ಬೇಲೂರು | 20 ಗಂಟೆ ಕಳೆದರೂ ಅಧಿಕಾರಿಗಳ ನಿರ್ಲಕ್ಷ್ಯ; ರಸ್ತೆಗೆ ಬಿದ್ದಿದ್ದ ಮರ ತೆರವುಗೊಳಿಸಿದ ಗ್ರಾಮಸ್ಥರು

Date:

ರಸ್ತೆಗೆ ಉರುಳಿ ಬಿದ್ದಿದ್ದ ಮರವನ್ನು ತೆರವುಗೊಳಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ವಹಿಸಿದ್ದರಿಂದ ಕೊನೆಗೆ ಗ್ರಾಮಸ್ಥರೇ ಖುದ್ದಾಗಿ ಮರ ಕಡಿಯುವ ಯಂತ್ರದ ನೆರವಿನಿಂದ ತೆರವುಗೊಳಿಸಿದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

- Advertisement -

ಬೇಲೂರಿನ ಬಿಕ್ಕೋಡು ಹೋಬಳಿ, ಬಿಕ್ಕೋಡು, ಕೆಸಗೋಡು ಆಲೂರು ಮುಖ್ಯ ರಸ್ತೆಯ ಹೊಳಲು ಗಡಿಯ ಗ್ರೀನ್ ಹುಡ್ ಎಸ್ಟೇಟ್ ಬಳಿ ಬೃಹತ್ ಕಾಡು ಜಾತಿಯ ಮರವು ಪೂರ್ತಿ ರಸ್ತೆಗೆ ಅಡ್ಡಲಾಗಿ ಬಿದ್ದು ವಾಹನ ಸವಾರರಿಗೆ ತೀವ್ರತರದ ತೊಂದರೆ ಉಂಟಾಗಿತ್ತು. ಮರ ಬಿದ್ದಿದ್ದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಹಾಸನದಿಂದ ಬೆಳಗ್ಗೆ ಆಲೂರು ಕೆಸಗೋಡು ಬಿಕ್ಕೋಡು ಮಾರ್ಗವಾಗಿ ಬರುವ ಸಾರಿಗೆ ಸಂಸ್ಥೆ ಬಸ್ ಕೆಸಗೋಡಿನಿಂದ ವಾಪಸ್ ಹೋಗಿದ್ದು ಬಿಕ್ಕೋಡು ಮತ್ತು ಸುತ್ತಮುತ್ತಲ ಪ್ರಯಾಣಿಕರಿಗೆ ತೀವ್ರ ಥರದ ತೊಂದರೆಯಾಗಿತ್ತು.

ಸುಮಾರು 20 ಗಂಟೆ ಕಳೆದರೂ ಸಂಬಂಧಪಟ್ಟ ಪಿಡಬ್ಲ್ಯೂಡಿ ಇಲಾಖೆ, ಅರಣ್ಯ ಇಲಾಖೆಯಾಗಲೀ, ಸ್ಥಳೀಯ ಪಂಚಾಯತ್ ಆಗಲಿ ಇತ್ತ ಕಡೆ ಗಮನ ಹರಿಸದಿರುವುದನ್ನು ಕಂಡ ಸ್ಥಳೀಯ ಕೆಸಗೋಡಿನ ಲೋಕೇಶ್ ಮತ್ತು ತಂಡದವರು ಸೇರಿ, ಮರ ತುಂಡರಿಸುವ ಯಂತ್ರದ ನೆರವಿನಿಂದ ಮರವನ್ನು ಕೊಯ್ದು ರಸ್ತೆಯ ಇಕ್ಕೆಲಗಳಿಗೆ ಸರಿಸಿ ವಾಹನಗಳು ಓಡಾಡಲು ಅನುವು ಮಾಡಿಕೊಟ್ಟರು.

ಮರ ತೆರವು ಕಾರ್ಯಾಚರಣೆಯಲ್ಲಿ ಕೆಸಗೋಡು ಶಾಲಾ ಶಿಕ್ಷಕ ಸಂಪತ್, ಗೋವಿಂದ, ಪಾಪ, ಕಿಟ್ಟಿ, ಹೊಳಲು ಯೋಗೇಂದ್ರ ಗೌಡ, ಪಂಚಾಯ್ತಿ ನೂತನ ಇನ್ನೂ ಮುಂತಾದವರು ಸಹಕರಿಸಿದರು. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿ, ಧನ್ಯವಾದ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...

ಸೆ.18ಕ್ಕೆ ಗಣಪತಿ ಶೋಭಾಯಾತ್ರೆ: ಶಾಂತವಾಗಿರುವ ಟಿ ನರಸೀಪುರದಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸುವ ಕುತಂತ್ರ?

ಟಿ ನರಸೀಪುರದಲ್ಲಿ ಸೆ.18ರಂದು ಗಣಪತಿ ಶೋಭಾಯಾತ್ರೆ ನಡೆಯಲಿದ್ದು, ಮಸೀದಿ ಬಳಿ ಮೆರವಣಿಗೆ...