ಬೆಳ್ತಂಗಡಿ | ಜಮಾಅತೆ ಇಸ್ಲಾಮಿ ಹಿಂದ್‌ ಸಮಾಜ ಸೇವಾ ಘಟಕದ ಕಚೇರಿ ಉದ್ಘಾಟನೆ

Date:

Advertisements

ಬೆಳ್ತಂಗಡಿಯ ಲೋಬೋ ಟವರ್ಸ್ ನ ಮೊದಲನೇ ಮಹಡಿಯಲ್ಲಿ ಜಮಾತೆ ಇಸ್ಲಾಮಿ ಹಿಂದ್ ಸಮಾಜ ಸೇವಾ ಘಟಕವನ್ನು ಬಿ.ಸಿ.ಸಿ.ಐ ಅಧ್ಯಕ್ಷರಾದ ರೊನಾಲ್ಡ್ ಲೋಬೋರವರು ಸಸಿಗೆ ನೀರು ಹಾಕುವುದರ ಮೂಲಕ ಕಚೇರಿಯನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಕೀಲರಾದ ಅಬಿನ್ ಪ್ರಾನ್ಸಿಸ್, ಶೇಕ್ ಕುಂಞಿ, ಸಮಾಜ ಸೇವಕರಾದ ಆನ್ಸಾರ್ ರವರು ಶುಭ ಹಾರೈಸಿದರು. ತರುವಾಯ ಸಮಾಜ ಸೇವೆ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

ಅಬ್ದುಲ್ ಗಫೂರ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೊನೆಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಜಿಲ್ಲಾ ಸಂಚಾಲಕರಾದ ಅಬ್ದುಲ್ ಕರೀಮ್ ಅವರು ಸಮಾರೋಪ ನುಡಿಗಳನ್ನಡುತ್ತಾ, “ಸಮಾಜ ಸೇವಾ ಘಟಕವು ಬೇರೆ ಬೇರೆ ಕಡೆಗಳಲ್ಲಿ ಕಾರ್ಯವನ್ನು ನಿರ್ವಹಿಸುತ್ತಿದ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಜನ ಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಈ ಕಚೇರಿಯನ್ನು ತೆರೆಯಲಾಗಿದೆ. ಸಾರ್ವಜನಿಕರು ಈ ಕಚೇರಿಯ ಪ್ರಯೋಜನವನ್ನು ಪಡೆದುಕೊಳ್ಳಬೇಕು” ಎಂದು ಹೇಳಿದರು.

ಇದನ್ನು ಓದಿದ್ದೀರಾ? ದ್ವೇಷ, ಸುಳ್ಳಿನ ವಿರುದ್ಧ ಕಾನೂನು ತರುವುದಕ್ಕೂ ಮುನ್ನ ಸರ್ಕಾರ ಸಮಗ್ರವಾದ ಚರ್ಚೆ ನಡೆಸಲಿ: ಶಿವಸುಂದರ್

ಕಾರ್ಯಕ್ರಮದಲ್ಲಿ ಅಯ್ಯೂಬ್ ಅಲದಂಗಡಿ, ಮೊಹಮ್ಮದ್ ಶಾಫಿ, ಅಬ್ದುಸ್ಸಲಾಂ ಸಿ ಎಚ್ ಉಳ್ಳಾಲ, ಸರ್ಫರಾಝ್ ತೀರ್ಥಹಳ್ಳಿ, ಅಸ್ಲಂ ಉಪ್ಪಿನಂಗಡಿ, ಸಲಾಂ ಪಕ್ಕಲಡ್ಕ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 08 01 at 11.22.58 AM
ಜಿಹ 1
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X