ಬೆಂಗಳೂರಿನ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್‌ಗೆ ಆರ್‍‌ಬಿಐನಿಂದ ಆರು ತಿಂಗಳ ನಿರ್ಬಂಧ : ಆತಂಕದಲ್ಲಿ ಗ್ರಾಹಕರು

Date:

Advertisements
  • ಬೆಂಗಳೂರು, ಮೈಸೂರಿನಲ್ಲಿ ಒಟ್ಟು 13 ಶಾಖೆ ಹೊಂದಿರುವ ಬ್ಯಾಂಕ್
  • ಬ್ಯಾಂಕ್‌ನ ಪರವಾನಗಿ ರದ್ದುಗೊಳಿಸಿಲ್ಲ ಎಂದು ಸ್ಪಷ್ಟಪಡಿಸಿದ ಆರ್‍‌ಬಿಐ

ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತನ್ನದೇ ಹೆಸರು ಗಳಿಸಿಕೊಂಡಿದ್ದ ಬೆಂಗಳೂರಿನ ‘ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್’ ವ್ಯವಹಾರಕ್ಕೆ ನಿರ್ಬಂಧ ಹೇರಿ, ಆರು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಆರ್‌ಬಿಐ ಘೋಷಿಸಿದೆ.

ಈ ಬಗ್ಗೆ ಜುಲೈ 24ರಂದು ಹೇಳಿಕೆ ಹೊರಡಿಸಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ‘ಆರ್ಥಿಕ ಮುಗ್ಗಟ್ಟಿನಲ್ಲಿರುವ ಬೆಂಗಳೂರು ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ ಸಾಲ ನೀಡುವಂತಿಲ್ಲ. ಅಲ್ಲದೇ, ಗ್ರಾಹಕರಿಂದ ಹಣ ಜಮಾವಣೆ ಮಾಡಲು ಅನುಮತಿ ಪಡೆಯಬೇಕು. ಸದ್ಯ ಗ್ರಾಹಕರು 50,000 ರೂಪಾಯಿಯವರೆಗೆ ಮಾತ್ರ ಹಣ ಹಿಂಪಡೆಯಲು ಸಾಧ್ಯ’ ಎಂದು ತಿಳಿಸಿದೆ.

ಆರ್‍‌ಬಿಐ ಹೇಳಿಕೆ ಬಂದಿರುವ ಬೆನ್ನಲ್ಲೇ ಬ್ಯಾಂಕ್ ಗ್ರಾಹಕರ ಆತಂಕ ಹೆಚ್ಚಿಸಿದೆ. ವಿಷಯ ತಿಳಿದ ಹಿನ್ನೆಲೆಯಲ್ಲಿ ಬ್ಯಾಂಕ್ ಗ್ರಾಹಕರು ತಮ್ಮ ಹಣ ಕಳೆದುಕೊಳ್ಳುವ ಭೀತಿಯಲ್ಲಿ ಶಾಖೆಗಳಲ್ಲಿ ಸೇರತೊಡಗಿದ್ದಾರೆ.

Advertisements

ಬೆಂಗಳೂರು, ಮೈಸೂರಿನಲ್ಲಿ ಒಟ್ಟು 13 ಶಾಖೆಗಳನ್ನು ಹೊಂದಿರುವ ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ ಲಕ್ಷಾಂತರ ಗ್ರಾಹಕರನ್ನು ಹೊಂದಿದೆ. ಈ ಬ್ಯಾಂಕ್‌ನಲ್ಲಿ ಹೂಡಿಕೆ ಮಾಡಿದ ಗ್ರಾಹಕರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಗ್ರಾಹಕರು 5 ಲಕ್ಷ ರೂಪಾಯಿವರೆಗೆ ವಿಮಾ ಹಣ ಪಡೆಯಲು ಅವಕಾಶ ನೀಡಿರುವ ಆರ್‍‌ಬಿಐ, ಬ್ಯಾಂಕಿನ ಪರವಾನಗಿಯನ್ನು ರದ್ದು ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ.

ಇದೇ ವೇಳೆ ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ ವ್ಯವಹಾರ ಮುಂದುವರಿಸಲು ಅವಕಾಶ ನೀಡಿದ್ದು, ಬ್ಯಾಂಕ್‌ನ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳಲಿದೆ. ಈಗಿನ ನಿರ್ದೇಶನವು ಆರು ತಿಂಗಳು ಚಾಲ್ತಿಯಲ್ಲಿರಲಿದೆ ಎಂದು ಆರ್‍‌ಬಿಐ ತಿಳಿಸಿದೆ.

ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿರುವ ಆರ್‌ಬಿಐ, ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ ಮುಂದಿನ ಎಲ್ಲ ವ್ಯವಹಾರ ಆರ್‌ಬಿಐ ನಿಗಾದಲ್ಲಿ ನಡೆಯಲಿದೆ. ಆರ್‌ಬಿಐ ಸೂಚನೆಯಂತೆ ಎಲ್ಲ ವ್ಯವಹಾರಗಳನ್ನು ಕೋ ಆಪರೇಟಿವ್ ಬ್ಯಾಂಕ್ ಮಾಡಲಿದೆ ಎಂದೂ ಕೂಡ ಮಾಹಿತಿ ನೀಡಿದೆ.

400 ಕೋಟಿ ಸಾಲ ವಸೂಲಿ ಬಾಕಿ
ಹೆಸರು ಹೇಳಲಿಚ್ಛಿಸದ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್‌ನ ಗ್ರಾಹಕರೊಬ್ಬರು ಈ ದಿನ.ಕಾಮ್‌ ಜೊತೆಗೆ ಮಾತನಾಡಿದ್ದು, ‘ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದವರು ಸರಿಯಾದ ಸಮಯಕ್ಕೆ ನೀಡುತ್ತಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸುಮಾರು 400 ಕೋಟಿ ಸಾಲ ವಸೂಲಿ ಬಾಕಿ ಇದೆ’ ಎಂದು ತಿಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X