ಬೆಂಗಳೂರು | ಮಹಿಳಾ ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ; ಆರೋಪಿ ಬಂಧನ

Date:

Advertisements

ಸಿಹಿ ತಿನಿಸು ಅಂಗಡಿಯೊಂದರ ಮಹಿಳಾ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ, ಮಹಿಳೆಯರ ವಿಡಿಯೋ ಚಿತ್ರೀಕರಿಸುತ್ತಿದ್ದ ಆಘಾತಕಾರಿ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.

ಈ ಕುರಿತು ಸಂತ್ರಸ್ತ ಮಹಿಳೆಯೊಬ್ಬರು ಇನ್​ಸ್ಟಾಗ್ರಾಂನಲ್ಲಿ ಸಂದೇಶ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏಪ್ರಿಲ್ 25 ರಂದು ರಾತ್ರಿ 8 ಗಂಟೆ ಸುಮಾರಿಗೆ ಮಹಿಳೆಯು ಅಂಗಡಿಯ ಮೊದಲ ಮಹಡಿಯ ಶೌಚಾಲಯಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

“ಶೌಚಾಲಯದ ಒಳ ಪ್ರವೇಶಿಸಿದಾಗ, ಮುಂಭಾಗದ ಗೋಡೆ ಗಟ್ಟಿಯಾಗಿಲ್ಲದಿರುವುದು ಗಮನಕ್ಕೆ ಬಂತು. ಗೋಡೆಯ ಮೇಲ್ಭಾಗದಲ್ಲಿ ಫೈಬರ್‌ ಗ್ಲಾಸ್ ಫಲಕ ಮತ್ತು ಮುಖದ ಎತ್ತರಕ್ಕೆ ಮರದ ಹಲಗೆಗಳು ಇರುವುದನ್ನು ಗಮನಿಸಿದೆ. ಇದರಿಂದ ಅನುಮಾನಗೊಂಡು ಗೋಡೆಯಲ್ಲಿದ್ದ ಹಲಗೆಗಳನ್ನು ಪರಿಶೀಲಿಸಿದಾಗ ಇನ್ನೊಂದು ಬದಿಯಲ್ಲಿ ಫೋನ್ ಅಲ್ಲಾಡುತ್ತಿರುವುದು ಕಾಣಿಸಿತು. ಇದರಿಂದ, ವಿಡಿಯೋ ಚಿತ್ರೀಕರಿಸುತ್ತಿರುವುದನ್ನು ದೃಢಪಡಿಸಿಕೊಂಡೆ” ಎಂಬುದಾಗಿ ಮಹಿಳೆ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

Advertisements

ಬಳಿಕ ಸಂತ್ರಸ್ತೆ ತನ್ನ ಸ್ನೇಹಿತೆಗೆ ವಿಚಾರ ತಿಳಿಸಿದ್ದು, ಅಂಗಡಿ ಸಿಬ್ಬಂದಿ ಬಳಿ ಪ್ರಶ್ನಿಸಿದ್ದಾರೆ. ʼಆಡಳಿತ ಮಂಡಳಿಯು ಆರಂಭದಲ್ಲಿ ಸಿಸಿಟಿವಿ ದೃಶ್ಯ ಪರಿಶೀಲಿಸಲು ಹಿಂಜರಿಯಿತಾದರೂ ನಂತರ ಪರಿಶೀಲಿಸಲು ಸಮ್ಮತಿಸಿತು. ಭದ್ರತಾ ಸಿಬ್ಬಂದಿಯೊಬ್ಬ ನಿರ್ಬಂಧಿತ ಪ್ರದೇಶ ಪ್ರವೇಶಿಸುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ನಂತರ ಹಿಂಬಾಗಿಲಿನಿಂದ ಮತ್ತೊಬ್ಬ ಉದ್ಯೋಗಿ ಹೊರಬರುತ್ತಿರುವುದು ಕಾಣಿಸಿತುʼ ಎಂದು ಸಂತ್ರಸ್ತೆ ತಿಳಿಸಿದ್ದಾರೆ.

ಮಹಿಳೆಯ ಪ್ರಕಾರ, ರಾತ್ರಿ 9.10ರ ಸುಮಾರಿಗೆ ಪೊಲೀಸರು ಬಂದು ಆರೋಪಿಗಳನ್ನು ಬಂಧಿಸಿದರು. ಆರೋಪಿಯು ಆರಂಭದಲ್ಲಿ ಕೃತ್ಯ ಎಸಗಿದ್ದನ್ನು ಒಪ್ಪಿರಲಿಲ್ಲ. ತೀವ್ರ ವಿಚಾರಣೆಯ ನಂತರ ತಪ್ಪೊಪ್ಪಿಕೊಂಡಿದ್ದಾನೆ. ವೀಡಿಯೊಗಳನ್ನು ಡಿಲೀಟ್‌ ಮಾಡುವುದಾಗಿ ತಿಳಿಸಿದ್ದಾನೆ ಮತ್ತು ಕ್ಷಮೆ ಯಾಚಿಸಿದ್ದಾನೆ.

ಇದನ್ನೂ ಓದಿ: ಬೆಂಗಳೂರು | ಅನಿಲ ಸೋರಿಕೆಯಿಂದ ಹೊತ್ತಿ ಉರಿದ ಮನೆ: ಇಬ್ಬರು ಸಜೀವ ದಹನ

ಮಹಿಳೆ ನೀಡಿದ್ದ ದೂರಿನ ಆಧಾರದ ಮೇಲೆ ಕೋರಮಂಗಲ ಠಾಣಾ ಪೊಲೀಸರು ಉತ್ತರ ಭಾರತ ಮೂಲದ ಅಮೋಧ್ ಎಂಬಾತನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದ್ದು, ವಿಡಿಯೋ ರಿಟ್ರೀವ್​​ಗೆ ಕ್ರಮವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X