ಬೆಂಗಳೂರು | ಆಸ್ತಿ ತೆರಿಗೆ ಪಾವತಿಗೆ ಮಾ.31 ಕಡೆ ದಿನ; ತಪ್ಪಿದಲ್ಲಿ ಡಬಲ್ ದಂಡ

Date:

Advertisements

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬಾಕಿ ಇರುವ ಆಸ್ತಿ ತೆರಿಗೆ ಪಾವತಿಗೆ ಮಾ.31 ಕಡೆ ದಿನವಾಗಿದ್ದು, ಪಾವತಿ ಮಾಡದೇ ಇದ್ದಲ್ಲಿ ಡಬಲ್ ಹಣವನ್ನು ದಂಡದ ರೂಪದಲ್ಲಿ ಪಾವತಿಸಬೇಕಿದೆ ಎಂದು ಬಿಬಿಎಂಪಿ ಆಯುಕ್ತ ಮುನೀಶ್‌ ಮೌದ್ಗಿಲ್‌ ತಿಳಿಸಿದ್ದಾರೆ.

ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್‌ ಮೌದ್ಗಿಲ್‌, ”ಬಿಬಿಎಂಪಿಯು 2024-25ನೇ ಸಾಲಿನಲ್ಲಿ ಅಂದಾಜು ₹5,210 ಕೋಟಿ ಆಸ್ತಿ ತೆರಿಗೆ ಸಂಗ್ರಹ ಗುರಿ ಹೊಂದಿತ್ತು. ಆದರೆ, ಈವರೆಗೆ ₹4604 ಕೋಟಿ (ಶೇ 88.36) ವಸೂಲಾಗಿದೆ. ಆರ್ಥಿಕ ವರ್ಷಾಂತ್ಯಕ್ಕೆ 15 ದಿನಗಳಷ್ಟೇ ಬಾಕಿ ಉಳಿದಿದ್ದು, ಬಾಕಿ ಆಸ್ತಿ ತೆರಿಗೆ ವಸೂಲಿಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕು” ಎಂದು ಸೂಚನೆ ನೀಡಿದರು.

ಏಪ್ರಿಲ್‌ 1ರ ಬಳಿಕ ಆಸ್ತಿ ತೆರಿಗೆ ಎಷ್ಟು ಬಾಕಿ ಇದೆಯೋ ಅಷ್ಟೇ ದಂಡವನ್ನೂ ಆಸ್ತಿ ಮಾಲಿಕರು ಪಾವತಿಸಬೇಕಾಗಿದೆ. ಜೊತೆಗೆ ವಾರ್ಷಿಕ 15% ಬಡ್ಡಿ ದರವೂ ಇರಲಿದೆ. ಈ ಹಿಂದೆ ಆಸ್ತಿ ತೆರಿಗೆಯ ದುಪ್ಪಟ್ಟು ಮೌಲ್ಯದ ದಂಡ ಪಾವತಿಸಬೇಕಿತ್ತು. ಆದರೆ ಸರ್ಕಾರ ಇದನ್ನು ಕಡಿತಗೊಳಿಸಿ ಆಸ್ತಿ ತೆರಿಗೆಯ ಸಮಾನ ಹಣವನ್ನು ದಂಡವಾಗಿ ಕಟ್ಟಲು ಸೂಚಿಸಿದೆ. ಅಂದರೆ ₹100 ಆಸ್ತಿ ತೆರಿಗೆ ಬಾಕಿ ಇದ್ದರೆ, ಇದರ ಮೇಲೆ ಮತ್ತೆ ₹100 ದಂಡ ಬೀಳಲಿದೆ ಎಂದು ಬಿಬಿಎಂಪಿ ತಿಳಿಸಿದೆ.

Advertisements

ಇದನ್ನೂ ಓದಿ: ಚಿತ್ರದುರ್ಗ | ಕೃಷಿ ಬೆಲೆ ಆಯೋಗದ ಬೆಂಗಳೂರು ವಿಭಾಗದ ಸಬೆ, ಚಿತ್ರದುರ್ಗದಿಂದ ರೈತ ಪ್ರತಿನಿಧಿಗಳು.

ಪ್ರಸ್ತುತ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 1,82,467 ಆಸ್ತಿ ಮಾಲಿಕರು ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಮಹದೇವಪುರ, ಪೂರ್ವ ಮತ್ತು ದಕ್ಷಿಣ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೆರಿಗೆ ಬಾಕಿ ಇದ್ದು, ಇವರಿಗೆ 100% ದಂಡದ ಜೊತೆ 15% ಬಡ್ಡಿ ಬೀಳಲಿದೆ.


ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X