ಕೆಐಎನಲ್ಲಿ ಪ್ರಯಾಣಿಕರೊಬ್ಬರ ಎರಡು ಐಫೋನ್‌ ಕದ್ದ ಸಿಬ್ಬಂದಿ

Date:

Advertisements
  • ಚೆಕ್-ಇನ್ ಬ್ಯಾಗ್‌ನಲ್ಲಿ ಪವರ್ ಬ್ಯಾಂಕ್ ಮತ್ತು ಐದು ಐಫೋನ್‌ ಪತ್ತೆ
  • ಮಿಶ್ರಾ ವಿರುದ್ಧ ಕಳ್ಳತನ ಪ್ರಕರಣ ದಾಖಲಿಸಿದ ಪೊಲೀಸರು

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಖಾಸಗಿ ಗ್ರೌಂಡ್-ಹ್ಯಾಂಡ್ಲಿಂಗ್ ಕಂಪನಿಯ ಉದ್ಯೋಗಿಯೊಬ್ಬರು ಏಪ್ರಿಲ್‌ನಲ್ಲಿ ಪ್ರಯಾಣಿಕರೊಬ್ಬರ ಎರಡು ಐಫೋನ್‌ಗಳನ್ನು ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಏರ್‌ಲೈನ್ಸ್ ಮೇ 31 ರಂದು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದೆ.

ಆರೋಪಿ ಫೋನ್ ಕದಿಯುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಟಾಟಾ ಸಿಯಾ ಏರ್‌ಲೈನ್ಸ್ ಲಿಮಿಟೆಡ್ (ವಿಸ್ತಾರಾ)ದ ಉದ್ಯೋಗಿ ಆರ್ ಗಣೇಶ್ ಕುಮಾರ್ ಅವರು ನೀಡಿದ ದೂರಿನ ಪ್ರಕಾರ, ಪ್ರಯಾಣಿಕ ಹೇಮಂತ್ ಕುಮಾರ್ ಅವರು ಏಪ್ರಿಲ್ 28 ರಂದು ಬೆಂಗಳೂರಿನಿಂದ ಚಂಡೀಗಢಕ್ಕೆ ವಿಮಾನ ಮೂಲಕ ತೆರಳಲು ಪ್ರಯಾಣಕ್ಕಾಗಿ ಟಿಕೆಟ್ ಬುಕ್ ಮಾಡಿದ್ದರು.

ಲಗೇಜ್ ತಪಾಸಣೆಯ ವೇಳೆ, ಭದ್ರತಾ ಸಿಬ್ಬಂದಿಗೆ ಹೇಮಂತ್ ಕುಮಾರ್ ಅವರ ಚೆಕ್-ಇನ್ ಬ್ಯಾಗ್‌ನಲ್ಲಿ ಪವರ್ ಬ್ಯಾಂಕ್ ಮತ್ತು ಐದು ಐಫೋನ್‌ಗಳು ಪತ್ತೆಯಾಗಿವೆ. ಚೆಕ್-ಇನ್ ಬ್ಯಾಗೇಜ್‌ನಲ್ಲಿ ಪವರ್ ಬ್ಯಾಂಕ್‌ಗಳನ್ನು ನಿಷೇಧಿಸಿರುವುದರಿಂದ, ಅವರು ಅದನ್ನು ಅವರ ಬ್ಯಾಗ್‌ನಿಂದ ತೆಗೆದಿದ್ದಾರೆ.

Advertisements

ಮರುದಿನ ಬೆಳಗ್ಗೆ 8.40ಕ್ಕೆ ವಿಮಾನಯಾನ ಸಂಸ್ಥೆಯು ಚಂಡೀಗಢಕ್ಕೆ ಬ್ಯಾಗ್ ಕಳುಹಿಸಿದೆ. ಹೇಮಂತ್ ಕುಮಾರ್ ಅವರು ತಮ್ಮ ಬ್ಯಾಗ್ ಅನ್ನು ಸ್ವೀಕರಿಸಿದಾಗ ಅದರಲ್ಲಿದ್ದ ಎರಡು ಐಫೋನ್ ಕಾಣೆಯಾಗಿದೆ.

ಈ ಬಗ್ಗೆ ಹೇಮಂತ್ ಕುಮಾರ್ ಅವರು ಏರ್‌ಲೈನ್‌ಗೆ ದೂರು ಸಲ್ಲಿಸಿದ್ದಾರೆ. 27 ವರ್ಷದ ಶುಭಂ ಮಿಶ್ರಾ, ಗ್ರೌಂಡ್-ಹ್ಯಾಂಡ್ಲಿಂಗ್ ಸೇವಾ ಪಾಲುದಾರ AISATS ಲಿಮಿಟೆಡ್‌ನೊಂದಿಗೆ ಕೆಲಸ ಮಾಡುತ್ತಿದ್ದು, ಏಪ್ರಿಲ್ 29 ರಂದು ಬೆಳಗಿನ ಜಾವ 2.30 ರ ಸುಮಾರಿಗೆ ಫೋನ್‌ಗಳನ್ನು ಕದ್ದಿದ್ದಾರೆ ಎಂಬುದು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಹೆಚ್ಚುವರಿ ಲಗೇಜ್‍ಗೆ ಹಣ ಪಾವತಿಸುವಂತೆ ಹೇಳಿದಕ್ಕೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಮಹಿಳೆ

ತನಿಖೆಯ ವೇಳೆ ಮಿಶ್ರಾ ಫೋನ್‌ಗಳನ್ನು ಕದ್ದು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ವಿಮಾನಯಾನ ಸಂಸ್ಥೆಯು ಪ್ರಯಾಣಿಕರಿಗೆ ಹಣವನ್ನು ಹಿಂದಿರುಗಿಸಿದೆ. ವಿಮಾನಯಾನ ಸಂಸ್ಥೆ ಮಿಶ್ರಾ ಅವರನ್ನು ಸೇವೆಯಿಂದ ವಜಾ ಮಾಡಿದ್ದಾರೆ. ಮಿಶ್ರಾ ವಿರುದ್ಧ ಪೊಲೀಸರು ಕಳ್ಳತನ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X