ಬೆಂಗಳೂರು | ₹12 ಲಕ್ಷ ಮೌಲ್ಯದ ಅಮೆರಿಕನ್ ಡೈಮಂಡ್ ಗಣಪತಿ ಪ್ರತಿಷ್ಠಾಪನೆಗೆ ಸಿದ್ಧ

Date:

Advertisements

₹12 ಲಕ್ಷ ಮೌಲ್ಯದ ಅಮೆರಿಕನ್​​​ ಡೈಮಂಡ್​ ಹರಳುಗಳಿಂದ ಮಾಡಿದ ಗಣಪತಿ ಮೂರ್ತಿಯನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ ತರಲಾಗಿದ್ದು, ನಗರದ ರಾಜಾಜಿನಗರ 2ನೇ ಹಂತದ ಮಿಲ್ಕ್ ಕಾಲೋನಿ 5ನೇ ಮುಖ್ಯ ರಸ್ತೆಯಲ್ಲಿ ಸ್ವಸ್ತಿಕ್ ಯುವಕರ ಸಂಘ ಸೆ.18 ರಂದು ಪ್ರತಿಷ್ಠಾಪನೆ ಮಾಡಲಿದೆ.

ಹುಬ್ಬಳ್ಳಿಯ ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು ಈ ಮೂರ್ತಿಯನ್ನು ಸಿದ್ಧಪಡಿಸಿದ್ದಾರೆ. ಸುಮಾರು 60 ಸಾವಿರ ಅಮೆರಿಕನ್​​ ಡೈಮಂಡ್ ಹಾಗೂ ನವರತ್ನ ಹರಳುಗಳಿಂದ ಗಣೇಶ ಮೂರ್ತಿಯ ಮುಖವೊಂದನ್ನು ಹೊರತುಪಡಿಸಿ, ಉಳಿದ ಎಲ್ಲ ಭಾಗಗಳನ್ನು ತಯಾರು ಮಾಡಲಾಗಿದೆ. ಈ ಗಣೇಶ ಮೂರ್ತಿ ಒಟ್ಟು 5.7 ಅಡಿ ಎತ್ತರವಿದೆ. ಸುಮಾರು 150 ಕೆಜಿ ತೂಕ ಹೊಂದಿದೆ.

ಬೆಂಗಳೂರಿನ ಸ್ವಸ್ತಿಕ್ ಯುವಕರ ಸಂಘ ಕಳೆದ ಹಲವು ವರ್ಷಗಳಿಂದ ಅಮೆರಿಕನ್ ಡೈಮಂಡ್‌ ಹರಳುಗಳಿಂದ ಗಣೇಶ ಮೂರ್ತಿಯನ್ನು ತಯಾರು ಮಾಡಿಸುತ್ತಿದ್ದಾರೆ. ಏಳು ದಿನಗಳವರೆಗೆ ಪ್ರತಿಷ್ಠಾಪನೆ ಮಾಡಿ ಗಣೇಶನಿಗೆ ಪೂಜೆ ಸಲ್ಲಿಸಿ ಸಂಭ್ರಮಿಸುತ್ತಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಣೇಶ ಚತುರ್ಥಿಯಂದು ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ

ಹುಬ್ಬಳ್ಳಿಯಲ್ಲಿ ಗಣೇಶ ಮೂರ್ತಿಯನ್ನು ತಯಾರು ಮಾಡಿದ್ದು, ರೈಲಿನ ಮೂಲಕ ಬೆಂಗಳೂರಿಗೆ ಶುಕ್ರವಾರ ಸಾಗಿಸಲಾಗಿದೆ. ಬೆಂಗಳೂರಿನ ಸ್ವಸ್ತಿಕ್ ಯುವಕರ ಸಂಘ ಗಣೇಶ ಉತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತದೆ.

3 ಲಕ್ಷ ಗಣೇಶ ಮೂರ್ತಿ ತಯಾರು ಮಾಡಿದ ಕುಟುಂಬ

ಈ ಬಾರಿಯ ಗಣೇಶ ಚತುರ್ಥಿಗೆ ಬೆಳಗಾವಿ ಜಿಲ್ಲೆಯ ಕುಂಬಾರ ಕುಟುಂಬವೊಂದು ಬರೋಬ್ಬರಿ 3 ಲಕ್ಷ ಗಣೇಶ ಮೂರ್ತಿಗಳನ್ನು ತಯಾರು ಮಾಡಿದೆ.

ಈ ಕುಟುಂಬದ ಮೂಲ ವೃತ್ತಿ ಗಣೇಶನ ಮೂರ್ತಿಗಳನ್ನು ತಯಾರು ಮಾಡುವುದು. ಕಳೆದ ಆರು ವರ್ಷಗಳಿಂದ ಮಣ್ಣಿನ ಮೂರ್ತಿಗಳನ್ನು ಮಾತ್ರ ತಯಾರು ಮಾಡುತ್ತಿದ್ದಾರೆ. ಈ ಕುಟುಂಬ ಆರಂಭದಲ್ಲಿ 40 ಮೂರ್ತಿಗಳನ್ನು ತಯಾರು ಮಾಡುತ್ತಿತ್ತು. ಈ ವರ್ಷ 3 ಲಕ್ಷ ಮೂರ್ತಿಗಳನ್ನು ತಯಾರಿಸಿ ಮಾರಾಟಕ್ಕೆ ಇಟ್ಟಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X