ಬೆಂಗಳೂರಿನ ಜೋಗುಪಾಳ್ಯದಲ್ಲಿ ರೌಡಿ ಶೀಟರ್‌ ಕೊಲೆ

Date:

Advertisements
  • ರೌಡಿ ಶೀಟರ್‌ ಮೇಲೆ ನಾಲ್ಕೈದು ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಪರಾರಿ
  • ಹತ್ಯೆಯಾದ ಕಾರ್ತಿಕ್ ಕೊಲೆ, ಅತ್ಯಾಚಾರ ಸೇರಿದಂತೆ 13 ಅಪರಾಧಗಳಲ್ಲಿ ಭಾಗಿ

ಬೆಂಗಳೂರಿನ ಹಲಸೂರು ಬಳಿಯ ಜೋಗುಪಾಳ್ಯದಲ್ಲಿ ಮಂಗಳವಾರ ರೌಡಿ ಶೀಟರ್‌ನನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೋಗುಪಾಳ್ಯ ಮುಖ್ಯರಸ್ತೆಯಲ್ಲಿ ಮಂಗಳವಾರ ಸಂಜೆ 6.30ರ ಸುಮಾರಿಗೆ ನಡೆದುಕೊಂಡು ಹೋಗುತ್ತಿದ್ದ ಕಾರ್ತಿಕ್ ಮೇಲೆ ನಾಲ್ಕೈದು ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಹತ್ಯೆಯಾಗುವ ವೇಳೆ, ಕಾರ್ತಿಕ್ ಒಂದು ಚಿಕ್ಕ ಓಣಿಗೆ ನುಗ್ಗಿ ತಪ್ಪಿಸಿಕೊಳ್ಳಲು ಓಡಿ ಹೋಗಿದ್ದಾನೆ. ಅಲ್ಲಿ ದಾರಿಯಿಲ್ಲದ ಕಾರಣ ಮನೆಯೊಳಗೆ ಪ್ರವೇಶಿಸಲು ಮುಂದಾಗುತ್ತಾನೆ. ಆದರೆ, ಆ ಮನೆ ಬೀಗ ಹಾಕಿದ್ದು, ನಾಲ್ಕು ಜನರ ಗ್ಯಾಂಗ್‌ವೊಂದು ಅವನನ್ನು ಕೊಲೆ ಮಾಡಿ ಪರಾರಿಯಾಗಿದೆ.

“ಹತ್ಯೆಯಾದ ಕಾರ್ತಿಕ್ ಕೊಲೆ, ಅತ್ಯಾಚಾರ, ಕೊಲೆ ಯತ್ನ, ಕಳ್ಳತನ ಮತ್ತು ದರೋಡೆ ಸೇರಿದಂತೆ 13 ಅಪರಾಧಗಳಲ್ಲಿ ಭಾಗಿಯಾಗಿದ್ದನು. 2019ರಲ್ಲಿ ಗೂಂಡಾ ಕಾಯ್ದೆಯಡಿ ಈತನನ್ನು ಜೈಲಿಗೆ ಕಳುಹಿಸಲಾಗಿತ್ತು. ಬೆಂಗಳೂರಿನಿಂದ ಗಡಿಪಾರು ಕೂಡ ಮಾಡಲಾಗಿದ್ದು, ಸೋಮವಾರದಂದು ಪೊಲೀಸರು ಕಾರ್ತಿಕ್ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ನೋಟಿಸ್ ಕಳುಹಿಸಿದ್ದಾರೆ” ಎಂದು ಉಪ ಪೊಲೀಸ್ ಆಯುಕ್ತ (ಪೂರ್ವ) ಭೀಮಾಶಂಕರ್ ಎಸ್ ಗುಳೇದ್ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪತ್ನಿಗೆ ಐಎಎಸ್‌ ಅಧಿಕಾರಿಯಿಂದ ವರದಕ್ಷಿಣೆ ಕಿರುಕುಳ; ದೂರು ದಾಖಲು

ಹಂತಕರ ಸುಳಿವಿಗಾಗಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಈ ಕೃತ್ಯವನ್ನು ಕಾರ್ತಿಕ್ ಎದುರಾಳಿಗಳು ಮಾಡಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X