ಬೆಂಗಳೂರು | ಬಿಬಿಎಂಪಿ ಕಸ ಸಂಗ್ರಹಿಸುವ ಆಟೋ ಚಾಲಕನ ಮೇಲೆ ಹಲ್ಲೆ

Date:

Advertisements
  • ಮನೆಗಳ ಎದುರು ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಹಲ್ಲೆ ದೃಶ್ಯ ಸೆರೆ
  • ಗಂಭಿರವಾಗಿ ಗಾಯಗೊಂಡಿರುವ ಸತೀಶ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕಸ ಸಂಗ್ರಹಿಸುವ ಆಟೋ ಚಾಲಕ ಸತೀಶ್ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಜುಲೈ 2ರಂದು ನಗರದ ಕಾಟನಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಜಾಲಿ ಮೊಹಲ್ಲದಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಕಸ್ತೂರಬಾ ನಗರದ ನಿವಾಸಿ ಸತೀಶ್(24) ಎಂಬುವವರು ಹಲ್ಲೆಗೊಳಗಾದವರು. ಎರಡು ಗುಂಪುಗಳು ಮಾರಕಾಸ್ತ್ರಗಳನ್ನು ಹಿಡಿದು ರಸ್ತೆಯಲ್ಲಿ ಪರಸ್ಪರ ಹಲ್ಲೆ ನಡೆಸುತ್ತಿರುವ ದೃಶ್ಯ ರಸ್ತೆ ಪಕ್ಕದ ಅಂಗಡಿ ಮತ್ತು ಮನೆಗಳ ಎದುರು ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೀಗ ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Advertisements

ಗಂಭೀರವಾಗಿ ಗಾಯಗೊಂಡಿರುವ ಸತೀಶ್ ಅವರನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

“ತನ್ನ ಸ್ನೇಹಿತ ಮತ್ತು ಇತರರು ಕಸದ ವಾಹನವನ್ನು ಚಲಾಯಿಸುತ್ತಿದ್ದಾಗ ಮಾರಕಾಸ್ತ್ರಗಳೊಂದಿಗೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಸತೀಶ್ ದೂರಿನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಎಮ್‌ಸಿ ಮೊದಲ ಮುಸ್ಲಿಂ ಮಹಿಳಾ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಡಾ. ಅಸಿಮಾ ಬಾನು

ಸತೀಶ್ ಅವರ ಸ್ನೇಹಿತರಾದ ರಾಮಮೂರ್ತಿ, ರಿತಿಕ್, ಮೋಹನ್ ರನ್ನು ಪೊಲೀಸರು ಬಂಧಿಸಿದ್ದಾರೆ.

“ದಾಳಿಕೋರರೊಂದಿಗೆ ಸತೀಶ್ ಗೆಳೆತನವಿತ್ತು. ಆದರೆ, ಅವರೊಂದಿಗೆ ಭಿನ್ನಾಭಿಪ್ರಾಯ ಬೆಳೆದು ದಾಳಿಗೆ ಕಾರಣವಾಗಿದೆ. ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಮತ್ತು ಕೊಲೆ ಯತ್ನದಡಿ ಪ್ರಕರಣ ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X