ಬೆಂಗಳೂರು | ಎರಡು ಮನೆಗಳಲ್ಲಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆ; ಮೂವರ ಬಂಧನ

Date:

Advertisements
  • ಸೋಲದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ಪರವಾನಗಿ ಇಲ್ಲದೆ ಅಕ್ರಮವಾಗಿ ಸ್ಪೋಟಕ ವಸ್ತುಗಳ ಸಂಗ್ರಹಣೆ

ಅನುಮತಿಯಿಲ್ಲದೆ ಎರಡು ಮನೆಗಳಲ್ಲಿ ಅಕ್ರಮವಾಗಿ ಭಾರೀ ಪ್ರಮಾಣದ ಸ್ಪೋಟಕ ಸಾಮಗ್ರಿಗಳನ್ನು ಸಂಗ್ರಹಣೆ ಮಾಡಿಟ್ಟಿದ್ದ ಆರೋಪದಡಿ ಮೂವರು ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹೆಸರಘಟ್ಟದ ಕಲ್ಲುಗುಡ್ಡದಹಳ್ಳಿ ಹಾಗೂ ದಾಸೇನಹಳ್ಳಿ ಬಳಿಯ ಎರಡು ಮನೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಅನುಮತಿ ಇಲ್ಲದೆ ಮನೆಗಳಲ್ಲಿ ಆಡಗಿಸಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳು ವಶಕ್ಕೆ ಪಡೆದಿದ್ದಾರೆ.

ಹೆಸರಘಟ್ಟದ ರಾಘವೇಂದ್ರ ಲೇಔಟ್‌ ನಿವಾಸಿ ಶ್ರೀನಿವಾಸ (40), ಕಲ್ಲುಗುಡ್ಡದಹಳ್ಳಿ ನಿವಾಸಿ ಶಂಕರ್‌ (30) ಹಾಗೂ ಕುಮಾರ್‌ (21) ಬಂಧಿತರು.

Advertisements

ಪರವಾನಗಿ ಇಲ್ಲದೆ ಅಕ್ರಮವಾಗಿ ಆರೋಪಿ ಶ್ರೀನಿವಾಸ ಮನೆಯಲ್ಲಿ ಸ್ಫೋಟಕ ವಸ್ತುಗಳನ್ನು ಸಂಗ್ರಹಣೆ ಮಾಡಿಟ್ಟ ಬಗ್ಗೆ ಖಚಿತ ಮಾಹಿತಿ ಪಡೆದ ಸೋಲದೇವನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಜತೆಗೆ 16 ಕೆ.ಜಿ. ಇದ್ದಿಲು ಪುಡಿ, 10 ಕೆ.ಜಿ. ಸಲ್ಫರ್‌ ಪೌಡರ್‌, 2 ಕೆ.ಜಿ. ಸ್ಫೋಟಕ ಜೆಲ್‌, 59 ಕೆ.ಜಿ ಪೊಟ್ಯಾಶಿಯಮ್‌ ನೈಟ್ರೇಟ್‌, 1 ಕ್ವಿಂಟಲ್‌ 10 ಕೆ.ಜಿ ಇತರೆ ಸ್ಫೋಟಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಯಾಣಿಕರ ಸುರಕ್ಷತೆಗೆ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಪಿಎಸ್‌ಡಿ ಅಳವಡಿಕೆ

ಮತ್ತೊಂದು ಮನೆಯಲ್ಲಿ ಕಲ್ಲು ಕ್ವಾರಿಗಳಲ್ಲಿ ಸ್ಫೋಟಿಸಲು ಆರೋಪಿಗಳು ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿರುವುದು ತನಿಖೆಯಿಂದ ತಿಳಿದು ಬಂದಿದೆ.  

ಆರೋಪಿಗಳಾದ ಶಂಕರ್‌ ಮತ್ತು ಕುಮಾರ್‌ ಎಂಬುವರ ಮನೆಗಳ ಮೇಲೆ ದಾಳಿ ಮಾಡಿದಾಗ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ.

ಈ ಎರಡೂ ಪ್ರಕರಣಗಳಲ್ಲಿ ಯಾವುದೇ ಅನುಮತಿ ಪಡೆಯದೆ ಸ್ಫೋಟಕಗಳನ್ನು ಸಂಗ್ರಹಿಸಿದ್ದ ಆರೋಪದಡಿ ಆರೋಪಿಗಳ ವಿರುದ್ಧ ಸ್ಫೋಟಕ ಕಾಯ್ದೆಯಡಿ ಸೋಲದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X