ಬೆಂಗಳೂರು | ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ

Date:

Advertisements
  • ಪತಿ ಹಾಗೂ ಆತನ ಗರ್ಲ್‌ಫ್ರೆಂಡ್ ವಿರುದ್ಧ ಡೆತ್‌ನೋಟ್‌ ಬರೆದಿಟ್ಟ ಪವಿತ್ರಾ
  • ಪತಿ ಅನೈತಿಕ ಸಂಬಂಧ ಹೊಂದಿರುವುದು ತಿಳಿದು ಮನನೊಂದು ಆತ್ಮಹತ್ಯೆ

ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೆಗ್ಗನಹಳ್ಳಿ‌ ನಿವಾಸಿ ಪವಿತ್ರಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಜುಲೈ 2ರಂದು ಬೆಳಗಿನ ಜಾವ 2 ಗಂಟೆಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಮೃತ ಯುವತಿ ಸಾಯುವುದಕ್ಕೂ ಮುನ್ನ ತನ್ನ ಪತಿ ಹಾಗೂ ಆತನ ಗರ್ಲ್‌ಫ್ರೆಂಡ್ ವಿರುದ್ಧ ಡೆತ್‌ನೋಟ್‌ ಬರೆದಿಟ್ಟು ವಾಟ್ಸ್‌ಆಪ್‌ನಲ್ಲಿ ಸ್ಟೇಟಸ್‌ ಹಾಕಿ ಬಳಿಕ ಸಾವಿಗೆ ಶರಣಾಗಿದ್ದಾರೆ.

Advertisements

ಮೃತ ಯುವತಿ ಪವಿತ್ರಾ ತನ್ನ ಮೊದಲ ಪತಿಗೆ ವಿಚ್ಛೇದನ ನೀಡಿ ಚೇತನ ಗೌಡ ಅವರನ್ನು ಎರಡನೇ ಮದುವೆಯಾಗಿದ್ದರು. ಈ ಚೇತನ್ ಗೌಡ ಎಂಬುವವರು ಸುಮುಖ ಮರ್ಚೆಂಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಾಲೀಕ.

ಪವಿತ್ರಾಗೆ ತನ್ನ ಗಂಡ ಬೇರೊಂದು ಯುವತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಗೊತ್ತಾಗಿದೆ. ಈ ಬಗ್ಗೆ ಪವಿತ್ರಾ ಹಾಗೂ ಚೇತನ್ ಗೌಡ ನಡುವೆ ಪದೇಪದೆ ಜಗಳವಾಗುತ್ತಿತ್ತು.

ಈ ವಿಚಾರದ ಬಗ್ಗೆ ಪವಿತ್ರಾ ತನ್ನ ತಾಯಿ ಪದ್ಮಮ್ಮ ಬಳಿ ಹೇಳಿಕೊಂಡಿದ್ದರು. ಗಂಡನ ಅಕ್ರಮ ಸಂಬಂಧಕ್ಕೆ ಮನನೊಂದು ಪವಿತ್ರಾ ಡೆತ್ ನೋಟ್ ವಾಟ್ಸ್‌ಆಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಪಕ್ಷಗಳ ರಾಜಕೀಯ ಬ್ಲಾಕ್ ಮೇಲ್‌ಗಾಗಿ ಎಸ್ಐಟಿ ತನಿಖೆ ರಚನೆ : ಪೃಥ್ವಿ ರೆಡ್ಡಿ ಆರೋಪ

ಮಗಳ ವಾಟ್ಸಾಪ್​ ಸ್ಟೇಟಸ್‌ನಲ್ಲಿ ಡೆತ್ ನೋಟ್ ನೋಡಿ ತಾಯಿ ಮನೆ ಬಳಿ ಬಂದಾಗ ಪವಿತ್ರಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಚೇತನ್ ಗೌಡ ಹಾಗೂ ಮತ್ತೋರ್ವ ಯುವತಿ ವಿರುದ್ದ ಮೃತ ಪವಿತ್ರಾ ತಾಯಿ ಪದ್ಮಮ್ಮ ಕೆಂಗೇರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಚೇತನ್ ಗೌಡ ಹಾಗೂ ಮತ್ತೋರ್ವ ಯುವತಿ ವಿರುದ್ದ ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ಐಪಿಸಿ 306 ಆತ್ಮಹತ್ಯೆ ಪ್ರಚೋದನೆ ಅಡಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಮೃತಳು ಬರೆದಿಟ್ಟಿರುವ ಡೆತ್‌ನೋಟ್‌ ಹಾಗೂ ಆಕೆಯ ಎರಡು ಫೋನ್ ವಶಕ್ಕೆ ಪಡೆದುಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X