ಬೇಲೂರು | ಹೆಬ್ಬಾಳು ಏತ ನೀರಾವರಿ ಯೋಜನೆಗೆ ಬಿಜೆಪಿ ಅಭ್ಯರ್ಥಿ ಅಡ್ಡಿ; ಲಿಂಗೇಶ್ ಆರೋಪ

Date:

ಹೆಬ್ಬಾಳು ಏತ ನೀರಾವರಿ ಯೋಜನೆ ಅನುಷ್ಠಾನಗೊಂಡರೆ ನನಗೆ ಹೆಸರು ಬರುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಎಚ್.ಕೆ ಸುರೇಶ್ ಏತ ನೀರಾವರಿ ಯೋಜನೆಯನ್ನು ತಡೆಹಿಡಿಸಿದರು ಎಂದು ಶಾಸಕ, ಜೆಡಿಎಸ್‌ ಕೆ.ಎಸ್ ಲಿಂಗೇಶ್ ಆರೋಪಿಸಿದ್ದಾರೆ

- Advertisement -

ಬೇಲೂರಿನಲ್ಲಿ ಶನಿವಾರ ಮತಯಾಚನೆ ಹಾಗೂ ರೋಡ್ ಶೋ ನಡೆಸಿ ಮಾತನಾಡಿದ ಅವರು, “ಯೋಜನೆಗೆ ₹194 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ಯಾಬಿನೆಟ್‌‌‌ನಲ್ಲಿ ಅನುಮೋದನೆ ಕೊಡಿಸುವ ಭರವಸೆ ನೀಡಿದ್ದರು. ಆದರೆ, ಬಿಜೆಪಿ ಅಭ್ಯರ್ಥಿ ಅದನ್ನು ತಡೆಹಿಡಿಸಿದರು. ನಾನು ಶಾಸಕನಾಗಿ ಪುನಃ ಆಯ್ಕೆಯಾದರೆ ಇನ್ನು ಮೂರು ತಿಂಗಳಲ್ಲಿ ಈ ನೀರಾವರಿ ಯೋಜನೆಯನ್ನು ಜಾರಿಗೆ ತರಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕಾಡಾನೆ ದಾಳಿಗೆ ಬಲಿಯಾದವರಿಗೆ ₹25 ಲಕ್ಷ ಪರಿಹಾರ ನೀಡುವಂತೆ ವಿಧಾನಸಭೆಯಲ್ಲಿ ನಾನು ಧ್ವನಿ ಎತ್ತಿದ್ದೆ. ಪರಿಣಾಮವಾಗಿ ₹7 ಲಕ್ಷವಿದ್ದ ಪರಿಹಾರವನ್ನು ₹15 ಲಕ್ಷಕ್ಕೆ ಹೆಚ್ಚಿಸಲಾಯಿತು” ಎಂದರು.

“₹1800 ಕೋಟಿ ಅನುದಾನದಲ್ಲಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದ್ದು, ಪಟ್ಟಣದ ಹೋಳೆಬೀದಿಯ ಯುಜಿಡಿ ಭಸ್ಮಿಕರಣ ಹೊಂಡವನ್ನು ₹14 ಕೋಟಿ ವೆಚ್ಚದಲ್ಲಿ ನವೀಕರಣ ಗೊಳಿಸಲಾಗುತ್ತಿದೆ. ನಗರೋತ್ಥಾನ ಯೋಜನೆಯಲ್ಲಿ ಪಟ್ಟಣಕ್ಕೆ ₹8 ಕೋಟಿ ಅನುದಾನ ನೀಡಲಾಗಿದೆ” ಎಂದರು.

“ಹೊಳೆಬೀದಿ ಅಭಿವೃದ್ದಿ ಪಡಿಸುವ ಉದ್ದೇಶದಿಂದ ಸೇತುವೆ ನಿರ್ಮಿಸಲು ₹24 ಕೋಟಿ ಟೆಂಡರ್ ಅಗಿದೆ. ಈ ರಸ್ತೆಗೆ ಕನಕ ಮಾರ್ಗ ಎಂದು ಹೆಸರಿಟ್ಟು, ಕನಕ ಪುತ್ಥಳಿ ನಿರ್ಮಿಸಲಾಗುವುದು. 10 ಸಮುದಾಯದವರಿಗೆ ಸಮುದಾಯ ಭವನ ನಿರ್ಮಿಸಲು ನಿವೇಶನ ಮತ್ತು ಅನುದಾನ ನೀಡಿದ್ದೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಹಾಸನ | ಶೇ.80ರಷ್ಟು ಮಂದಿ ಅಭಿವೃದ್ಧಿ ನೋಡಿ ಮತ ನೀಡುತ್ತಾರೆ: ಪ್ರೀತಂ ಗೌಡ

“ಕ್ಷೇತ್ರದ ಜನತೆ ಮತ್ತೊಮ್ಮೆ ನನ್ನನ್ನು ಆಯ್ಕೆ ಮಾಡಿ ಉಳಿದ ಕೆಲಸಗಳನ್ನು ಪೂರೈಸಲು ಅವಕಾಶ ಕೊಟ್ಟು, ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಲು ಸಹಕರಿಸಿ” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ತೊ.ಚ.ಅನಂತಸುಬ್ಬರಾಯ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಸುಭಾನ್, ಮುಖಂಡರಾದ ತಜ್ಮಲ್ ಪಾಷ, ಸಿ.ಎಚ್.ಲೋಕೇಗೌಡ, ಹಗರೆ ದಿಲೀಪ್, ಶ್ರೀನಿಧಿ, ಈಶ್ವರಪ್ರಸಾದ್, ಸಂಗಮ್, ಅದ್ದೂರಿ ಕುಮಾರ್, ಭಾರತಿ ಅರುಣ್, ಲತಾಮಂಜೇಶ್ವರಿ, ಅಬ್ದುಲ್ ಖಾದರ್, ಸತೀಶ್, ನಾಗೇಶ್ ಯಾದವ್, ಪುರಸಭಾ ಸದಸ್ಯರಾದ ಜಗದೀಶ್, ಪುಟ್ಟಸ್ವಾಮಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...