ಬೆಂಗಳೂರು | ಟ್ರಾಫಿಕ್ ಪೊಲೀಸ್‌ ಪೇದೆ ಮೇಲೆ ಹಲ್ಲೆ ನಡೆಸಿದ ಬೈಕ್ ಸವಾರನ ಬಂಧನ

Date:

Advertisements
  • ಪ್ರಿಮ್ರೋಸ್ ರಸ್ತೆಯಲ್ಲಿ ಏಕಮುಖವಾಗಿ ಸಂಚಾರ ಮಾಡಿ ಪೇದೆ ಮೇಲೆ ದೌರ್ಜನ್ಯ
  • ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದ ಪೊಲೀಸರು

ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬೈಕ್‌ ಚಲಾಯಿಸಿಕೊಂಡು ಬಂದು ಸಂಚಾರ ನಿಯಮ ಉಲ್ಲಂಘಿಸಿದ್ದನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದ ಪೇದೆಯ ಮೇಲೆ ಬೈಕ್‌ ಸವಾರ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಪ್ರಿಮ್ರೋಸ್ ರಸ್ತೆಯಲ್ಲಿ ನಡೆದಿದೆ. 26 ವರ್ಷದ ಆರೋಪಿ ಬೈಕ್ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ.

ಯಶ್ವಿನ್ ಗೌಡ ಕೆ ಬಂಧಿತ ಆರೋಪಿ. ಬೆಂಗಳೂರಿನ ಸುಬ್ರಹ್ಮಣ್ಯಪುರದ ಉತ್ತರಹಳ್ಳಿ ಮುಖ್ಯರಸ್ತೆಯ ಗೌಡನಪಾಳ್ಯದ ನಿವಾಸಿ. ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಇವರು ವಾಹನದ ನೋಂದಣಿ ಸಂಖ್ಯೆ ಸಿಕೆಆರ್ 8240ರ ಯಮಹಾ ಆರ್ ಎಕ್ಸ್ 100 ಬೈಕ್‌ನಲ್ಲಿ ಪ್ರಿಮ್ರೋಸ್ ರಸ್ತೆಯಲ್ಲಿ ಏಕಮುಖವಾಗಿ ಪ್ರಯಾಣ ಮಾಡಿ, ಸಂಚಾರ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿದ್ಯುತ್ ಪ್ರವಹಿಸಿ ಕೇರಳ ಮೂಲದ ವ್ಯಕ್ತಿ ಸಾವು

Advertisements

ಅಶೋಕನಗರ ಸಂಚಾರಿ ಪೊಲೀಸ್ ಠಾಣೆಯ 59 ವರ್ಷದ ಪೊಲೀಸ್ ಪೇದೆ ರಾಜೇಂದ್ರ ಕುಮಾರ್ ಎಂ ಬಿರಾದಾರ್ ಅವರನ್ನು ಪ್ರಿಮ್ರೋಸ್ ರಸ್ತೆಯಲ್ಲಿ ಸ್ಟೇಷನ್ ಹೌಸ್ ಆಫೀಸರ್​ ಆಗಿ ನೇಮಿಸಲಾಗಿತ್ತು. ಏಕಮುಖವಾಗಿ ಬಂದ ಬೈಕ್ ಸವಾರರನ್ನು ತಡೆಯಲು ನಿಯೋಜಿಸಲಾಗಿತ್ತು. ಬೆಳಗ್ಗೆ 10.40ಕ್ಕೆ ಎಂ.ಜಿ.ರಸ್ತೆಯಿಂದ ಪ್ರಿಮ್ರೋಸ್ ರಸ್ತೆಗೆ ಆರೋಪಿ ತನ್ನ ಬೈಕ್‌ನಲ್ಲಿ ತಪ್ಪು ದಾರಿಯಲ್ಲಿ ಹೋಗುತ್ತಿರುವುದನ್ನು ಬಿರಾದಾರ್ ನೋಡಿದ್ದಾರೆ. ಬಳಿಕ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲು ಬೈಕ್‌ನೊಂದಿಗೆ ಫೋಟೋವನ್ನು ಕ್ಲಿಕ್ಕಿಸುತ್ತಿದ್ದಾಗ ಯಶ್ವಿನ್ ಗೌಡ ಕೆ ಎಂಬಾತ ಅವರನ್ನು ನಿಂದಿಸಿ ದೌರ್ಜನ್ಯ ಎಸಗಿದ್ದಾನೆ ಎಂದು ಬಿರಾದಾರ್ ತಮ್ಮ ಪೊಲೀಸ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಾರ್ವಜನಿಕ ನೌಕರನ ಮೇಲೆ ತನ್ನ ಕರ್ತವ್ಯವನ್ನು ನಿರ್ವಹಿಸದಂತೆ ಗಾಯಗೊಳಿಸುವುದು ಮತ್ತು ಹಲ್ಲೆ ಮಾಡಿದ ಕಾರಣ ಆರೋಪಿ ಗೌಡ ಅವರ ಮೇಲೆ ದೂರು ದಾಖಲಾಗಿದೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X