ಬೇಲೂರು | 20 ಗಂಟೆ ಕಳೆದರೂ ಅಧಿಕಾರಿಗಳ ನಿರ್ಲಕ್ಷ್ಯ; ರಸ್ತೆಗೆ ಬಿದ್ದಿದ್ದ ಮರ ತೆರವುಗೊಳಿಸಿದ ಗ್ರಾಮಸ್ಥರು

Date:

Advertisements

ರಸ್ತೆಗೆ ಉರುಳಿ ಬಿದ್ದಿದ್ದ ಮರವನ್ನು ತೆರವುಗೊಳಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ವಹಿಸಿದ್ದರಿಂದ ಕೊನೆಗೆ ಗ್ರಾಮಸ್ಥರೇ ಖುದ್ದಾಗಿ ಮರ ಕಡಿಯುವ ಯಂತ್ರದ ನೆರವಿನಿಂದ ತೆರವುಗೊಳಿಸಿದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಬೇಲೂರಿನ ಬಿಕ್ಕೋಡು ಹೋಬಳಿ, ಬಿಕ್ಕೋಡು, ಕೆಸಗೋಡು ಆಲೂರು ಮುಖ್ಯ ರಸ್ತೆಯ ಹೊಳಲು ಗಡಿಯ ಗ್ರೀನ್ ಹುಡ್ ಎಸ್ಟೇಟ್ ಬಳಿ ಬೃಹತ್ ಕಾಡು ಜಾತಿಯ ಮರವು ಪೂರ್ತಿ ರಸ್ತೆಗೆ ಅಡ್ಡಲಾಗಿ ಬಿದ್ದು ವಾಹನ ಸವಾರರಿಗೆ ತೀವ್ರತರದ ತೊಂದರೆ ಉಂಟಾಗಿತ್ತು. ಮರ ಬಿದ್ದಿದ್ದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು.

ಹಾಸನದಿಂದ ಬೆಳಗ್ಗೆ ಆಲೂರು ಕೆಸಗೋಡು ಬಿಕ್ಕೋಡು ಮಾರ್ಗವಾಗಿ ಬರುವ ಸಾರಿಗೆ ಸಂಸ್ಥೆ ಬಸ್ ಕೆಸಗೋಡಿನಿಂದ ವಾಪಸ್ ಹೋಗಿದ್ದು ಬಿಕ್ಕೋಡು ಮತ್ತು ಸುತ್ತಮುತ್ತಲ ಪ್ರಯಾಣಿಕರಿಗೆ ತೀವ್ರ ಥರದ ತೊಂದರೆಯಾಗಿತ್ತು.

Advertisements

ಸುಮಾರು 20 ಗಂಟೆ ಕಳೆದರೂ ಸಂಬಂಧಪಟ್ಟ ಪಿಡಬ್ಲ್ಯೂಡಿ ಇಲಾಖೆ, ಅರಣ್ಯ ಇಲಾಖೆಯಾಗಲೀ, ಸ್ಥಳೀಯ ಪಂಚಾಯತ್ ಆಗಲಿ ಇತ್ತ ಕಡೆ ಗಮನ ಹರಿಸದಿರುವುದನ್ನು ಕಂಡ ಸ್ಥಳೀಯ ಕೆಸಗೋಡಿನ ಲೋಕೇಶ್ ಮತ್ತು ತಂಡದವರು ಸೇರಿ, ಮರ ತುಂಡರಿಸುವ ಯಂತ್ರದ ನೆರವಿನಿಂದ ಮರವನ್ನು ಕೊಯ್ದು ರಸ್ತೆಯ ಇಕ್ಕೆಲಗಳಿಗೆ ಸರಿಸಿ ವಾಹನಗಳು ಓಡಾಡಲು ಅನುವು ಮಾಡಿಕೊಟ್ಟರು.

ಮರ ತೆರವು ಕಾರ್ಯಾಚರಣೆಯಲ್ಲಿ ಕೆಸಗೋಡು ಶಾಲಾ ಶಿಕ್ಷಕ ಸಂಪತ್, ಗೋವಿಂದ, ಪಾಪ, ಕಿಟ್ಟಿ, ಹೊಳಲು ಯೋಗೇಂದ್ರ ಗೌಡ, ಪಂಚಾಯ್ತಿ ನೂತನ ಇನ್ನೂ ಮುಂತಾದವರು ಸಹಕರಿಸಿದರು. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿ, ಧನ್ಯವಾದ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X