ಗೆದ್ದರೆ ಕಟಿಂಗ್‌ ಫ್ರೀ ಎಂದ ರಾಜಾಜಿನಗರದ ಪಕ್ಷೇತರ ಅಭ್ಯರ್ಥಿ

Date:

Advertisements
  • ಮತದಾರರ ಕೋರಿಕೆಯಂತೆ ಚುನಾವಣೆಗೆ ಸ್ಫರ್ಧಿಸಿದ್ದೇನೆಂದ ಎಂ ನರಸಿಂಹಲು
  • ಇಂದಿರಾ ಕ್ಯಾಂಟೀನ್ ಪಕ್ಕದ ಜಾಗದಲ್ಲಿ ಎಲ್ಲರಿಗೂ ₹5ಗೆ ಕಾಫಿ, ಟೀ

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಕಾವೇರಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ತಿಳಿಯಲಿದೆ. ಮತದಾರರ ಓಲೈಕೆಗಾಗಿ ಅಭ್ಯರ್ಥಿಗಳು ತಮ್ಮದೇ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದಾರೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯೊಬ್ಬರು ತಮ್ಮ ಪ್ರಣಾಳಿಕೆಯಲ್ಲಿ ಮತದಾರರಿಗೆ ಉಚಿತವಾಗಿ ತಲೆ ಕೂದಲು ಕಟಿಂಗ್‌ ಮಾಡಿಸುವುದಾಗಿ ಭರವಸೆ ನೀಡಿದ್ದಾರೆ.

ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಎಂ ನರಸಿಂಹಲು ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿದ್ದಾರೆ. ತಮ್ಮ ಪ್ರಣಾಳಿಕೆಯಲ್ಲಿ ಮತದಾರರು ತಮಗೆ ಮತ ಹಾಕಬೇಕೆಂದು ಮನವಿ ಮಾಡಿದ್ದಾರೆ.

ರಾಜಾಜಿನಗರ ಮತದಾರರ ಕೋರಿಕೆಯ ಮೇರೆಗೆ ತಾವು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದೇನೆಂದು ಹೇಳಿಕೊಂಡಿದ್ದಾರೆ.

Advertisements

ತಾವು ಈ ಚುನಾವಣೆಯಲ್ಲಿ ಗೆದ್ದು ಬಂದರೆ, ರಾಜಾಜಿನಗರದ ಹಿರಿಯ ನಾಗರಿಕರಿಗೆ, ಮಕ್ಕಳಿಗೆ, ಅಂಗವಿಕಲರಿಗೆ ಹಾಗೂ ಅನಾಥ ಮಕ್ಕಳಿಗೆ ಉಚಿತವಾಗಿ ತಲೆ ಕೂದಲು ಕಟಿಂಗ್‌ ಮಾಡಿಸುವುದಾಗಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೈಕ್‌ ವೀಲಿಂಗ್‌ ಹುಚ್ಚು; 17 ಬೈಕ್ ಕಳ್ಳತನ

ವಿಧಾನಸಬಾ ಕ್ಷೇತ್ರದ 7 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮದಡಿ ಮನೆಗೊಂದು ಗಿಡ ನೀಡಲಾಗುವುದು. ಇಂದಿರಾ ಕ್ಯಾಂಟೀನ್ ಪಕ್ಕದ ಜಾಗದಲ್ಲಿ ಎಲ್ಲರಿಗೂ ₹5 ಬೆಲೆಯಲ್ಲಿ ಕಾಫಿ, ಟೀ ನೀಡಲಾಗುವದು ಎಂದು ತಮ್ಮ ಪ್ರಣಾಳಿಕೆಯಲ್ಲಿ ತಿಳಿಸಿದ್ದಾರೆ.   

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X