಿ(SUCIC) ಗ್ರಾಮೀಣ ಸ್ಥಳೀಯ ಸಮಿತಿಯ ಕಾರ್ಯದರ್ಶಿ ಎ ದೇವದಾಸ್, ಸದಸ್ಯರಾದ ಈ ಹನುಮಂತಪ್ಪ, ಜಗದೀಶ್ ನೇಮಕಲ್, ಫಲಾನುಭವಿ ಬಸಮ್ಮ, ಆಯೇಷಾ ಬೇಗಂ, ನಾಗಮ್ಮ, ಗೌರಮ್ಮ, ಗೌಸಿಯ ಬೇಗಂ, ಊರಿನ ಮುಖಂಡರಾದ ಹನುಮಂತಪ್ಪ, ದೊಡ್ಡಬಸಪ್ಪ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...