ಬೆಂಗಳೂರು | ಕ್ಯಾಶ್‌ಬ್ಯಾಕ್ ಆಫರ್ ಎಂದು ನಂಬಿಸಿ ಹೋಟೆಲ್‌ ಮಾಲೀಕನಿಗೆ ವಂಚನೆ

Date:

Advertisements

ಹೋಟೆಲ್‌ ಮಾಲೀಕರೊಬ್ಬರಿಗೆ ಆನ್‌ಲೈನ್ ಪೇಮೆಂಟ್‌ ಆ್ಯಪ್‌ನಲ್ಲಿ ಕ್ಯಾಶ್ ಬ್ಯಾಕ್ ಬರುತ್ತದೆ ಎಂದು ನಂಬಿಸಿ ಅಕೌಂಟ್‌ನಿಂದ ಸಾವಿರಾರು ರೂಪಾಯಿ ಹಣ ವರ್ಗಾವಣೆ ಮಾಡಿಸಿಕೊಂಡು ದುಷ್ಕರ್ಮಿಗಳು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಬಿರಿಯಾನಿ ಹೋಟೆಲ್‌ ಮಾಲೀಕ ಪಾರುಲ್ ಷಾ ಮೋಸಹೋದ ವ್ಯಕ್ತಿ. ಇವರು ನಗರದ ದಯಾನಂದ ಲೇಔಟ್‌ನ ರಾಮಮೂರ್ತಿನಗರದಲ್ಲಿ ಬಿರಿಯಾನಿ ಹೋಟೆಲ್ ನಡೆಸುತ್ತಿದ್ದಾರೆ.

ಎಂದಿನಂತೆ ಶನಿವಾರವೂ ಪಾರುಲ್ ಷಾ ಹೋಟೆಲ್ ಕೆಲಸದಲ್ಲಿ ತೋಡಗಿದ್ದರು. ಈ ವೇಳೆ, ಇಬ್ಬರು ಅಪರಿಚಿತರು ಸುಮಾರು ಮಧ್ಯಾಹ್ನ 1 ಗಂಟೆಗೆ ಹೋಟೆಲ್‌ಗೆ ಬಂದಿದ್ದಾರೆ. ತಮ್ಮನ್ನು ಬ್ಯಾಂಕ್ ಎಕ್ಸಿಕ್ಯೂಟಿವ್ ಎಂದು ಪರಿಚಯಿಸಿಕೊಂಡಿದ್ದಾರೆ.  

Advertisements

ಬಳಿಕ ಹೊಟೇಲ್ ಮಾಲೀಕ ಪಾರುಲ್ ಷಾ ಅವರಿಗೆ ಆ್ಯಪ್​​ ಮೂಲಕ ಆನ್​​ಲೈನ್​​ ಪೇಮೆಂಟ್​ ಮಾಡಿದರೇ ನಿತ್ಯ ₹300 ಕ್ಯಾಶ್‌ಬ್ಯಾಕ್ ಬರುತ್ತದೆ ಎಂದು ತಿಳಿಸಿದ್ದಾರೆ. ಇದನ್ನು ನಂಬಿದ ಪಾರುಲ್ ಷಾ ಅವರು ಅಪರಿಚಿತರ ಕೈಗೆ ಆ್ಯಪ್ ಡೌನ್‌ಲೋಡ್ ಮಾಡಲು ತಮ್ಮ ಮೊಬೈಲ್ ಕೊಟ್ಟಿದ್ದಾರೆ. ಜತೆಗೆ ತಮ್ಮ ಬ್ಯಾಂಕ್ ಮಾಹಿತಿ ಸಹ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಆ.16 ಮತ್ತು 17 ರಂದು ವಿದ್ಯುತ್ ವ್ಯತ್ಯಯ

ಅಪರಿಚಿತರು ಮೊಬೈಲ್‌ನಲ್ಲಿ ಆ್ಯಪ್​​ ಇನ್‌ಸ್ಟಾಲ್‌ ಆಗಿದೆ ಎಂದು ಹೇಳಿ, ವಾಪಾಸ್ ಮೊಬೈಲ್ ನೀಡಿ ತೆರಳಿದ್ದಾರೆ. ಇದಾದ ಕೆಲವೇ ಗಂಟೆಗಳ ಬಳಿಕ ಪಾರುಲ್ ಷಾ ಅವರ ಬ್ಯಾಂಕ್ ಖಾತೆಯಿಂದ ₹52 ಸಾವಿರ ಹಣ ವರ್ಗಾವಣೆಯಾಗಿರುವುದು ತಿಳಿದಿದೆ.

ಕೂಡಲೇ ಗಾಬರಿಗೊಂಡ ಪಾರುಲ್ ಷಾ ಅವರು ಹತ್ತಿರದ ಪೊಲೀಸ್‌ ಠಾಣೆಗೆ ತೆರಳಿ ದೂರು ದಾಖಲು ಮಾಡಿದ್ದಾರೆ.

ಸದ್ಯ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X