ಬಳ್ಳಾರಿ | 7 ತಿಂಗಳ ಮಗು, ಪತ್ನಿಗೆ ಸುತ್ತಿಗೆಯಿಂದ ಹೊಡೆದು ಕೊಂದ ಕ್ರೂರಿ

Date:

ಗಣಿನಾಡು ಬಳ್ಳಾರಿಯಲ್ಲಿ ಪತ್ನಿ ಮೇಲಿನ ಅನುಮಾ‌ನಕ್ಕಾಗಿ 7 ತಿಂಗಳ ಮಗು ಹಾಗೂ ಮಡದಿ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದ ಕ್ರೂರಿಯೊಬ್ಬ ವಿಕೃತಿ ಮೆರೆದಿದ್ದಾನೆ‌. ಬಳ್ಳಾರಿಯ ಅಂದ್ರಾಳ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

- Advertisement -

ಆರೋಪಿ ಹೊನ್ನೂರಪ್ಪ (28) ತನ್ನ ಪತ್ನಿ ರಾಜೇಶ್ವರಿ(24) ಹಾಗೂ ಏಳು ತಿಂಗಳ ಮಗಳು ಆಶ್ವಿನಿಯನ್ನು ಹತ್ಯೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಪತ್ನಿಯ ಶೀಲದ ಬಗ್ಗೆ ಹೊನ್ನೂರಪ್ಪ ಅನುಮಾನ ವ್ಯಕ್ತಪಡಿಸುತ್ತಿದ್ದನಂತೆ. ಅಲ್ಲದೆ, ಕಿರಿಯ ಮಗಳು ತನ್ನ ಸಂತಾನವಲ್ಲವೆಂದು ಆಗಾಗ ಜಗಳ ಮಾಡುತ್ತಿದ್ದನಂತೆ. ಇದೇ ಅನುಮಾನಗಳು ದಂಪತಿ ನಡುವೆ ಆಗಾಗ್ಗೆ ಕಲಹಕ್ಕೆ ಕಾರಣವಾಗುತ್ತಿದ್ದವು. ಈಗ ಕ್ಷುಲಕ ಕಾರಣಕ್ಕೆ ಕೌಟುಂಬಿಕ ಕಲಹ ಪ್ರಾರಂಭವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಸುದ್ದಿ ತಿಳಿದ ಕೂಡಲೇ ಎಪಿಎಂಸಿ ಠಾಣೆ ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರಕರಣದ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ್ ಅವರು, “ಕೊಲೆ ಆರೋಪಿ ಹೊನ್ನೂರಪ್ಪನನ್ನು ಬಂಧಿಸಲಾಗಿದೆ. ಆರೋಪಿ ಮದುವೆಯಾದ ಪ್ರಾರಂಭದಿಂದಲೂ ಹೆಂಡತಿಯ ಮೇಲೆ ಅನುಮಾನ ಪಡುತ್ತಿದ್ದ. ಈ ಹಿಂದೆ ಹಲವು ಬಾರಿ ಶೀಲಶಂಕಿಸಿ ಜಗಳದ ಘಟನೆಗಳು ನಡೆದಾಗ, ಅಕ್ಕಪಕ್ಕದ ಮನೆಯವರು ಬಂದು ಜನಗಳನ್ನು ಬಿಡಿಸಿದ್ದಾರೆ. ಇದೇ ರೀತಿ ಜಗಳ ಶುರುವಾಗಿ ಈಗ ಕೊಲೆಯಲ್ಲಿ ಅಂತ್ಯವಾಗಿದ್ದು, ಆರೋಪಿಯ ತಾಯಿ ಲಕ್ಷ್ಮಿ ಕೂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ” ಎಂದರು.

ಇದನ್ನೂ ಓದಿದ್ದೀರಾ? ಯಾದಗಿರಿ | ಹಾಸ್ಟೆಲ್ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ದೂರು ದಾಖಲಿಸಿದ ಮೃತಳ ಅಣ್ಣ ಸುರೇಶ್, ಯಾವುದೇ ವರದಕ್ಷಿಣೆಯ ವಿಷಯ ಪ್ರಸ್ತಾಪ ಮಾಡಿಲ್ಲವೆಂದು ಮಾಹಿತಿ ನೀಡಿದ್ದಾರೆ.

ಸದ್ಯ ಆರೋಪಿ ಹೊನ್ನೂರಪ್ಪನನ್ನ ಬಂಧಿಸಿರುವ ಎಪಿಎಂಸಿ ಪೊಲೀಸರು ತನಿಖೆ ಮುಂದುವರಿಸಿದ್ದು, ಕೊಲೆಯ ಅಸಲಿ ಕಾರಣದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ಸೌದಿ ಅರಾಮ್ಕೋ ತೈಲ ಘಟಕ, ವಾಯುನೆಲೆ ಮೇಲೆ ಕ್ಷಿಪಣಿ ದಾಳಿ: ಹೌತಿಗಳ ಪ್ರತಿಪಾದನೆ

ಸೌದಿ ಅರೇಬಿಯಾದ ಪ್ರಮುಖ ತೈಲ ಸಂಸ್ಥೆ ಸೌದಿ ಅರಾಮ್ಕೋ (Saudi Aramco)...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...