ಯುವತಿ ಕೊಲೆ ಮಾಡಿ ಮೃತದೇಹವನ್ನು ಆಕೆಯ ಮನೆ ಮುಂದೆ ಇಟ್ಟ ಆರೋಪಿಯ ಬಂಧನ

Date:

Advertisements

ಯುವತಿಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿ, ಕೊಲೆ ಮಾಡಿ ಆಕೆಯ ಮೃತದೇಹವನ್ನು ಆರೋಪಿ ಅವರ ಮನೆ ಮುಂದೆ ಇಟ್ಟ ಘಟನೆ ಬೆಂಗಳೂರಿನ ಮಹದೇವಪುರಲ್ಲಿ ನಡೆದಿದೆ.

ಕಲಬುರಗಿ ಮಹಾನಂದ(21) ಕೊಲೆಯಾದ ಯುವತಿ. ಕೃಷ್ಣ ಚಂದ್​ ಸೇಟಿ ಕೊಲೆ ಮಾಡಿದ ಆರೋಪಿ. ಸದ್ಯ ಆರೋಪಿಯನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಮೂಲದ ಮಹಾನಂದ ಹಾಗೂ ಆಕೆಯ ಅಕ್ಕ ಇಬ್ಬರೂ ಬೆಂಗಳೂರಿನ ಶೆಲ್ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಬೆಂಗಳೂರಿನ ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​​ನಲ್ಲಿ ನೆಲೆಸಿದ್ದರು. ಈ ಯುವತಿಯರ ಪಕ್ಕದ ಮನೆಯಲ್ಲಿ ಒಡಿಶಾ ಮೂಲದ ಕೃಷ್ಣಚಂದ್ ಸೇಟಿ ವಾಸವಿದ್ದನು. ಈತ ನಗರದ ಟೆಕ್‌ ಪಾರ್ಕ್‌ನಲ್ಲಿ ಸೆಕ್ಯುರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದನು.

Advertisements

ಮಹಾನಂದ ಆ. 10 ಶೆಲ್ ಪೆಟ್ರೋಲ್‌ ಬಂಕ್‌ಗೆ ಕೆಲಸಕ್ಕೆ ತೆರಳದೆ ಮನೆಯಲ್ಲೇ ಇದ್ದಳು. ಈ ವೇಳೆ, ಮನೆಯಲ್ಲಿ ರಾತ್ರಿ ಅಡುಗೆ ಮಾಡಲು ಒಲೆಯ ಮೇಲೆ ಅನ್ನಕ್ಕೆ ಇಟ್ಟು, ಹೊರಗೆ ಬಂದಿದ್ದಳು.  

ಯುವತಿ ಹೊರಗಡೆ ಬಂದ ವೇಳೆ, ಆರೋಪಿ ಕೃಷ್ಣ ಚಂದ್​​ ಸಾಟಿ ಆಕೆಯನ್ನು ತನ್ನ ಮನೆಯೊಳಗೆ ಎಳೆದುಕೊಂಡು ಅತ್ಯಾಚಾರ ಎಸಗಲು ಪ್ರಯತ್ನಿಸಿದ್ದಾನೆ. ಇದಕ್ಕೆ ಯುವತಿ ವಿರೋಧ ವ್ಯಕ್ತಪಡಿಸಿ, ಕಾಪಾಡುವಂತೆ ಕಿರುಚಾಡಿದ್ದಾಳೆ. ಆರೋಪಿ ಯುವತಿಯನ್ನು ಒಂದು ಕೈಯಿಂದ ಆಕೆಯ ಬಾಯಿ, ಮೂಗು ಮುಚ್ಚಿ ಇನ್ನೊಂದು ಕೈಯಿಂದ ಆಕೆಯ ಕತ್ತು ಹಿಸುಕಿದ್ದಾನೆ.

ಈ ವೇಳೆ, ಯುವತಿ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ. ಬಳಿಕ ಮೃತದೇಹವನ್ನು ಆರೋಪಿ ಬಟ್ಟೆಯಲ್ಲಿ ಸುತ್ತಿ ಮೂಲೆಯೊಂದರಲ್ಲಿ ಇಟ್ಟಿದ್ದನು. ಬಳಿಕ ಬೆಳಗಿನ ಜಾವ 5:30 ರ ಸುಮಾರಿಗೆ ಶವವನ್ನು ಆಕೆಯ ಮನೆಯ ಮುಂದೆ ಇಟ್ಟಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಬಿಎಂಪಿ ಆವರಣದಲ್ಲಿ ಅಗ್ನಿ ಅವಘಡ; ತನಿಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸ್ವಲ್ಪ ಸಮಯದ ನಂತರ ಅಕ್ಕ-ಪಕ್ಕದ ಜನರು ಮನೆ ಮುಂದೆ ಸೇರಿದ್ದಾರೆ. ಈ ವೇಳೆ, ಆರೋಪಿಯೂ ಕೂಡ ಜನರ ಮಧ್ಯೆ ಸೇರಿ ಏನು ತಿಳಿಯದಂತೆ ನಿಂತಿದ್ದಾನೆ.

ಸದ್ಯ ಪೊಲೀಸರು ಆರೋಪಿ ಕೃಷ್ಣ ಚಂದ್​​ ಸಾಟಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಮಹದೇವಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X