ಕನ್ನಡ ಸಾಹಿತ್ಯ ಪರಿಷತ್ತಿನ ಶನಿವಾರದ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.
ಬಳ್ಳಾರಿ, ಕೋಲಾರ, ಯಾದಗಿರಿ ಜಿಲ್ಲೆಗಳು ಅತಿಥ್ಯಕ್ಕೆ ಅರ್ಜಿ ಸಲ್ಲಿಸಿದ್ದವು. ಆದರೆ, 66 ವರ್ಷಗಳ ಬಳಿಕ ಮತ್ತೆ ಬಳ್ಳಾರಿಗೆ ಈ ಸಮ್ಮೇಳನದ ಅವಕಾಶ ದೊರೆತಿದೆ. 1926, 1938 ಮತ್ತು 1958ರಲ್ಲಿ ಬಳ್ಳಾರಿಯಲ್ಲಿ ಈ ಸಮ್ಮೇಳನ ನಡೆದಿತ್ತು.
ಕಳೆದ ಎರಡು ದಿನಗಳಲ್ಲಿ ಮಂಡ್ಯದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ 3 ಲಕ್ಷ ಜನರು ಆಗಮಿಸುವ ಮೂಲಕ ದಾಖಲೆ ನಿರ್ಮಿಸಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ – ಜನ ಮರುಳೋ-ಜಾತ್ರೆ ಮರುಳೋ ಎಂದಾಗಬಾರದು!
ಸಮ್ಮೇಳನದ ಅಂಗವಾಗಿ 450 ಪುಸ್ತಕ ಮಳಿಗೆಗಳನ್ನು ತೆರೆಯಲಾಗಿದೆ. ನಾಡಿನ ವಿವಿಧ ಭಾಗಗಳಿಂದ ಆಗಮಿಸಿರುವ ಸಾಹಿತಿಗಳು, ಸಾಹಿತ್ಯಾಸಕ್ತರು ಪುಸ್ತಕ ಮಳಿಗೆಗಳಿಗೆ ಭೇಟಿ ನೀಡಿ ತಮಗಿಷ್ಟವಾದ ಪುಸ್ತಕಗಳ ಖರೀದಿಯಲ್ಲಿ ಬಿಸಿಯಾಗಿದ್ದಾರೆ. ಇನ್ನು, ಪುಸ್ತಕ ಮಳಿಗೆಗಳ ಮಾಲೀಕರು ಕೂಡ ಉತ್ತಮ ವ್ಯಾಪಾರದಿಂದಾಗಿ ಸಂತೋಷಗೊಂಡಿದ್ದಾರೆ.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶನಿವಾರ ತೆರೆ ಬೀಳಲಿದೆ. ಸಂಜೆ 4ಕ್ಕೆ ನಡೆಯಲಿರುವ ಸಮಾರೋಪ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀ ಸಾನಿದ್ಯ ವಹಿಸಲಿದ್ದಾರೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ.ಗೊ.ರು.ಚನ್ನಬಸಪ್ಪ, ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ ಉಪಸ್ಥಿತರಲಿದ್ದಾರೆ.
