ಬೆಳ್ತಂಗಡಿ | ಕಾರಿನಲ್ಲೇ ಹೆರಿಗೆ: ಆಪದ್ಬಾಂಧವನಾಗಿ ತಾಯಿ-ಮಗುವಿನ ಪ್ರಾಣ ರಕ್ಷಿಸಿದ ಯುವಕ ಜಮಾಲ್

Date:

Advertisements

ಅಗತ್ಯ ಕೆಲಸದ ನಿಮಿತ್ತ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜಮಾಲ್ ಕರಾಯ ಅವರು ಹೆರಿಗೆ ಬೇನೆಯಿಂದ ಚಡಪಡಿಸುತ್ತಿದ್ದ ಮಹಿಳೆಯೊಬ್ಬರಿಗೆ ಸ್ಪಂದಿಸುವ ಮೂಲಕ ಅವರ ಕಾರಿನಲ್ಲೇ ಮಹಿಳೆಗೆ ಹೆರಿಗೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಜು. 1 ರ. ವೈದ್ಯರ ದಿನದಂದು ನಡೆದಿದೆ.

ಜಮಾಲ್ ಅವರ ಕಾರಿನಲ್ಲೇ ತನ್ನ ಚೊಚ್ಚಲ ಗಂಡು ಮಗುವಿಗೆ ಜನನವಾಗಿರುವ ಮಹಿಳೆ ಮತ್ತು ಮಗು ಇಬ್ಬರೂ ಆರೋಗ್ಯವಂತರಾಗಿದ್ದು, ಬೆಳ್ತಂಗಡಿ ಸಾರ್ವಜನಿಕ ಸಮುದಾಯ ಆಸ್ಪತ್ರೆಯಲ್ಲಿ ಆರೈಕೆಯಲ್ಲಿದ್ದಾರೆ.

ಸುನ್ನತ್‌ಕೆರೆ ನಿವಾಸಿ ಇಕ್ಬಾಲ್ ಎಂಬುವವರ ಪತ್ನಿ ತುಂಬು ಗರ್ಭಿಣಿ ಸಫಿಯಾ ಅಳದಂಗಡಿ ಅವರು ತೀವ್ರವಾದ ಹೆರಿಗೆ ನೋವಿನೊಂದಿಗೆ ರಸ್ತೆ ಬದಿ‌ನಿಂತುಕೊಂಡಿದ್ದರು. ಇದನ್ನು ಗಮನಿಸಿದ ಜಮಾಲ್ ಅವರು ತನ್ನ ಕಾರನ್ನು ತಿರುಗಿಸಿ ಬಂದು ವಿಚಾರಿಸಿದರು. ದಂಪತಿಯ ಸಂಕಷ್ಟ ಅರಿತ ಅವರು ತನ್ನ ಪ್ರಯಾಣ ಮೊಟಕುಗೊಳಿಸಿ ತಕ್ಷಣ ಮಹಿಳೆಯನ್ನು ತನ್ನ ಕಾರಿನಲ್ಲಿ ಕುಳ್ಳಿರಿಸ ಆಸ್ಪತ್ರೆಯತ್ರ ಪ್ರಯಾಣ ಬೆಳೆಸಿದರು. ಆದರೆ ಅದಾಗಲೇ ಸಫಿಯಾ ಅವರು ಕಾರಿನಲ್ಲೇ ಪ್ರಸವಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ದೇವನಹಳ್ಳಿ ರೈತ ಹೋರಾಟ: ‘ರೈತರ ಬಗ್ಗೆ ಸಿಎಂ ಕರುಣೆ ತೋರಿಸಬೇಕು’ ಎಂದ ನಟಿ ರಮ್ಯಾ

ಪ್ರಸವದ ವೇಳೆ ಪತಿ ಇಕ್ಬಾಲ್ ಅವರು ಮತ್ತು ಜಮಾಲ್ ಅವರು ಮಹಿಳೆಗೆ ತುರ್ತು ಸ್ಪಂದಿಸಿದ್ದು ಬಳಿಕ ಆಸ್ಪತ್ರೆಗೆ ಸೇರಿಸಿದ್ದಾರೆ. ಒಂದುವೇಳೆ ಜಮಾಲ್ ಆ ಸಂದರ್ಭದಲ್ಲಿ ಬರದೇ ಹೋಗುತ್ತಿದ್ದರೆ ಅನಾಹುತ ಆಗುವ ಸಂಭವವ ಕೂಡ ಇತ್ತು. ಅಂತೂ ವೈದ್ಯರ ದಿನದಂದು ಸಫಿಯಾ ಪಾಲಿಗೆ ತನ್ನ ಪತಿ ಮತ್ತು ಜಮಾಲ್ ಅವರೇ ವೈದ್ಯರಂತೆ ಬಂದು ಪ್ರಾಣ‌ ಕಾಪಾಡಿದ್ದಂತೂ‌ ಸತ್ಯ. ಇದೀಗ ಜಮಾಲ್ ಅವರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X