ಬೆಂಗಳೂರು | ಒಂದೇ ವಾರದಲ್ಲಿ ಬಡವರ ಭೂಮಿ, ವಸತಿ ಸಮಸ್ಯೆ ಪರಿಹರಿಸಬಹುದು: ಬಡಗಲಪುರ ನಾಗೇಂದ್ರ

Date:

Advertisements
  • ಭೂಮಿ, ನಿವೇಶನ, ವಸತಿ ನೀಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್‌ ಸರ್ಕಾರ
  • ಭೂಮಿ, ವಸತಿ ವಂಚಿತರ ಈ ಹೋರಾಟ ಹೊಸದಾಗಿ ಆರಂಭವಾಗಿಲ್ಲ

ರಾಜ್ಯದಲ್ಲಿ ಬಡವರಿಗೆ ಭೂಮಿ ಹಂಚಲು ಸಾಕಷ್ಟು ಭೂಮಿ ಇದೆ. ಕೇವಲ ಒಂದು ವಾರದಲ್ಲಿ ಬಡವರ ಭೂಮಿ, ವಸತಿ ಸಮಸ್ಯೆಯನ್ನು ಪರಿಹರಿಸಬಹುದು. ಆದರೆ, ಕೆಲವು ಜನರು ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ಬಡವರಿಗೆ ವಂಚಿಸಲಾಗುತ್ತಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

ಬೆಂಗಳೂರಿನಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಬಡವರ ‘ಬರಿಹೊಟ್ಟೆ ಸತ್ಯಾಗ್ರಹ’ವನ್ನು ಉದ್ಘಾಟಿಸಿ ಮಾತಾಡಿದ ಅವರು, “ಸಂಘ ಪರಿವಾರದವರು ಭೂಮಿಗಾಗಿ ಯಾವುದೇ ಅರ್ಜಿ ಹಾಕಿರಲಿಲ್ಲ. ಆದರೂ, ರಾಜ್ಯದ ಹಲವೆಡೆ ಅವರರಿಗೆ ಭೂಮಿ ನೀಡಲಾಗಿದೆ. ಆದರೆ, ಬಡವರು ಐದಾರು ದಶಕಗಳಿಂದ ಭೂಮಿ, ವಸತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಹಲವಾರು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆದರೂ, ಬಡವರಿಗೆ ಭೂಮಿ ನೀಡಲಾಗಿಲ್ಲ. ವಾಸಿಸಲು ಸೂರು ನೀಡಿಲ್ಲ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಡವರಿಗೆ ಭೂಮಿ, ವಸತಿ ಸಿಗದೆ ಸ್ವಾತಂತ್ರ್ಯದ ಅರ್ಥ ಪೂರ್ಣವಾಗದು: ನೂರ್ ಶ್ರೀಧರ್

Advertisements

ಭೂಮಿ, ವಸತಿ ವಂಚಿತರ ಈ ಹೋರಾಟ ಹೊಸದಾಗಿ ಆರಂಭವಾಗಿಲ್ಲ. 10 ವರ್ಷಗಳ ಹಿಂದೆ ಈ ಹೋರಾಟ ಆರಂಭವಾಗಿತ್ತು. ಹಿಂದಿನ ಕಾಂಗ್ರೆಸ್ ಸರ್ಕಾರ ಭೂಮಿ, ವಸತಿ ಹಕ್ಕು ವಂಚಿತರಿಗೆ ಭೂಮಿ, ನಿವೇಶನ, ವಸತಿ ನೀಡುವುದಾಗಿ ಭರವಸೆ ನೀಡಿತ್ತು. ಈಗ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ತಾನೇ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X