ಬೆಂಗಳೂರು | 2 ಟನ್‌ ಟೊಮ್ಯಾಟೊ ಸಮೇತ ಬೊಲೆರೋ ವಾಹನ ಕದ್ದಿದ್ದ ಆರೋಪಿಗಳ ಬಂಧನ

Date:

Advertisements
  • ಆರ್​​ಎಮ್​​ಸಿ ಯಾರ್ಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ಮೂವರು ಆರೋಪಿಗಳ ಬಂಧನಕ್ಕಾಗಿ ಪೊಲೀಸರ ಹುಡುಕಾಟ

ರಾಜ್ಯದಲ್ಲಿ ಮಳೆಯ ಕೊರತೆ ಹಾಗೂ ಇಳುವರಿ ಕಡಿಮೆಯಿಂದ ಟೊಮ್ಯಾಟೊ ದರ ಗಗನಕ್ಕೇರಿದ್ದು, ಕೊಳ್ಳುವವರ ಕೈ ಸುಡುವಂತಾಗಿದೆ. ಈ ಬೆನ್ನಲ್ಲೆ, ಎಲ್ಲೆಡೆ ಟೊಮ್ಯಾಟೊ ಕಳ್ಳತನ ಮಾಡುವವರ ಸಂಖ್ಯೆ ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳ ಹಿಂದೆ 2 ಟನ್‌ಗೂ ಅಧಿಕ ಟೊಮ್ಯಾಟೊ ಇದ್ದ ಬೊಲೆರೋ ವಾಹನವನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಮೂಲದ ಭಾಸ್ಕರ್, ಸಿಂಧೂಜಾ ಬಂಧಿತರು. ಇನ್ನೂ ಮೂವರು ಆರೋಪಿಗಳ ಬಂಧನಕ್ಕಾಗಿ ಆರ್​ಎಂಸಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

2 ಸಾವಿರ ಕೆಜಿಗೂ ಅಧಿಕ ಟೊಮ್ಯಾಟೊ ಇದ್ದ ಬೊಲೆರೋ ವಾಹನವನ್ನು ಕಳ್ಳತನ ಮಾಡಿದ್ದ ಆರೋಪಿಗಳು, ಯೋಜನೆ ರೂಪಿಸಿ ಟೊಮ್ಯಾಟೊವನ್ನು ಚೆನ್ನೈ ಮಾರುಕಟ್ಟೆಗೆ ಹೋಗಿ ಮಾರಾಟ ಮಾಡಿದ್ದಾರೆ. ಬಳಿಕ ಖಾಲಿ ಬೊಲೆರೋ ವಾಹನವನ್ನು ತಂದು ನಿಲ್ಲಿಸಿ ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ.

Advertisements

ಏನಿದು ಘಟನೆ?

ರಾಜ್ಯದಲ್ಲಿ ಟೊಮ್ಯಾಟೊ ಬೆಲೆ ಏರಿಕೆಯಾದ ಬೆನ್ನಲ್ಲೆ ಕಳವು ಪ್ರಕರಣಗಳು ವರದಿಯಾಗುತ್ತಿವೆ. ಸುಮಾರು 2 ಟನ್‌ಗೂ ಹೆಚ್ಚು ಟೊಮ್ಯಾಟೊ ಇದ್ದ ಬೊಲೆರೋ ವಾಹನವನ್ನು ಕಳ್ಳರು ಜು.8ರಂದು ಕಳವು ಮಾಡಿ ಪರಾರಿಯಾಗಿದ್ದರು.

ಜು. 8ರಂದು ನಗರದ ಯಲಹಂಕ ಬಳಿಯ ಚಿಕ್ಕಜಾಲ ಗ್ರಾಮದ ಬಳಿ ಈ ಘಟನೆ ನಡೆದಿತ್ತು. ಟೊಮ್ಯಾಟೊ ಬೆಳೆದ ರೈತ ಹಿರಿಯೂರಿನಿಂದ ಕೋಲಾರದ ಕಡೆಗೆ ಸಾಗಿಸುತ್ತಿದ್ದರು. ಈ ವೇಳೆ, ಕಾರಿನಲ್ಲಿ ಬಂದ ಮೂವರು ಬೊಲೆರೋ ವಾಹನವನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೊಲೆರೋ ವಾಹನದ ಸಮೇತ 2 ಟನ್ ಟೊಮ್ಯಾಟೊ ಕದ್ದ ಕಳ್ಳರು : ರೈತ ಕಂಗಾಲು

ನಂತರ ಆರ್​​ಎಮ್​​ಸಿ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ವಾಹನವನ್ನು ಅಡ್ಡಗಟ್ಟಿ, ಪೀಣ್ಯ ಬಳಿ ನಿಮ್ಮ ಬೊಲೆರೋ ವಾಹನದಿಂದ ನಮ್ಮ ಗಾಡಿಗೆ ಟಚ್‌ ಮಾಡಿದ್ದೀರಿ ಎಂದು ಜಗಳ ಆರಂಭಿಸಿ, ಬೊಲೆರೋ ಚಾಲಕ ಮತ್ತು ರೈತನ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ಮೊಬೈಲ್ ಕಿತ್ತುಕೊಂಡು ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ನಂತರ ಟೊಮ್ಯಾಟೊ ಕಂಡ ಅವರು ಬೊಲೆರೋ ಸಮೇತ ಕದ್ದು, ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ಆರ್​​ಎಮ್​​ಸಿ ಯಾರ್ಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X