ಸ್ವಂತ ಚಿಕ್ಕಪ್ಪನನ್ನೇ ಕೊಲೆ ಮಾಡಿದ 21 ವರ್ಷದ ಯುವಕ

Date:

Advertisements
  • ಹೊಸಕೋಟೆ ಸಮೀಪದ ಡಿ ಹೊಸಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಘಟನೆ
  • ಗ್ರಾಮದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸ್‌ ಸಿಬ್ಬಂದಿ ನೇಮಕ

ಚುನಾವಣೆ ಗೆದ್ದ ಸಂಭ್ರಮಾಚರಣೆ ವೇಳೆ, ಘರ್ಷಣೆಗೆ ಇಳಿದು ಸ್ವಂತ ಚಿಕ್ಕಪ್ಪನ್ನನ್ನೇ 21 ವರ್ಷದ ಯುವಕ ಕೊಲೆ ಮಾಡಿದ್ದಾನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಡಿ ಹೊಸಹಳ್ಳಿ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ. ಯುವಕನನ್ನು ನಂದಗುಡಿ ಪೊಲೀಸರು ಬಂಧಿಸಿದ್ದಾರೆ.

ಜಿ ಆದಿತ್ಯ ಬಂಧಿತ. ಬಂಧಿತ ಯುವಕ ತನ್ನ ತಂದೆ ಗಣೇಶ್‌ನೊಂದಿಗೆ ಗೆಲುವು ಕಂಡ ಕಾಂಗ್ರೆಸ್‌ ಅಭ್ಯರ್ಥಿಯ ಪರವಾಗಿ ಪಟಾಕಿ ಸಿಡಿಸುತ್ತಿದ್ದ ಗುಂಪಿನೊಂದಿಗೆ ಇವರು ಸೇರಿ ಸಂಭ್ರಮಾಚರಣೆ ಮಾಡುತ್ತಿದ್ದರು. ಮೃತ ವ್ಯಕ್ತಿ ಕೃಷ್ಣಪ್ಪ ಅವರ ಮನೆಯ ಎದುರು ಪಟಾಕಿ ಸಿಡಿಸುತ್ತಿದ್ದ ಹಿನ್ನೆಲೆ, ಇವರ ಮನೆಯವರು ವಿರೋಧಿಸಿದ್ದಾರೆ. ಈ ವೇಳೆ, ಗಣೇಶ್ ಹಾಗೂ ಕೃಷ್ಣಪ್ಪ ಅವರ ನಡುವೆ ಗಲಾಟೆ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಈ ವೇಳೆ ಬಂಧಿತ ಆದಿತ್ಯ ಕೊಡಲಿಯನ್ನು ತಂದು ಕೃಷ್ಣಪ್ಪನ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ, ಕೃಷ್ಣಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಲಾಟೆಯಲ್ಲಿ ಪತ್ನಿ ಗಂಗಮ್ಮ ಮತ್ತು ಮಗ ಬಾಬು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ನಂತರ ಬಂಧಿತನ ತಂದೆ ಗಣೇಶ್ ಮತ್ತು ಇನ್ನು ಕೆಲವರು ತಲೆಮರೆಸಿಕೊಂಡಿದ್ದಾರೆ. ಗ್ರಾಮದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ಜಿಲ್ಲಾ ಪೊಲೀಸರು ಸಿಬ್ಬಂದಿ ನಿಯೋಜಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೊಟ್ಟೆಯಲ್ಲಿಟ್ಟುಕೊಂಡು ₹11 ಕೋಟಿ ಮೌಲ್ಯದ ಕೊಕೇನ್ ಕ್ಯಾಪ್ಸೂಲ್ ಸಾಗಿಸುತ್ತಿದ್ದ ನೈಜೀರಿಯನ್‌ ಬಂಧನ

ಆದಿತ್ಯನನ್ನು ಬಂಧಿಸಲಾಗಿದೆ. ಗಣೇಶ್ ಮತ್ತು ಇತರರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಈ ನಡುವೆ ಬಿಜೆಪಿ ಬೆಂಬಲಿಗರು ಕೃಷ್ಣಪ್ಪ ಅವರ ಶವವನ್ನು ನಂದಗುಡಿ ಠಾಣೆಗೆ ಕೊಂಡೊಯ್ದು ಭಾನುವಾರ ಪ್ರತಿಭಟನೆ ನಡೆಸಿದರು. ಆರೋಪಿಗಳನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X