ಬೆಂಗಳೂರು | ನಿಯಮ ಪಾಲಿಸದ 15ಕ್ಕೂ ಹೆಚ್ಚು ಶಾಲಾ ವಾಹನಗಳ ವಶ

Date:

Advertisements

ಶಾಲಾ ಮಕ್ಕಳನ್ನು ಅನಧಿಕೃತವಾಗಿ ಓಮ್ನಿ ಕಾರ್‌ಗಳಲ್ಲಿ ಕರೆದುಕೊಂಡು ಹೋಗುತ್ತಿದ್ದ 15ಕ್ಕೂ ಹೆಚ್ಚು ವಾಹನಗಳನ್ನು ಅರ್‌ಟಿಒ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಶಾಲಾ ಮಕ್ಕಳನ್ನು ಅನುಮತಿಯಿಲ್ಲದ ವೈಟ್‌ಬೋರ್ಡ್‌ ಕಾರ್‌ನಲ್ಲಿ ಕರೆದುಕೊಂಡು ಹೋಗುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆ, ಮಂಗಳವಾರ ಆರ್‌ಟಿಒ ಅಧಿಕಾರಿಗಳು ಪರಿಶೀಲನೆ ನಡೆಸಿ, ಕಾರ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

“ಬೆಂಗಳೂರಿನಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸಂಚಾರದ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಮಕ್ಕಳಿಗೆ ಸುರಕ್ಷತೆ ಇಲ್ಲದ ವಾಹನಗಳಲ್ಲಿ ಅವರನ್ನು ಕರೆದುಕೊಂಡು ಹೋಗಲು ಅನುಮತಿ ಇಲ್ಲ. ಅದಕ್ಕೆ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ” ಎಂದು ಆರ್​ಟಿಓ ಜಂಟಿ ಆಯುಕ್ತೆ ಶೋಭಾ ಹೇಳಿದರು.

Advertisements

“ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಹಲವಾರು ವಾಹನಗಳ ದಾಖಲಾತಿಗಳು ಸರಿಯಾಗಿ ಇಲ್ಲ. ಬಹುತೇಕ ವಾಹನಗಳ ಟ್ಯಾಕ್ಸ್‌ ಕಟ್ಟಿಲ್ಲ. ಎಫ್‌ಸಿ ಇಲ್ಲ. ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಲು ಅನುಮತಿ ಇಲ್ಲದಿದ್ದರೂ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದರು. ಸಾರಿಗೆಯೇತರ ವಾಹನಗಳನ್ನು ಅನಧಿಕೃತವಾಗಿ ಬಳಸಿದ್ದಾರೆ. ಮಕ್ಕಳನ್ನು ಇಂತಹ ವಾಹನಗಳಲ್ಲಿ ಕಳಿಸುವಾಗ ಪೋಷಕರು ಗಮನ ಹರಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? 14 ಕಡೆ ಲೋಕಾಯುಕ್ತ ದಾಳಿ: ಐದು ಮದ್ಯದಂಗಡಿ ಹೊಂದಿದ್ದ ಭೂಮಾಪನ ಇಲಾಖೆ ಅಧೀಕ್ಷಕ

“ಕೊರೊನಾ ಸಾಂಕ್ರಾಮಿಕ ರೋಗದ ಬಳಿಕ ಈಗತಾನೇ ಪುನರ್ಜನ್ಮ ಪಡೆದಿದ್ದೇವೆ. ವಾಹನ ಚಾಲಕರಿಗೆ ಹಲವಾರು ಸಮಸ್ಯೆಗಳಿವೆ. ಇದೀಗ ಆರ್‌ಟಿಒ ಅಧಿಕಾರಿಗಳು ಇದ್ದಕ್ಕಿದ್ದಂತೆ ರೇಡ್ ಮಾಡಿ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಎಲ್ಲೋ ಬೋರ್ಡ್‌ ವಾಹನಗಳಿಗೆ ಅರ್ಜಿ ಹಾಕಿದ್ದೇವೆ. ಆದರೆ, ಅನುಮತಿ ನೀಡಿಲ್ಲ. ನಮ್ಮ ವಾಹನಗಳನ್ನು ಬಿಡದೆ ಇದ್ದರೆ, ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕುತ್ತೇವೆ” ಎಂದು ಕರ್ನಾಟಕ ರಾಜ್ಯ ಖಾಸಗಿ ಶಾಲಾ ವಾಹನ ಸಂಘದ ಅಧ್ಯಕ್ಷ ಸೋಮಶೇಖರ್ ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X