ರಾಜಾಜಿನಗರ | ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ಎಎಪಿ ದೂರು

Date:

Advertisements
  • ಚುನಾವಣಾ ಪ್ರಕ್ರಿಯೆಯಿಂದ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ಅವರನ್ನು ಅನರ್ಹಕ್ಕೆ ಆಗ್ರಹ
  • ಜನಪ್ರತಿನಿಧಿಗಳ ಕಾಯಿದೆ 1951ರ ಉಲ್ಲಂಘನೆಯಾಗುತ್ತಿದೆ ಎಂದು ಎಎಪಿ ಆರೋಪ

ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಹಣ ವರ್ಗಾವಣೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಆರೋಪಿಸಿ ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್‌ ನೇತೃತ್ವದ ನಿಯೋಗವು ಬುಧವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಸತೀಶ್‌, “ರಾಜಾಜಿನಗರದಲ್ಲಿ ಚುನಾವಣಾ ಅಕ್ರಮ ಅವ್ಯಾಹತವಾಗಿ ನಡೆಯುತ್ತಿದೆ. ಮತದಾನದ ದಿನ ಸಮೀಪಿಸುತ್ತಿದ್ದಂತೆ, ಭಾರೀ ಪ್ರಮಾಣದ ಹಣವು ಅಕ್ರಮ ವರ್ಗಾವಣೆಯಾಗುತ್ತಿದೆ. ಚುನಾವಣಾ ನೀತಿ ಸಂಹಿತೆ ಕಾಯಿದೆ 1961, ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ, ಜನಪ್ರತಿನಿಧಿಗಳ ಕಾಯಿದೆ 1951 ಮುಂತಾದ ಅನೇಕ ಕಾನೂನು ಉಲ್ಲಂಘನೆಯಾಗುತ್ತಿದೆ. ಜಾರಿ ನಿರ್ದೇಶನಾಲಯವು ಶೀಘ್ರವೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮತದಾನ ಮಾಡಲು ಆಮಿಷ ಬಂದರೆ ‘ಸಿ-ವಿಜಿಲ್’ ತಂತ್ರಾಂಶದಲ್ಲಿ ದೂರು ದಾಖಲಿಸಿ: ತುಷಾರ್ ಗಿರಿನಾಥ್

Advertisements

“ರಾಜಾಜಿನಗರದ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ, ಮಾಜಿ ಉಪಮೇಯರ್‌ ರಂಗಣ್ಣ ರಘುವೀರ್‌, ಪದ್ಮರಾಜ್‌, ವಿಜಯಕುಮಾರ್‌, ಕೃಷ್ಣಮೂರ್ತಿ, ಯಶಸ್‌, ರವಿ, ಗಿಳಿ ವೆಂಕಟೇಶ್‌, ಮುನಿರಾಜ್‌, ಪಳನಿಕಾಂತ್‌, ರಾಜಣ್ಣ ವಿರುದ್ಧ ದೂರು ನೀಡಲಾಗಿದೆ. ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ, ಜಂಟಿ ಮುಖ್ಯ ಚುನಾವಣಾಧಿಕಾರಿ ಮತ್ತು ರಾಜಾಜಿನಗರದ ಆರ್‌ಒಗೆ ದೂರು ಸಲ್ಲಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಚುನಾವಣಾ ಪ್ರಕ್ರಿಯೆಯಿಂದ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣರವರನ್ನು ಅನರ್ಹ ಮಾಡಬೇಕೆಂದು ಆಗ್ರಹಿಸಿದ್ದೇವೆ” ಎಂದು ಡಾ. ಸತೀಶ್‌ ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X