ಜೀವನದ ಮೇಲೆ ಜಿಗುಪ್ಸೆ ಬಂದಿದೆ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

Date:

Advertisements
  • ಕೈ ಮೇಲೆ ಭೀಮೇಶ್ ಎಂಬ ಹೆಸರು, ಆತನ ಮೊಬೈಲ್ ನಂಬರ್ ಬರೆದುಕೊಂಡಿದ್ದ ವಿದ್ಯಾರ್ಥಿನಿ
  • ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭಿಸಿದ ಪೊಲೀಸರು‌

ಜೀವನದ ಮೇಲೆ ಜಿಗುಪ್ಸೆ ಬಂದಿದೆ ಎಂದು ಡೆತ್‌ನೋಟ್ ಬರೆದಿಟ್ಟು ಬಿಎಸ್ಸಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಬಲಿಯಾಗಿರುವ ಘಟನೆ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಆಯಿಶಾ ಬಿ.ಆರ್ ಮೃತ ವಿದ್ಯಾರ್ಥಿನಿ. ಏ.30ರ ಬೆಳಗ್ಗೆ ಬಿನ್ನಿಮಿಲ್ ಸಮೀಪದ ಪೊಲೀಸ್ ಕ್ವಾರ್ಟರ್ಸ್​ನಲ್ಲಿರುವ ಕಟ್ಟಡದ ಏಳನೇ ಮಹಡಿಯಿಂದ ಹಾರಿ, ಆತ್ಮಹತ್ಯೆಗೆ ಬಲಿಯಾಗಿದ್ದಾಳೆ.

ಮೃತ ವಿದ್ಯಾರ್ಥಿನಿ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದಳು. ಆತ್ಮಹತ್ಯೆಗೂ ಮುನ್ನ ಆಕೆ ತನ್ನ ಕೈ ಮೇಲೆ ಭೀಮೇಶ್ ಎನ್ನುವ ಹೆಸರು ಮತ್ತು ಆತನ ಮೊಬೈಲ್ ನಂಬರ್ ಕೂಡ ಬರೆದುಕೊಂಡಿದ್ದಾಳೆ.

Advertisements

ವಿದ್ಯಾರ್ಥಿನಿ ಆಯಿಶಾ ಮೂಲತಃ ಬಳ್ಳಾರಿ ಮೂಲದವಳು. ಕಳೆದ ಮೂರು ವರ್ಷಗಳ ಹಿಂದೆ ಸಿಐಡಿನಲ್ಲಿ ಸಬ್ ಇನ್ಸ್​​ಪೆಕ್ಟರ್ ಆಗಿದ್ದ ಭೀಮೇಶ್ ನಾಯಕ್ ಎಂಬುವವರ ಪರಿಚಯವಾಗಿತ್ತು. ಈ ಪರಿಚಯ ಪ್ರೇಮಕ್ಕೆ ತಿರುಗಿ ನಂತರದಲ್ಲಿ ಮನಸ್ತಾಪ ಕೂಡಾ ಉಂಟಾಗಿತ್ತು. ಈ ಹಿನ್ನೆಲೆ, ಆಯಿಶಾ ಭೀಮೇಶ್ ನಾಯಕ್‌ನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದಳು ಎಂದು ತಿಳಿದುಬಂದಿದೆ.

ಆಯಿಶಾ ದೂರು ದಾಖಲಿಸಿದ ಹಿನ್ನೆಲೆ, ಭೀಮೇಶ್ ನಾಯಕ ಫೋಕ್ಸೋ ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿ ಹೊರಗೆ ಬಂದಿದ್ದನು. ಈತ ಜೈಲುವಾಸ ಅನುಭವಿಸಿದ ನಂತರ ಆಯಿಶಾ ಆಗಾಗ್ಗೆ ಭೀಮೇಶ್‌ನನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುತ್ತಿದ್ದಳು ಎನ್ನಲಾಗಿದೆ.

ಎಂದಿನಂತೆ ಏ.24ರಂದು ಬೆಂಗಳೂರಿಗೆ ಬಂದಿದ್ದ ಆಯಿಶಾ ಭೀಮೇಶ್ ನಾಯಕ ಜತೆಯಲ್ಲಿ ಕ್ವಾಟ್ರಾಸ್‌ ಮನೆಯಲ್ಲಿ ಉಳಿದುಕೊಂಡಿದ್ದಳು. ಏ.30ರ ಬೆಳಿಗ್ಗೆ 8.30ಕ್ಕೆ ಭೀಮೇಶ್ ಊರಿಗೆ ತೆರಳಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಆಯಿಶಾ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮನೆಯಿಂದ ಮತದಾನ: ಮತ ಚಲಾವಣೆಗೂ ಮುನ್ನವೇ 33 ಮಂದಿ ಸಾವು

ಆಯಿಶಾ ಬರೆದ ಡೆತ್‌ನೋಟ್‌ನಲ್ಲೇನಿದೆ?

“ನನ್ನ ಸಾವಿಗೆ ಯಾರು ಕಾರಣರಲ್ಲ. ನನಗೆ ಜೀವನದ ಮೇಲೆ ಜಿಗುಪ್ಸೆ ಬಂದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಭೀಮೇಶ್ ಅವರ ಮೇಲೆ ನಾನು ಸುಳ್ಳು ದೂರು ನೀಡಿದ್ದೆ, ಇದರಿಂದ ನಾನು ತುಂಬಾ ಪಶ್ಚಾತಾಪ ಪಟ್ಟಿದ್ದೇನೆ. ಭೀಮೇಶ್ ತುಂಬಾ ಒಳ್ಳೆಯವರು, ಅವರು ಸೂಕ್ಷ್ಮ ಹಾಗೂ ಮುಗ್ಧ ವ್ಯಕ್ತಿ. ನನ್ನ ಸುಳ್ಳು ದೂರಿನಿಂದ ಭೀಮೇಶ್ ಅವರ ತಂದೆ ಅನಾರೋಗ್ಯಕ್ಕಿಡಾಗಿದ್ದಾರೆ. ಭೀಮೇಶ್ ನಾಯಕ್ ನನ್ನ ಆಪ್ತ ಸ್ನೇಹಿತ. ನನಗೂ ಅವರಿಗೂ ಯಾವುದೇ ದೈಹಿಕ ಸಂಪರ್ಕವಿರಲಿಲ್ಲ, ನನ್ನಿಂದ ನಮ್ಮ ಕುಟುಂಬ ಮತ್ತು ಭೀಮೇಶ್ ಅವರ ಕುಟುಂಬಕ್ಕೆ ತುಂಬಾ ನೋವಾಗಿದೆ. ಈ ಪಶ್ಚಾತಾಪದಿಂದ ಹೊರಬರಲು ಆಗುತ್ತಿಲ್ಲ. ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ನನ್ನ ಆತ್ಮಹತ್ಯೆಗೂ ಭೀಮೇಶ್​ ಅವರಿಗೂ ಯಾವುದೇ ಸಂಬಂಧವಿಲ್ಲ” ಎಂದು ಬರೆದಿದ್ದಾರೆ.

ಈ ಡೆತ್‌ನೋಟ್​​ನಲ್ಲಿ ಆಯಿಶಾ ಏ.24ರ ದಿನಾಂಕ ನಮೂದಿಸಿದ್ದಾಳೆ. ಬೆಂಗಳೂರಿಗೆ ಬರುವ ಹೊತ್ತಿನಲ್ಲೇ ಆಕೆ ಸಾಯುವ ನಿರ್ಧಾರ ಮಾಡಿದ್ದಳಾ? ಎಂಬ ಪ್ರಶ್ನೆ ಮೂಡಿದೆ. ಸದ್ಯ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು‌ ತನಿಖೆ ಆರಂಭಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X