ಬೆಂಗಳೂರು | ಅನುಮಾನದಿಂದ ಪತ್ನಿಯನ್ನೇ ಕೊಚ್ಚಿ ಕೊಂದ ಪತಿರಾಯ

Date:

Advertisements
  • 12 ವರ್ಷಗಳ ಹಿಂದೆ ನಾಗರತ್ನಳನ್ನು ಮದುವೆಯಾಗಿದ್ದ ಅಯ್ಯಪ್ಪ
  • ಚಾಕುವಿನಿಂದ ಮನಸೋ ಇಚ್ಛೆ ಪತ್ನಿ ಮೇಲೆ ಹಲ್ಲೆ ನಡೆಸಿದ ಪತಿ

ಅನುಮಾನ ಪಟ್ಟು ಪತ್ನಿಯನ್ನೇ ಪತಿ ಕೊಲೆಗೈದಿದ್ದು, ಬೆಂಗಳೂರಿನ ಬಸವೇಶ್ವರ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನಾಗರತ್ನ (32) ಹತ್ಯೆಯಾದ ಮಹಿಳೆ. ಅಯ್ಯಪ್ಪ ಪತ್ನಿಯನ್ನು ಕೊಂದ ಪತಿ. ಅನೈತಿಕ ಸಂಬಂಧದ ಆರೋಪದ ಹಿನ್ನೆಲೆ, ಮನಸೋ ಇಚ್ಛೆ ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಈ ಕುರಿತಂತೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಗರತ್ನ ಅಪ್ಪ-ಅಮ್ಮ ಇಲ್ಲದೇ ಅನಾಥಾಶ್ರಮದಲ್ಲಿ ಬೆಳೆದಿದ್ದರು. ಕಳೆದ 12 ವರ್ಷಗಳ ಹಿಂದೆ ಅಯ್ಯಪ್ಪ ನಾಗರತ್ನಳನ್ನು ಮದುವೆಯಾಗಿದ್ದನು. ದಂಪತಿಗೆ 11 ವರ್ಷದ ಮಗ ಹಾಗೂ 7 ವರ್ಷದ ಮಗಳು ಇದ್ದಾಳೆ.

Advertisements

ಇಬ್ಬರು ಮಕ್ಕಳನ್ನು ಅಯ್ಯಪ್ಪನೂ ತನ್ನ ಅಕ್ಕನ ಮನೆಯಲ್ಲಿ ಬಿಟ್ಟಿದ್ದನು. ಕಳೆದ ಕೆಲವು ದಿನಗಳಿಂದ ಅಯ್ಯಪ್ಪ ಹೆಂಡತಿ ಮೇಲೆ ಅನುಮಾನ ಪಡಲು ಆರಂಭಿಸಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ‘ಪೀಪಲ್ಸ್‌ ಮ್ಯಾನ್‌’ ಖ್ಯಾತಿಯ ಇನ್ಸ್‌ಪೆಕ್ಟರ್‌ ಮಂಜುನಾಥ್‌ ನಿಧನ

ಕಳೆದ ಮೂರು ದಿನದಿಂದ ದಂಪತಿಗಳ ಮಧ್ಯೆ ಈ ವಿಚಾರವಾಗಿ ಜಗಳವಾಗುತ್ತಿತ್ತು. ಈ ವೇಳೆ, ಚಾಕುವಿನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ, ಮಹಿಳೆಯ ಗುಪ್ತಾಂಗಕ್ಕೂ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಸದ್ಯ ಪತ್ನಿ ನಾಗರತ್ನ ಕೊಲೆಗೈದ ಪತಿ ಅಯ್ಯಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಬಸವೇಶ್ವರ ನಗರ ಪೊಲೀಸರು ಘಟನಾ ಸ್ಥಳದ ಪರಿಶೀಲನೆ ನಡೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X