ಬೆಳ್ತಂಗಡಿ | ಕೋಮು ದ್ವೇಷದ ಹೇಳಿಕೆ; ವಸಂತ್ ಗಿಳಿಯಾರ್ ವಿರುದ್ಧ ದೂರು ದಾಖಲು

Date:

Advertisements

ಜಾತಿ, ಧರ್ಮಗಳ ನಡುವೆ ದ್ವೇಷ ಹುಟ್ಟುವಂತಹ ವಿವಾದಾತ್ಮಕ ಹೇಳಿಕೆ ನೀಡಿ ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ವಸಂತ್ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಅವರು ನೀಡಿದ ದೂರಿನನ್ವಯ ಸೆಕ್ಷನ್ 196(1)(a) ಹಾಗೂ 353(2) ಬಿ ಎನ್ ಎಸ್ ನಡಿ ದೂರು ದಾಖಲಿಸಲಾಗಿದೆ.

ಬೆಂಗಳೂರಿನಲ್ಲಿ ನಡೆದ ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ವಸಂತ್ ಗಿಳಿಯಾರ್, “ಬೆಳ್ತಂಗಡಿ ಭಾಗದಲ್ಲಿ ಮಿಷನರಿಗಳ ಪ್ರಭಾವದಿಂದ ಹಿಂದೂಗಳ ತುಳಸಿಕಟ್ಟೆಯನ್ನು ಒಡೆದು ಅಲ್ಲಿ ಶಿಲುಬೆಗಳನ್ನು ಇಡಲಾಗಿತ್ತು. ಗ್ರಾಮಾಭಿವೃದ್ಧಿ ಯೋಜನೆ ಬಂದ ಬಳಿಕ ಶಿಲುಬೆಗಳನ್ನು ತೆಗೆದು ಮತ್ತೆ ತುಳಸಿಕಟ್ಟೆಗಳನ್ನು ಮರು ಸ್ಥಾಪಿಸಲಾಗಿದೆ” ಎಂಬ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಬಡವರ ಕೆಲಸದಲ್ಲಿ ಉದಾಸೀನತೆ ತೋರುವ ಅಧಿಕಾರಿಗಳ ಶೀಘ್ರ ವರ್ಗಾವಣೆ : ಶಾಸಕ ಅಶೋಕ್ ರೈ

ಈ ಹೇಳಿಕೆಯಿಂದ ಧರ್ಮಗಳ ನಡುವೆ ವೈಷಮ್ಯ ಬೆಳೆದು ಸಾಮಾಜಿಕ ಘರ್ಷಣೆಗೆ ಕಾರಣವಾಗುತ್ತದೆ ಎಂದು ಶೇಖರ್ ಲಾಯಿಲ ತಮ್ಮ ದೂರಿನಲ್ಲಿ ವಿವರಿಸಿದ್ದು, ಅದರಂತೆ ಪ್ರಕರಣ ದಾಖಲಿಸಿರುವುದಾಗಿ ಬೆಳ್ತಂಗಡಿ ಪೊಲೀಸರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X