ಬೆಳ್ತಂಗಡಿ | ಮೂರುಗೋಳಿಯ ಪ್ರವೀಣ್ ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜತೆಗಿದ್ದು, ಹಿರಿಯ ಅಧಿಕಾರಿಗಳು ಹೇಳಿದಂತೆ ಪ್ರಕರಣ ಭೇದಿಸುವ ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ ಮೂರುಗೋಳಿಯ ಪ್ರವೀಣ್ ಎಂ ಅವರಿಗೆ ಈ ಬಾರಿ ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು.

ಎಪ್ರಿಲ್ 2ರಂದು ಕರ್ನಾಟಕ ಪೊಲೀಸ್ ಧ್ವಜಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು.

ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮೂರುಗೋಳಿ ನಿವಾಸಿ ಅಣ್ಣು ದೇವಾಡಿಗ ಮತ್ತು ಬೇಬಿ ದೇವಾಡಿಗ ದಂಪತಿಯ ಪ್ರಥಮ ಪುತ್ರ ಪ್ರವೀಣ್ ಎಂ ಅವರು 2002ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡರು.

Advertisements

ಮೊದಲ ಕರ್ತವ್ಯವನ್ನು ಮಂಗಳೂರು ಬಂದರು ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ್ದು, ಬಳಿಕ ಬೆಳ್ತಂಗಡಿ ವೃತ್ತ ಕಚೇರಿ, ದಕ್ಷಿಣ ಕನ್ನಡ ಜಿಲ್ಲಾ ಅಪರಾಧ ಪತ್ತೆ ದಳ(ಡಿಸಿಐಬಿ), ಬಂಟ್ವಾಳ ಡಿವೈಎಸ್‌ಪಿ ವಿಶೇಷ ಅಪರಾಧ ದಳ, ವೇಣೂರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಸದ್ಯ ದಕ್ಷಿಣ ಕನ್ನಡ ಸೈಬರ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಎನ್‌ಐಎ ಅಧಿಕಾರಿಗಳ ಜತೆ ಕರ್ತವ್ಯ:

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಸಂದರ್ಭದಲ್ಲಿ ಎನ್‌ಐಎ ತನಿಖಾ ದಳದೊಂದಿಗೆ 6 ತಿಂಗಳ ಕರ್ತವ್ಯ ನಿರ್ವಹಿಸಿದ್ದು, ಬಳಿಕ ಬಿಹಾರದಲ್ಲಿ ಮೋದಿ ಹತ್ಯೆ ಯತ್ನ ಪ್ರಕರಣದಲ್ಲಿ ಎನ್‌ಐಎ ಜತೆ 3 ತಿಂಗಳು ಕರ್ತವ್ಯ ನಿರ್ವಹಿಸಿದ್ದಾರೆ. ಈ ನಡುವೆ ಎರಡೂ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಜೊತಗೆ ಕರ್ತವ್ಯ ನಿರ್ವಹಿಸಿದ್ದಾರೆ.

ಹಲವು ಗಂಭೀರ ಪ್ರಕರಣದಲ್ಲಿ ದಕ್ಷತೆಯಿಂದ ಸೇವೆ

ಶರತ್ ಮಾಡಿವಾಳ ಹತ್ಯೆ ಪ್ರಕರಣ, ಫರಂಗಿಪೇಟೆ ಡಬಲ್ ಮರ್ಡರ್, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, 9 ದೇವಾಲಯ ಕಳವು ಪ್ರಕರಣ, ಬೆಳ್ತಂಗಡಿ ಬಂಗಾಡಿ ಬಸದಿ ಸೇರಿ 9 ದೇವಾಲಯ ಕಳ್ಳತನ ಪ್ರಕರಣ, ವಿಟ್ಲ ಕರ್ನಾಟಕ ಬ್ಯಾಂಕ್ ದರೋಡೆ, ಪುತ್ತೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ನಡೆದ ದರೋಡೆ, ವಗ್ಗ ಮನೆ ದರೋಡೆ ಪ್ರಕರಣ, ವಿಟ್ಲ ಸಿಂಗಾರಿ ಬೀಡಿ ನಕಲಿ ಇಡಿ ಅಧಿಕಾರಿಗಳ ಸೋಗಿನಲ್ಲಿ ದರೋಡೆ, ಫರಂಗಿಪೇಟೆ ದಿಗಂತ್ ನಾಪತ್ತೆ ಪ್ರಕರಣ ಸೇರಿದಂತೆ ಇತರ ಗಂಭೀರ ಪ್ರಕರಣದಲ್ಲಿ ವಿಶೇಷ ತಂಡದ ಜತೆ ಪ್ರಮುಖ ಪಾತ್ರ ವಹಿಸಿ ಪ್ರಕರಣ ಭೇದಿಸಿ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಟ್ಲ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿ ಬಂಧನಕ್ಕೆ ಆಗ್ರಹ

ನಗದು ಪುರಸ್ಕಾರ ಮತ್ತು ಪ್ರಶಸ್ತಿ: ಪ್ರವೀಣ್ ಅಪರಾಧ ಪತ್ತೆ ಪ್ರಕರಣದ ಕರ್ತವ್ಯಕ್ಕೆ ಸುಮಾರು 57 ನಗದು ಪುರಸ್ಕಾರ ಹಾಗೂ ಇತರ ಪ್ರಶಸ್ತಿಗಳು ಲಭಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X