ಬೆಂಗಳೂರು | ಮನೆ ಬಾಡಿಗೆ ಹಣ ಕೇಳಿದಕ್ಕೆ ಚಾಕುವಿನಿಂದ ಹಲ್ಲೆ

Date:

Advertisements

ಬಾಡಿಗೆ ಹಣ ಕೇಳಿದಕ್ಕೆ ಮಹಿಳೆ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಬಂಡೇಪಾಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶ್ರೀದೇವಿ ಹಲ್ಲೆಗೊಳಗಾದ ಮಹಿಳೆ. ಸದ್ದಾಂ ಹಲ್ಲೆ ಮಾಡಿದ ವ್ಯಕ್ತಿ. ಮುನೇಶ್ವರನಗರದಲ್ಲಿರುವ ಕಟ್ಟಡವೊಂದರಲ್ಲಿ ಹಲ್ಲೆಗೊಳಗಾದ ಮಹಿಳೆ ಬಾಡಿಗೆ ಮನೆಯಲ್ಲಿದ್ದರು. ಈ ಕಟ್ಟಡ ಮಾಲೀಕ ಫಯಾಜ್ ಹಾಗೂ ಆತನ ಕುಟುಂಬ ವಿದೇಶದಲ್ಲಿದ್ದರು. ನಗರದಲ್ಲಿರುವ ಮನೆಗಳ ಬಾಡಿಗೆ ಹಣ ಸಂಗ್ರಹಿಸಿ ಫಯಾಜ್‌ ಅವರಿಗೆ ಕಳುಹಿಸುವ ಜವಾಬ್ದಾರಿಯನ್ನು ಶ್ರೀದೇವಿ ಅವರಿಗೆ ನೀಡಲಾಗಿತ್ತು. ಅದರಂತೆಯೇ ಪ್ರತಿ ತಿಂಗಳು ಶ್ರೀದೇವಿ ಹಣ ಸಂಗ್ರಹಿಸುತ್ತಿದ್ದರು.

ಅದೇ ಕಟ್ಟಡದಲ್ಲಿ ವಾಸವಿದ್ದ ನಜೀರ್ ಎಂಬ ಕುಟುಂಬದವರು ಕಳೆದ ಮೂರು ತಿಂಗಳಿನಿಂದ ಬಾಡಿಗೆ ಹಣ ನೀಡಿರಲಿಲ್ಲ. ಹಾಗಾಗಿ ಶ್ರೀದೇವಿ ಬಾಡಿಗೆ ಹಣ ನೀಡುವಂತೆ ಜೋರು ಧ್ವನಿಯಲ್ಲಿ ಕೇಳಿದ್ದಾರೆ. ಈ ಘಟನೆಯನ್ನು ನಜೀರ್ ಅವರ ಮಗ ಸದ್ದಾಂಗೆ ತಿಳಿಸಿದ್ದಾರೆ.

Advertisements

ಇದಕ್ಕೆ ಕೋಪಗೊಂಡ ಸದ್ದಾಂ ಶ್ರೀದೇವಿ ಅವರ ಮನೆ ಮುಂದೆ ಹೋಗಿ ಕೂಗಾಡಿದ್ದಾನೆ. ಅಲ್ಲದೆ, ಅವರ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ. ಘಟನೆ ನಡೆದು ಒಂದು ತಿಂಗಳು ಕಳೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಉಬರ್ ಕ್ಯಾಬ್ ಬುಕ್ ಮಾಡಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿದ ಚಾಲಕ

ಹಲ್ಲೆಗೊಳಗಾದ ಶ್ರೀದೇವಿ ಅವರು ಬಂಡೇಪಾಳ್ಯ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿ ವಿರುದ್ಧ ಕೊಲೆಯತ್ನದ ಸೆಕ್ಷನ್ ದಾಖಲಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

Download Eedina App Android / iOS

X