ಬೆಂಗಳೂರು | ಮದುವೆ ಹಿಂದಿನ ದಿನ ವರ ಪರಾರಿ; ಅರ್ಧ ಕೆಜಿ ಚಿನ್ನ, ಬೆಂಜ್‌ ಕಾರಿಗೆ ಬೇಡಿಕೆ

Date:

Advertisements

ವರದಕ್ಷಿಣೆ ನೀಡಿಲ್ಲವೆಂಬ ಕಾರಣಕ್ಕೆ ಮದುವೆ ಹಿಂದಿನ ದಿನ ವರ ಹಾಗೂ ಆತನ ಕುಟುಂಬ ಮದುವೆ ಮನೆಯಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಹೀಗೆಂದು ಆರೋಪಿಸಿ ಯುವತಿಯ ತಂದೆ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿದೆ.

ವರ ಪ್ರೇಮ್‌ಚಂದ್‌ ಹಾಗೂ ವಧು ಫ್ರಾನ್ಸ್‌ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ವರ್ಷ ಬೆಂಗಳೂರಿನಲ್ಲಿ ನಿಶ್ಚಿತಾರ್ಥವೂ ಆಗಿತ್ತು. ಮಾ.2ರಂದು ಮದುವೆ ದಿನ ನಿಗದಿಯಾಗಿತ್ತು. ಇದೆಲ್ಲದರ ನಡುವೆ ಫೆಬ್ರವರಿಯಲ್ಲಿ ಯುರೋಪಿಯನ್‌ ಸಂಸ್ಕೃತಿ ಎಂದು ಪುಸಲಾಯಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮದುವೆ ಸಮಾರಂಭಕ್ಕಾಗಿ ಗಾಂಧಿನಗರದ ರೈಲ್ವೆ ಎನ್‌ಕ್ಲೇವ್‌ನ ನಂದಿ ಕ್ಲಬ್‌ ಬುಕ್‌ ಮಾಡಲಾಗಿತ್ತು. ಮಾ.1ರ ರಾತ್ರಿ ವರನ ಪೋಷಕರು ಯುವತಿಯ ತಂದೆಗೆ ಫೋನ್‌ ಮಾಡಿ ₹50 ಲಕ್ಷ ನಗದು, ಅರ್ಧ ಕೆಜಿ ಚಿನ್ನ ಹಾಗೂ ಬೆಂಜ್‌ ಕಾರನ್ನು ವರದಕ್ಕಿಣೆಯಾಗಿ ಕೊಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಯುವತಿಯ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Advertisements

ಇದನ್ನೂ ಓದಿ: ಬೆಂಗಳೂರು | ಕೆಪಿಸಿಎಲ್ 622 ಹುದ್ದೆಗಳಿಗೆ ಪರೀಕ್ಷೆ ನಡೆದರೂ ನೇಮಕಾತಿಯಾಗಿಲ್ಲ; ಅರ್ಹರಿಗೆ ನೇಮಕಾತಿ ಪತ್ರ ನೀಡಲು ಆಗ್ರಹ

ಈಗಾಗಲೇ ಮದುವೆಗಾಗಿ ₹25 ಖರ್ಚಾಗಿದೆ. ಮತ್ತೂ ಕೊಡಲು ಸಾಧ್ಯವಿಲ್ಲ ಎಂದು ಯುವತಿಯ ತಂದೆ ಹೇಳಿದ್ದಾರೆ. ಆಗ ವರ ಹಾಗೂ ಆತನ ಪೋಷಕರು ರಾತ್ರೋರಾತ್ರಿ ಮದುವೆ ಮನೆಯಿಂದ ಪರಾರಿಯಾಗಿದ್ದಾರೆ ಎಂದು ಹೇಳಿದ್ದಾರೆ.

ವಧುವಿನ ತಂದೆಯ ದೂರು ಆಧರಿಸಿ ಪ್ರೇಮ್‌ಚಂದ್‌, ಆತನ ತಂದೆ ಶಿವಕುಮಾರ್‌, ತಾಯಿ ರಾಧಾ ಮತ್ತು ಸ್ನೇಹಿತ ಮಂಜು ಭರತ್‌ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X