ಬೆಳ್ತಂಗಡಿ | ಹೊಸ ಸ್ಥಳದಲ್ಲಿ ಸಿಗದ ಅಸ್ಥಿಪಂಜರ; ತನಿಖೆ ಇನ್ನಷ್ಟು ತೀವ್ರ

Date:

Advertisements

ಧರ್ಮಸ್ಥಳ ಗ್ರಾಮದಲ್ಲಿ ಬಾಲಕಿ ಶವ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ (ಆ.8) ಧರ್ಮಸ್ಥಳ ‌ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಸಮೀಪದ ಹೊಸ ಸ್ಥಳದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಯಾವುದೇ ಅಸ್ಥಿಪಂಜರ ದೊರೆತಿಲ್ಲ‌ ಎಂದು ಉನ್ನತ ‌ಮೂಲಗಳು‌ ಖಚಿತ ಪಡಿಸಿವೆ.

ಇಂದು ನಡೆದ ಕಾರ್ಯಾಚರಣೆಯಲ್ಲಿ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಎಸ್‌ಐಟಿ ಎಸ್.ಪಿ. ಜಿತೇಂದ್ರ ಕುಮಾ‌ರ್ ದಯಾಮ ಮತ್ತಿತರ ಅಧಿಕಾರಿಗಳು ಜತೆಯಲ್ಲಿದ್ದರು. ಈ ತಂಡದ ಜತೆಗೆ 10-15 ಕಾರ್ಮಿಕರು ಕಾಡಿನೊಳಗೆ ತೆರಳಿದ್ದಾರೆ. ಶಾಲಾ ಬ್ಯಾಗ್ ಸಮೇತ ಬಾಲಕಿ ಶವವನ್ನು ಹೂತಿಡಲಾಗಿದೆ ಎಂಬ ಆರೋಪದ ಬಗ್ಗೆ ಆಧಾರಿತವಾಗಿ, ಮಧ್ಯಾಹ್ನ 1 ಗಂಟೆಯಿಂದ ಸಂಜೆ 5.50 ರವರೆಗೆ ಶೋಧ ನಡೆಯಿತು. ಆದರೆ, ಈ‌ ಜಾಗದಲ್ಲಿ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಧರ್ಮಸ್ಥಳ | ಯೂಟ್ಯೂಬರ್‌ಗಳ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಪ್ರೆಸ್ ಕ್ಲಬ್ ಕೌನ್ಸಿಲ್ ಆಗ್ರಹ

Advertisements

ದೂರುದಾರ ಮೊದಲ ದಿನ ನೇತ್ರಾವತಿ ಸ್ನಾನ ಘಟ್ಟದ ಬಯಲಿನಲ್ಲಿ ತೋರಿಸಿದ್ದ 13ನೇ ಜಾಗದಲ್ಲಿ ಶೋಧ ಕಾರ್ಯ ಬಾಕಿ ಇದೆ. ಅಲ್ಲಿ ನೆಲ ಅಗೆಯುವ ಕಾರ್ಯ ಶುಕ್ರವಾರವೂ ನಡೆದಿಲ್ಲ.

ದೂರುದಾರ ಮೊದಲ ದಿನ ತೋರಿಸಿದ್ದ 13 ಜಾಗ ಹಾಗೂ ಅ ಬಳಿಕ ತೋರಿಸಿದ್ದ ಎರಡು ಜಾಗಗಳ ಪೈಕಿ ಇದುವರೆಗೆ 14 ಕಡೆ ಕಾಡಿನೊಳಗೆ ಶೋಧ ನಡೆಸಲಾಗಿದೆ. ದೂರುದಾರನ್ನು ನೇತ್ರಾವತಿ ನದಿ ಪಕ್ಕದ ಬಂಗ್ಲೆಗುಡ್ಡೆಯಲ್ಲಿ ತೋರಿಸಿದ್ದ 6ನೇ ಪಾಯಿಂಟ್‌ನಲ್ಲಿ ನೆಲದಡಿ ಮೃತದೇಹದ ಅವಶೇಷ ಪತ್ತೆಯಾಗಿದ್ದರೆ, ಆತ ಕಾಡಿನೊಳಗೆ ತೋರಿಸಿದ್ದ, ಗುರುತು ಮಾಡದ ಇನ್ನೊಂದು ಜಾಗದಲ್ಲಿ ಮೃತದೇಹದ ತಲೆಬುರುಡೆ, ಬೆನ್ನುಮೂಳೆ ಸೇರಿದಂತೆ 100ಕ್ಕೂ ಹೆಚ್ಚು ಮೂಳೆಗಳು ಸಿಕ್ಕಿದ್ದವು. ಇನ್ನೂ ಉಳಿದ 12 ಜಾಗಗಳಲ್ಲಿ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ; ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ

ತನಿಖೆಗೆ ಹೊಸ ತಿರುವು

ಇದೇ ವೇಳೆ, ಇಚಿಲಂಪಾಡಿಯ ನಿವಾಸಿ ಜಯಂತ್ ಟಿ. ಎಂಬವರು ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಆಗಮಿಸಿದ್ದು ಗಮನಾರ್ಹ. ಈ ಹಿಂದೆ ಅವರು ಧರ್ಮಸ್ಥಳದಲ್ಲಿ ಶವವನ್ನು ಹೂತು‌ ಹಾಕುತ್ತಿರುವುದನ್ನು‌ ನೋಡಿದ್ದೇನೆ ಎಂದು ಮಾಹಿತಿ‌ ನೀಡಿದ್ದರು. ಈ ಹಿನ್ನೆಲೆ ಅವರಿಗೆ ಎಸ್‌ಐಟಿ ಅಧಿಕಾರಿಗಳಿಂದ ಕಚೇರಿಗೆ ಬಂದು ಮಾಹಿತಿ ನೀಡುವಂತೆ ತಿಳಿಸಿದರು. ಅದರಂತೆ ಇಂದು ಅಧಿಕಾರಿಗಳು ಅವರಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದಾರೆ. ಜುಲೈ 4ರಂದು ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X