ಬೆಂಗಳೂರು | ಕರಗ ಹೊತ್ತಿದ್ದ ಜ್ಞಾನೇಂದ್ರ ಕೊಲೆಗೆ ಯತ್ನ; ಆರೋಪಿ ಬಂಧನ

Date:

Advertisements
  • ಉತ್ಸವದ ವೇಳೆ ಖಾರದ ಪುಡಿ ಹಾಗೂ ರಾಸಾಯನಿಕ ದ್ರಾವಣ ಎರಚಿದ ಆರೋಪಿ
  • ಜೆಪಿ ನಗರ ನಿವಾಸಿ ಜಯನಗರದ ಆದಿನಾರಾಯಣ ಬಂಧಿತ ಆರೋಪಿ

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಅದ್ಧೂರಿಯಾಗಿ ನೆರವೇರಿದೆ. ಆದರೆ, ಕರಗವನ್ನು ಹೊತ್ತಿದ್ದ ಜ್ಞಾನೇಂದ್ರ ಅವರ ಕೊಲೆಗೆ ಯತ್ನ ನಡೆದಿದ್ದು, ಈ ಸಂಬಂಧ ಓರ್ವ ಆರೋಪಿಯನ್ನು ಹಲಸೂರು ಗೇಟ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಜೆಪಿ ನಗರ ನಿವಾಸಿ ಜಯನಗರದ ಆದಿನಾರಾಯಣ ಬಂಧಿತ ಆರೋಪಿ. ಈತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹಲವು ವರ್ಷಗಳಿಂದ ಕರಗ ಹೊರುವ ವಿಚಾರವಾಗಿ ಆದಿನಾರಾಯಣ ಹಾಗೂ ಜ್ಞಾನೇಂದ್ರ ಅವರ ನಡುವೆ ಮನಸ್ತಾಪವಿದೆ. ಈ ಸೇಡಿನಿಂದ ಆತ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಏ. 6ರಂದು ನಡೆದ ಕರಗ ಉತ್ಸವದ ವೇಳೆ ಖಾರದ ಪುಡಿ ಹಾಗೂ ಬೆಳ್ಳಿ ವಸ್ತುಗಳಿಗೆ ಬಳಸಲಾಗುವ ಸೈನೆಡ್ ಪೆಟಲ್ಸ್ ಎಂಬ ರಾಸಾಯನಿಕ ದ್ರಾವಣವನ್ನು ಹೂವಿನಲ್ಲಿ ಬೆರೆಸಿ ಕರಗ ಹೊತ್ತಿದ್ದ ಜ್ಞಾನೇಂದ್ರ ಮೇಲೆ‌ ಆರೋಪಿ ಎರಚಿದ್ದನು. ಈ ಬಗ್ಗೆ ಕರಗ ಹೊತ್ತ ಅರ್ಚಕ ಜ್ಞಾನೇಂದ್ರ ಅವರು ಆರೋಪಿಸಿ ಹಲಸೂರು ಗೇಟ್‌ ಪೊಲೀಸ್‌ ಠಾಣೆಗೆ ಮಂಗಳವಾರ ದೂರು ನೀಡಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಬಿಜೆಪಿ ಶಾಸಕ ರಘು ಬೆಂಬಲಿಗರಿಂದ ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ; ದೂರು ದಾಖಲು

ಈ ದೂರಿನ ಮೇರೆಗೆ ಜಯನಗರದ ಆದಿನಾರಾಯಣ ವಿರುದ್ಧ ಕೊಲೆ ಯತ್ನ ಆರೋಪದಡಿ ಎಫ್‌ಐಆರ್‌ ದಾಖಲಾಗಿತ್ತು.

ಕರಗ ಉತ್ಸವದ ವೇಳೆ ಜ್ಞಾನೇಂದ್ರ ಮೇಲೆ ಆದಿನಾರಾಯಣ ಯಾವುದೋ ವಸ್ತು ಎಸೆಯುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರಿಂದ ಜ್ಞಾನೇಂದ್ರ ಅವರ ಕುತ್ತಿಗೆ ಭಾಗ ಹಾಗೂ ದೇಹದ ನಾನಾ ಭಾಗಗಳಲ್ಲಿ ಸುಟ್ಟಗಾಯಗಳಾಗಿವೆ.

“ಕರಗ ಹೊರುವ ಪೂಜಾರಿ ಮೇಲೆ ರಾಸಾಯನಿಕ ಪದಾರ್ಥವನ್ನು ಎರಚಿದ್ದಾರೆ. ಕರಗ ಹೊರುವ ವಿಚಾರದಲ್ಲಿ ಅವರ ಮಧ್ಯೆ ವಿವಾದಗಳಿವೆ. ಆ ಕಾರಣಕ್ಕಾಗಿ ಈ ರೀತಿಯ ಘಟನೆ ನಡೆದಿದೆ. ಪ್ರಾಥಮಿಕ ತನಿಖೆ ವೇಳೆ ಈ ವಿಷಯ ತಿಳಿದುಬಂದಿದೆ. ದೂರು ದಾಖಲಾಗಿದೆ. ಘಟನೆ ಬಗ್ಗೆ ತನಿಖೆ ಕೈಗೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ” ಎಂದು ಬೆಂಗಳೂರು ನಗರ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

Download Eedina App Android / iOS

X