ಬೇಲೂರು | 20 ಸೀಟುಗಳಿಂದ ರಾಜ್ಯದ ಲೂಟಿಯಲ್ಲಿ ಪಾಲು ಬಯಸುತ್ತಿದೆ ಜೆಡಿಎಸ್‌: ಮೋದಿ

Date:

ಕಳೆದ ಕೆಲವು ತಿಂಗಳಿನಿಂದ ಹಲವು ಬಾರಿ ಕರ್ನಾಟಕ್ಕೆ ಬಂದಿದ್ದೇನೆ. ಹಲವು ಜಿಲ್ಲೆಗಳಿಗೂ ಭೇಟಿ ನೀಡಿದ್ದೇನೆ. ನನ್ನ ಕರ್ನಾಟಕ ಪ್ರವಾಸದ ಮೂಲಕ ಕಂಡುಕೊಂಡಿರುವ ವಿಚಾರವೆಂದರೆ, ಈ ಬಾರಿಯೂ ಬಹುಮತದ ಬಿಜೆಪಿ ಸರ್ಕಾರ ಅಧಿಕಾರಕ್ಕೇರಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.

ಹಾಸನ ಜಿಲ್ಲೆಯ ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, “ಮೊದಲಿಗೆ, ಕರ್ನಾಟಕದ ಮಠ ಪರಂಪರೆ ಮತ್ತು ಇಲ್ಲಿನ ಸಂತ ಶ್ರೇಷ್ಠರಿಗೆ ಗೌರವ ನಮನ ಸಲ್ಲಿಸುತ್ತೇನೆ. ಆದಿಚುಂಚನಗಿರಿ ಮಠಕ್ಕೂ ಗೌರವ ನಮನಗಳು ಹಾಗೂ ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಗೆ ಗೌರವದ ಶ್ರದ್ಧಾಂಜಲಿ ಸಲ್ಲಿಸುತ್ತೇನೆ” ಎಂದರು.

“ಕೆಲವು ದಶಕಗಳ ಕಾಲದ ಅನೈತಿಕ ಘಟ ಬಂಧನ, ಅಸ್ಥಿರ ಸರ್ಕಾರಗಳ ಆಡಳಿತ ಕೊನೆಗೊಳಿಸಬೇಕೆಂದು ಈ ಬಾರಿ ಕರ್ನಾಟಕದ ಜನತೆ ನಿಶ್ಚಯಿಸಿದ್ದಾರೆ. ದೇಶದ ಯಾವೆಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್‌ ಆಡಳಿತದಲ್ಲಿದೆ  ಅಲ್ಲಿನ ಕಾಂಗ್ರೆಸ್‌ ನಾಯಕರ ನಡುವಿನ ಒಳಜಗಳ ಯಾವಾಗಲೂ ಸುದ್ದಿಯಲ್ಲಿದೆ. ಇದರಿಂದ ರಾಜಸ್ಥಾನ ಮತ್ತು ಛತ್ತೀಸ್‌ಘಡ್‌ ರಾಜ್ಯಗಳ ಜನತೆ ಸಂಪೂರ್ಣ ಭ್ರಮನಿರಸವಾಗಿದ್ದು, ಅಲ್ಲಿನ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಆ ರಾಜ್ಯಗಳಲ್ಲಿ ಕಾಂಗ್ರೆಸ್‌ ನೀಡಿದ ಎಲ್ಲ ಗ್ಯಾರಂಟಿಗಳು ಸುಳ್ಳಿನ ಕಂತೆಗಳಾಗಿವೆ” ಎಂದು ನರೇಂದ್ರ ಮೋದಿ ಹಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಾಂಗ್ರೆಸ್‌ನಲ್ಲಿ ಆಂತರಿಕ ಗುದ್ದಾಟ ಪರಸ್ಪರ ಹೋರಾಟಗಳು ಎಂದಿಗೂ ಇದ್ದದ್ದೇ. ಆದರೆ, ಜೆಡಿಎಸ್‌ ಕೂಡ ಅಧಿಕಾರದ ಕನಸು ಕಾಣುತ್ತಿದೆ. ರಾಜ್ಯದಲ್ಲಿ 15ರಿಂದ 20ಸೀಟುಗಳನ್ನು ಪಡೆದುಕೊಂಡರೆ ಸಾಕು ರಾಜ್ಯದ ಲೂಟಿಯಲ್ಲಿ ಪಾಲು ಪಡೆಯಬಹುದೆಂದು ತವಕಿಸುತ್ತಿದೆ” ಎಂದರು.

“ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ಮೇಲ್ನೋಟಕ್ಕೆ ವಿರೋಧಿಗಳಂತೆ ಕಚ್ಚಾಡುತ್ತಾರೆ. ಆದರೆ, 2018ರ ಚುನಾವಣೆ ಸಂದರ್ಭದಲ್ಲಿ ಪರಸ್ಪರ ಒಬ್ಬರನ್ನೊಬ್ಬರು ದೂರುತ್ತಾ, ತೆಗಳುತ್ತಾ ಆಪಾದನೆಗಳನ್ನು ಮಾಡುತ್ತಿದ್ದರು. ಆದರೆ, 2018ರ ಚುನಾವಣೆಗೆ ಮುನ್ನವೇ ಜೆಡಿಎಸ್‌ ಕಾಂಗ್ರೆಸ್‌ ನಾಯಕರು ಒಬ್ಬರಿಗೊಬ್ಬರು ಕೈ ಕೈ ಕುಲುಕಿಕೊಂಡು ಹೊಂದಾಣಿಕೆ ಮಾಡಿಕೊಂಡಿದ್ದರು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಖಜಾನೆ ತುಂಬಿದ್ದು, ದುಡ್ಡು ಕೊಟ್ಟು ಜನರನ್ನು ಕರೆತರುತ್ತದೆ: ಮಲ್ಲಿಕಾರ್ಜುನ ಖರ್ಗೆ

“ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೇಲ್ನೋಟಕ್ಕೆ ಈ ರೀತಿ ಕಚ್ಚಾಡುತ್ತಾರೆ. ಆದರೆ, ಅವರಿಗೆ ಒಳ ಒಪ್ಪಂದಗಳಿರುತ್ತವೆ. ಸಂಸತ್ತಿನಲ್ಲಿಯೂ ಕೂಡ ಯಾವುದೇ ವಿಚಾರಗಳ ಕುರಿತು ಚರ್ಚಿಸುವ ಹೊರತಾಗಿ ಒಬ್ಬರಿಗೊಬ್ಬರು ಬೆಂಬಲಿಸಿಕೊಂಡು ಕೂರುತ್ತಾರೆ. ಹಾಗಾಗಿ ನೀವು ಜೆಡಿಎಸ್‌ಗೆ ನೀಡುವ ಮತಗಳು ಕಾಂಗ್ರೆಸ್‌ನ ಖಾತೆಗೆ ಹೋಗುತ್ತವೆ” ಎಂದರು. “ಕಾಂಗ್ರೆಸ್‌ಗೆ ಮತ ನೀಡುವುದಾದರೆ ಅದು ಕರ್ನಾಟಕದ ಅಭಿವೃದ್ಧಿಗೆ ಬ್ರೇಕ್‌ ಹಾಕಿದಂತೆ. ಕರ್ನಾಟಕದ ವಿಕಾಸಕ್ಕೆ ಹಿನ್ನಡೆ ಉಂಟಾದಂತೆ. ಕರ್ನಾಟಕದ ಜನತೆ ನಮ್ಮ ಭವಿಷ್ಯದ ಭಾಗ್ಯವನ್ನು ಕಾಂಗ್ರೆಸ್‌ ಕೈಗೆ ಇಡುವಂತೆಯೂ ಇಲ್ಲ. ಏಕೆಂದರೆ ಈ ಮೊದಲು ಕಾಂಗ್ರೆಸ್‌, ಜನತೆಯ ಹಕ್ಕಿನ ಪ್ರತಿಯೊಂದು ರೂಪಾಯಿಯಲ್ಲಿ 85 ಪೈಸೆ ಲೂಟಿಮಾಡುತ್ತಿತ್ತು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಸಿಪಿಐಎಂ ಚುನಾವಣಾ ಪ್ರಣಾಳಿಕೆ ಬಿಡುಗಡೆ; ಭಾರತ ಉಳಿಸುವಂತೆ ಮತದಾರರಲ್ಲಿ ಮನವಿ

ಕಡುಭ್ರಷ್ಟ ಮತ್ತು ಕೋಮುವಾದಿ ಬಿಜೆಪಿ ಮತ್ತದರ ಮಿತ್ರ ಪಕ್ಷಗಳನ್ನು ಈ ಲೋಕಸಭಾ...

ಸಂವಿಧಾನ ರಕ್ಷಣೆಗೆ ಸ್ಲಂ ಜನರ ಮತ; ಬೈಕ್ ರ‍್ಯಾಲಿ ಸಮಾರೋಪ

ಜಾತಿ ಜನಗಣತಿ ಮೂಲಕ ಸಂಪತ್ತನ್ನು ಬಡವರಿಗೆ ಹಂಚಿಕೆ ಮಾಡುವುದೇ ಕಾಂಗ್ರೇಸ್‌ನ ಗುರಿ....

ಬೆಂಗಳೂರು | ಅಗ್ನಿ ಅವಘಡ: ₹5 ಕೋಟಿ ಮೌಲ್ಯದ ಬಟ್ಟೆ, 40 ಬೈಕ್ ಭಸ್ಮ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್​ ಕಂಟ್ರಿ ರೋಡ್​​ನಲ್ಲಿರುವ ಟಿಂಬರ್​ ಯಾರ್ಡ್​ನಲ್ಲಿ...

ಬೀದರ್‌ | ಒಳಮೀಸಲಾತಿ ಹೆಸರಿನಲ್ಲಿ ಬಿಜೆಪಿ ಮೋಸದಾಟ : ಬಸವರಾಜ ಕೌತಾಳ್

ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಒಳಮೀಸಲಾತಿ ಹೆಸರಿನಲ್ಲಿ ದಲಿತರೊಂದಿಗೆ ಮೋಸದಾಟ ಆಡುತ್ತಿದೆ ಎಂದು...