ಬೆಳ್ತಂಗಡಿ | ತೆಕ್ಕಾರಿನ ಶಾಂತಿ, ಸೌಹಾರ್ದತೆಗೆ ಧಕ್ಕೆ; ದೇವಸ್ಥಾನಕ್ಕೆ ಮುಸ್ಲಿಂ ಒಕ್ಕೂಟ ಪತ್ರ

Date:

Advertisements

ಬೆಳ್ತಂಗಡಿಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಬಹಿರಂಗವಾಗಿ ತೆಕ್ಕಾರಿನ ಮುಸ್ಲಿಮರ ಬಗ್ಗೆ ಅವಹೇಳನಕಾರಿ, ಮಾನಹಾನಿ ಪದಗಳನ್ನು ಬಳಸಿ ಕೋಮುಪ್ರಚೋದನಾಕಾರಿ ಭಾಷಣಕ್ಕೆ ಅವಕಾಶ ಮಾಡಿಕೊಟ್ಟಿರುವುದರ ವಿರುದ್ದ ಗ್ರಾಮದ ಮುಸ್ಲಿಮರು ದೇವಸ್ಥಾನದ ಆಡಳಿತ ಮಂಡಳಿಗೆ ತಮ್ಮ ನಿಲುವು ವ್ಯಕ್ತಪಡಿಸಲು ಕೋರಿ ಪತ್ರ ಬರೆದಿದ್ದಾರೆ.

ಕಳೆದ ಶನಿವಾರ (ಮೇ.3)ರಂದು ರಾತ್ರಿ 9.30ರ ಸಮಯದಲ್ಲಿ ಬ್ರಹ್ಮಕಲಶೋತ್ಸವದ ವೇದಿಕೆ ಕಾರ್ಯಕ್ರಮದಲ್ಲಿ ಊರಿನ ಮುಸ್ಲಿಮರನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುವ ಭಾಷಣ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ದೇವಸ್ಥಾನದ ಪರವಾಗಿ ಖುದ್ದಾಗಿ ಮಸೀದಿಗಳಿಗೆ ಬಂದು ಕಾರ್ಯಕ್ರಮಕ್ಕೆ ಬರುವಂತೆ ಆಮಂತ್ರಣ ನೀಡಲಾಗಿತ್ತು. ಆಮಂತ್ರಣ ಸ್ವೀಕರಿಸಿ, ತೆಕ್ಕಾರಿನ ಸೌಹಾರ್ಧತೆಯನ್ನು ಇನ್ನಷ್ಟು ಉತ್ತೇಜಿಸುವ ದೃಷ್ಟಿಯಿಂದ ಕಾರ್ಯಕ್ರಮಕ್ಕೆ ಗ್ರಾಮದ ಮುಸ್ಲಿಂ ಬಾಂಧವರು ಭಾಗವಹಿಸಿರುತ್ತೇವೆ. ಆದರೆ ಅದೇ ವೇದಿಕೆಯಲ್ಲಿ ಗ್ರಾಮದ ಮುಸ್ಲಿಮರ ಕುರಿತು ಅವಹೇಳನಕಾರಿ ಭಾಷಣ ಮಾಡಿರುವುದು ಮುಸ್ಲಿಂ ಸಮುದಾಯಕ್ಕೆ ನೋವುಂಟು ಮಾಡಿದೆ ಎಂದು ಮುಸ್ಲಿಂ ಮುಖಂಡರು ಆರೋಪಿಸಿದ್ದಾರೆ.

ಊರಿನ ಹಿಂದೂ-ಮುಸ್ಲಿಂ ಸಮುದಾಯಗಳು ಅಣ್ಣತಮ್ಮಂದಿರಂತೆ ಬಾಳಬೇಕಾಗಿದ್ದ ಸಾಮರಸ್ಯವನ್ನು ಹಾಳು ಮಾಡಲಾಗಿದೆ. ಬ್ರಹ್ಮಕಲಶೋತ್ಸವದ ಸಂದರ್ಭ ಭಕ್ತಾಧಿಗಳಿಗೆ ಅನುಕೂಲವಾಗುವಂತೆ ವಾಹನ ಪಾರ್ಕಿಂಗ್, ಸಭಾ ವೇದಿಕೆಗೆ, ನೀರಿನ ವ್ಯವಸ್ಥೆಗೆ, ಅನ್ನದಾನದ ವ್ಯವಸ್ಥೆಗೆ ಮುಸ್ಲಿಮರು ತಮ್ಮ ಜಮೀನಿನಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ. ಟ್ಯೂಬ್ ಲೈಟ್ ಹಾಗೂ ಡೀಸೆಲ್ ಕದ್ದ ಬಗ್ಗೆ ಸ್ಪಷ್ಟವಾದ ಸಾಕ್ಷಿ ಇಲ್ಲದೆ ಇಡೀ ಮುಸ್ಲಿಂ ಸಮುದಾಯದ ಮೇಲೆ ಗಂಭೀರ ಆರೋಪ ಹೊರಿಸಿದ್ದು, ಈ ಬಗ್ಗೆ ಗೋಪಾಲಕೃಷ್ಣ ಆಡಳಿತ ಮಂಡಳಿಯು ತಮ್ಮ ನಿಲುವು ಸ್ಪಷ್ಟಪಡಿಸುವಂತೆ ಒಕ್ಕೂಟ ಪತ್ರದ ಮೂಲಕ ಒತ್ತಾಯಿಸಿದೆ.

Advertisements

ಇದನ್ನೂ ಓದಿ: ಸೌಜನ್ಯ ಪ್ರಕರಣ | ಬೆಳ್ತಂಗಡಿಯಲ್ಲಿ 346 ಅಸಹಜ, ನಿಗೂಢ ಸಾವಾಗಿರುವ ಮಾಹಿತಿಯಿದೆ: ಚೇತನ್ ಅಹಿಂಸಾ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X