ಬಳ್ಳಾರಿ | ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸುವಂತೆ ಒತ್ತಾಯ

Date:

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಹಾಗೂ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದ ಅತಿಥಿ ಶಿಕ್ಷಕರು ಬಳ್ಳಾರಿ ಜಿಲ್ಲೆಯ ಕುರುಗೋಡುನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

- Advertisement -

ರಾಜ್ಯದಲ್ಲಿ ಸುಮಾರು 43,159, ಅತಿಥಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಮಕ್ಕಳ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರನ್ನು ಪ್ರತಿ ವರ್ಷ ಸರ್ಕಾರ ನೇಮಕಮಾಡಿಕೊಳ್ಳುತ್ತಿದೆ. ಹತ್ತನ್ನೇರಡು ವರ್ಷಗಳಿಂದ ಕಡಿಮೆ ವೇತನಕ್ಕೆ ದುಡಿಯುತ್ತಿದ್ದಾರೆ. ವೇತನ ಹೆಚ್ಚಿಸಬೇಕು, ಸೇವಾ ಭದ್ರತೆ ಒದಗಿಸಬೇಕು ಎಂಬುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದೇವೆ. ಆದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ನಮಗೆ ಯಾವುದೇ ತರಹದ ಉದ್ಯೋಗ ಭದ್ರತೆಯಾಗಲಿ, ಕನಿಷ್ಠ ವೇತನವಾಗಲಿ ಇಲ್ಲ. ಕೇವಲ 9, 10 ತಿಂಗಳು ಸೇವೆ ಸಲ್ಲಿಸಿದ ನಂತರ ಬೇರೆ ಕೆಲಸಕ್ಕೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೇವಲ ಪ್ರಾಥಮಿಕ ಶಾಲೆಯಲ್ಲಿ10,000 ರೂ. ಮತ್ತು ಪ್ರೌಢಶಾಲೆಗಳಲ್ಲಿ 10,500 ರೂ. ವೇತನ ಸಿಗುತ್ತಿದೆ. ಈ ಹಣದಿಂದ ಜೀವನ ನಿರ್ವಹಣೆ ತುಂಬಾ ಕಷ್ಟಕರವಾಗಿದೆ. ಪ್ರತಿ ವರ್ಷ ಅತಿಥಿ ಶಿಕ್ಷಕರನ್ನು ಸರ್ಕಾರವು ತಮಗೆ ಬೇಕಾದ ಸಮಯದಲ್ಲಿ ನೇಮಕ ಮಾಡಿಕೊಂಡು ಮಾರ್ಚ್ 31ಕ್ಕೆ ಬಿಡುಗಡೆ ಮಾಡುತ್ತದೆ. ಈ ಪದ್ಧತಿಯಿಂದ ನಮಗೆ ಉದ್ಯೋಗವಿಲ್ಲದೆ ತೊಂದರೆಗೆ ಒಳಗಾಗುತ್ತೇವೆ” ಎಂದು ಅಳಲು ತೋಡಿಕೊಂಡಿದ್ದಾರೆ.

“ಸರ್ಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸದೇ ಇರುವುದರಿಂದ ಮಾನಸಿಕವಾಗಿ ನೊಂದಿದ್ದೇವೆ. ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಹೋರಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಅತಿಥಿ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಸ್ ರಾಮಪ್ಪ , ಗಂಗಾ , ಮಾರೆಣ್ಣ , ಎರ್ರಿ ಸ್ವಾಮಿ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಬಿಜೆಪಿ ಮಾಜಿ ಶಾಸಕ ಸೋಮಲಿಂಗಪ್ಪ ವಿರುದ್ಧ ಜಮೀನು ಒತ್ತುವರಿ, ದೌರ್ಜನ್ಯ ಆರೋಪ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ...

ಬಳ್ಳಾರಿ | 7 ತಿಂಗಳ ಮಗು, ಪತ್ನಿಗೆ ಸುತ್ತಿಗೆಯಿಂದ ಹೊಡೆದು ಕೊಂದ ಕ್ರೂರಿ

ಗಣಿನಾಡು ಬಳ್ಳಾರಿಯಲ್ಲಿ ಪತ್ನಿ ಮೇಲಿನ ಅನುಮಾ‌ನಕ್ಕಾಗಿ 7 ತಿಂಗಳ ಮಗು ಹಾಗೂ...

ಬಳ್ಳಾರಿ | ವಿದ್ಯಾರ್ಥಿನಿಗೆ ವಂಚಿಸಿ ದೌರ್ಜನ್ಯ: ಉಪನ್ಯಾಸಕನ ವಿರುದ್ಧ ಪೋಕ್ಸೊ ದಾಖಲು

ಬಳ್ಳಾರಿ ಜಿಲ್ಲೆಯ ಖಾಸಗಿ ಕಾಲೇಜಿನ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯ...

ಬಳ್ಳಾರಿ | ಕುಡಿಯುವ ನೀರು ಕೊಡದಿದ್ರೆ ಅನಿರ್ದಿಷ್ಟವಾಗಿ ಹೋರಾಟ: ಡಿವೈಎಫ್ಐ

ಬಳ್ಳಾರಿ ತಾಲೂಕಿನ ಕೊಳಗಲ್‌ ಗ್ರಾಮದಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ಡಿವೈಎಫ್ಐ ಸಂಘಟನೆ...