ಬೆಂಗಳೂರು | ಪಟಾಕಿ ಸ್ಪೋಟ; ಸವಾಲು ಗೆಲ್ಲಲು ಹೋದ ಯುವಕ ಸಾವು

Date:

Advertisements

ಪಟಾಕಿ ಪೆಟ್ಟಿಗೆಯ ಮೇಲೆ ಕುಳಿತು ಸವಾಲು ಗೆಲ್ಲಲು ಹೋದ 32 ವರ್ಷದ ಯುವಕನೋರ್ವ ಪ್ರಾಣ ಕಳೆದುಕೊಂಡಿರುವ ಘಟನೆ ಬೆಂಗಳೂರು ನಗರದ ಕೋಣನಕುಂಟೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಯುವಕನನ್ನು ಕೋಣನಕುಂಟೆ ನಿವಾಸಿ ಶಬರಿ ಎಂ ಎಂದು ಗುರುತಿಸಲಾಗಿದೆ. ಯುವಕರೆಲ್ಲರೂ ಪಾನಮತ್ತರಾಗಿದ್ದರು. ಪಟಾಕಿ ಡಬ್ಬದಲ್ಲಿ ಕೂರುವಂತೆ ಯುವಕರು ಶಬರಿಗೆ ಸವಾಲು ಹಾಕಿದ್ದರು ಎಂದು ಹೇಳಲಾಗಿದೆ.

ಅಕ್ಟೋಬರ್ 31ರ ಸಂಜೆ, ದಿನಗೂಲಿ ಕೆಲಸ ಮಾಡುತ್ತಿದ್ದ ಶಬರಿ ತನಗೆ ತಿಳಿದಿರುವ ಆರು ಯುವಕರೊಂದಿಗೆ ದೀಪಾವಳಿ ಆಚರಿಸುತ್ತಿದ್ದನು. ಎಲ್ಲರೂ ಪಾನಮತ್ತರಾಗಿದ್ದರು. ಪಟಾಕಿ ಪೆಟ್ಟಿಗೆಯ ಮೇಲೆ ಕೂರುವಂತೆ ಯುವಕರು ಸವಾಲು ಹಾಕಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಹರಿಯಾಣ | ಮನೆ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಆಕ್ಷೇಪ; ವೃದ್ದನಿಗೆ ಥಳಿಸಿ ಕೊಲೆ

ಯುವಕರು ಪೆಟ್ಟಿಗೆಯ ಮೇಲೆ ಕುಳಿತರೆ ಆಟೋ ರಿಕ್ಷಾ ಖರೀದಿಸಿ ನೀಡುವುದಾಗಿ ಹೇಳಿದ್ದರು. ಈ ಸವಾಲು ಸ್ವೀಕರಿಸಿದ ಶಬರಿ ಮದ್ಯದ ಅಮಲಿನಲ್ಲಿ ಪಟಾಕಿ ಪೆಟ್ಟಿಗೆಯ ಮೇಲೆ ಕೂತಿದ್ದಾನೆ ಎಂದು ವರದಿಯಾಗಿದೆ.

ಸದ್ಯ ಈ ದೃಶ್ಯದ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಯುವಕ ಶಬರಿ ಪಟಾಕಿ ಡಬ್ಬದಲ್ಲಿ ಕುಳಿತಿರುವುದು ಕೆಲವೇ ಕ್ಷಣಗಳಲ್ಲಿ ಶಬರಿ ತೀವ್ರವಾಗಿ ಗಾಯಗೊಂಡು ಕುಸಿದಿರುವುದು ಕಂಡುಬಂದಿದೆ.

ಇನ್ನು ತೀವ್ರವಾಗಿ ಗಾಯಗೊಂಡ ಶಬರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಬರಿ ನವೆಂಬರ್ 3ರಂದು ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಕೋಣನಕುಂಟೆ ಪೊಲೀಸರು ಬಿಎನ್‌ಎಸ್ ಸೆಕ್ಷನ್ 105 (ಅಪರಾಧ ನರಹತ್ಯೆ ಆದರೆ ಕೊಲೆ ಅಲ್ಲ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನವೀನ್ ಕುಮಾರ್, ದಿನಕರನ್, ಸತ್ಯವೇಲು, ಕಾರ್ತಿಕ್, ಸತೀಶ್ ಮತ್ತು ಸಂತೋಷ್ ಕುಮಾರ್ ಎಂಬವರನ್ನು ಬಂಧಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X