ಬೆಂಗಳೂರು | ಮೇ 10ರಂದು ತಪ್ಪದೆ ಮತದಾನ ಮಾಡಲು ಐಟಿ-ಬಿಟಿ ಉದ್ಯೋಗಿಗಳಿಗೆ ಸಂಬಳ ಸಹಿತ ರಜೆ

Date:

Advertisements
  • ಮತದಾನ ಉತ್ಸವದಲ್ಲಿ ತಪ್ಪದೆ ಭಾಗವಹಿಸಿ ಮತದಾನ ಮಾಡುವಂತೆ ಎಲ್ಲರಿಗೂ ತಿಳಿಸಿ
  • ಎಲ್ಲರಿಂದಲೂ ಮತದಾನ ಮಾಡಿಸುವುದು ಚುನಾವಣಾ ಆಯೋಗದ ಉದ್ದೇಶವಾಗಿದೆ

“ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಿಗಳು ಎಲ್ಲರೂ ಮೇ 10ರಂದು ತಪ್ಪದೆ ಮತದಾನ ಮಾಡುವ ಸಲುವಾಗಿ ಸಂಬಳ ಸಹಿತ ರಜೆ ನೀಡಲಾಗುವುದು” ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಭರವಸೆ ನೀಡಿದರು.

ಎಲೆಕ್ಟ್ರಾನಿಕ್ ಸಿಟಿಯ ಟೆಕ್ ಮಹೀಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಈ ವೇಳೆ ಮಾತನಾಡಿದ ಅವರು, “ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಸ್ಥೆಗಳ ಸಿಇಒಗಳು ತಮ್ಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಉದ್ಯೋಗಿಗಳಿಗೆ ಮತದಾನ ಉತ್ಸವದಲ್ಲಿ ತಪ್ಪದೆ ಭಾಗವಹಿಸಿ ಮತದಾನ ಮಾಡಲು ತಿಳಿಸಿ” ಎಂದರು.

Advertisements

“ಬೆಂಗಳೂರು ವ್ಯಾಪ್ತಿಯಲ್ಲಿ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಿಗಳಿಗೆ ಮತದಾನ ಮಾಡುವ ಒಲವು ಹೆಚ್ಚಾಗಿ ಇರುವುದಿಲ್ಲ. ಈ ಸಂಬಂಧ ಅವರಲ್ಲಿರುವಂತಹ ತಪ್ಪು ಕಲ್ಪನೆ ಹಾಗೂ ಆಲೋಚನೆಗಳನ್ನು ಬದಲಿಸಿ ಎಲ್ಲರಿಂದಲೂ ಮತದಾನ ಮಾಡಿಸುವುದು ಚುನಾವಣಾ ಆಯೋಗದ ಉದ್ದೇಶವಾಗಿದೆ” ಎಂದು ಹೇಳಿದರು.

“ಬೆಂಗಳೂರು ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳಲ್ಲೂ ಈ ಬಾರಿ ಹೆಚ್ಚು ಮತದಾನ ಮಾಡಿಸುವ ಉದ್ದೇಶವನ್ನಿಟ್ಟುಕೊಂಡು, ಎಲ್ಲ ಕಡೆ ಮತದಾನ ಜಾಗೃತಿ ಜಾಥ, ನಾಟಕ ಸೇರಿದಂತೆ ನಮ್ಮ ಬೆಂಗಳೂರು ಐಕಾನ್ಸ್‌ಗಳ ಮೂಲಕ ಮತದಾರರು ತಪ್ಪದೆ ಮತಚಲಾಯಿಸುವಂತೆ ಪ್ರೇರೇಪಿಸುವ ಕೆಲಸ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿದ್ಯುತ್ ಪ್ರವಹಿಸಿ ಕೇರಳ ಮೂಲದ ವ್ಯಕ್ತಿ ಸಾವು

ಈ ವೇಳೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಸಂಗಪ್ಪ, ಜಂಟಿ ಆಯುಕ್ತರಾದ ಕೃಷ್ಣಮೂರ್ತಿ, ನಾನಾ ಸಂಸ್ಥೆಗಳ ಸಿಇಒಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X