ಬೆಂಗಳೂರು | ಆನ್‌ಲೈನ್‌ ಡೆಲಿವೆರಿ ಮೂಲಕ ಡ್ರಗ್ಸ್‌ ಮಾರಾಟ; ಬಂಧನ

Date:

Advertisements
  • ಗಿಫ್ಟ್‌ ಬಾಕ್ಸ್‌ ಮುಖಾಂತರ ಡ್ರಗ್ಸ್‌ ಪ್ಯಾಕ್ ಮಾಡಿ ಗ್ರಾಹಕರಿಗೆ ಮಾರಾಟ
  • ಡ್ರಗ್ಸ್ ದಂಧೆ ಆರೋಪದ ಮೇಲೆ ವಿಮಾ ಕಂಪನಿಯ ಕಾರ್ಯನಿರ್ವಾಹಕನ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಆನ್‌ಲೈನ್‌ ಡೆಲಿವೆರಿ ಮೂಲಕ ಡ್ರಗ್ಸ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ.

ಅಶೋಕನಗರದ ಬಾಡಿಗೆ ಮನೆಯೊಂದರಲ್ಲಿ ಆರೋಪಿಗಳು ನೆಲೆಸಿದ್ದರು. ಆಫ್ರಿಕನ್ ಪ್ರಜೆಗಳಿಂದ ಡ್ರಗ್ಸ್ ಪಡೆದು ಗಿಫ್ಟ್‌ ಬಾಕ್ಸ್‌ಗಳಲ್ಲಿ ಪ್ಯಾಕ್ ಮಾಡಿ ಗ್ರಾಹಕರಿಗೆ ತಲುಪಿಸುತ್ತಿದ್ದರು. ಮತ್ತೆ ಅದೇ ಗಿಫ್ಟ್‌ ಬಾಕ್ಸ್‌ ಮುಖಾಂತರ ಹಣ ಪಡೆಯುತ್ತಿದ್ದರು.

ನಗರದಲ್ಲಿ ಈ ರೀತಿಯಾಗಿ ದಂಧೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

Advertisements

“ಒಂದು ತಿಂಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ 7 ಪೆಡ್ಲರ್‌ಗಳನ್ನು ಬಂಧಿಸಲಾಗಿದೆ” ಎಂದು ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಎಸ್.ಡಿ.ಶರಣಪ್ಪ ತಿಳಿಸಿದ್ದಾರೆ.

ಡ್ರಗ್ಸ್‌ ಆರೋಪಿಯ ಬಂಧನ

ವಿಮಾ ಕಂಪನಿಯ ಕಾರ್ಯನಿರ್ವಾಹಕನನ್ನು ಡ್ರಗ್ಸ್ ದಂಧೆ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಆರೋಪಿಯು ವಿಶಾಖಪಟ್ಟಣಂದಿಂದ ಮಾದಕ ವಸ್ತಗಳನ್ನು ತರೆಸಿಕೊಳ್ಳುತ್ತಿದ್ದನು. ಕಾರಿನಲ್ಲಿ ಹ್ಯಾಶಿಶ್ ಆಯಿಲ್ ಸರಬರಾಜು ಮಾಡುತ್ತಿದ್ದನು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದೇವಸ್ಥಾನದಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ದೂರನ್ನೇ ತಿರುಚಿದ ಪೊಲೀಸರು: ಆರೋಪ

19 ಮಂದಿ ಡ್ರಗ್ ಫೆಡ್ಲರ್‌ಗಳ ಬಂಧನ

ಪೊಲೀಸರು ಡ್ರಗ್ಸ್‌ ದಂಧೆ ನಡೆಸುವವರ ವಿರುದ್ಧ ಕಳೆದ ಹಲವು ತಿಂಗಳಿನಿಂದ ಕಾರ್ಯಾಚರಣೆ ನಡೆಸುತ್ತಿದ್ದು, ಇದೀಗ 19 ಮಂದಿಯನ್ನು ಬಂಧಿಸಿದ್ದಾರೆ. ಈ ಪೈಕಿ 10 ಪೆಡ್ಲರ್‌ಗಳು ಕೇರಳದವರಾಗಿದ್ದು, ಇಬ್ಬರು ನೈಜೀರಿಯಾ ಮತ್ತು 5 ಜನ ಕೋಸ್ಟ್‌ನವರಾಗಿದ್ದಾರೆ. ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶ ರಾಜ್ಯದ ತಲಾ ಒಬ್ಬರನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಅಧಿಕಾರಿಗಳು ₹7.06 ಕೋಟಿ ಮೌಲ್ಯದ 6 ಕೆಜಿ ಡ್ರಗ್ಸ್, ಹ್ಯಾಶಿಶ್ ಆಯಿಲ್, 51.8 ಕೆಜಿ ಗಾಂಜಾ, 140 ಗ್ರಾಂ ಎಂಡಿಎಂಎ ಕ್ರಿಸ್ಟಲ್‌ಗಳು, 236 ಎಕ್‌ಸ್ಟಸಿ ಮಾತ್ರೆಗಳು, 34 ಎಲ್‌ಎಸ್‌ಡಿ ಸ್ಟ್ರಿಪ್‌ಗಳು ಮತ್ತು 23 ಗ್ರಾಂ ಕೊಕೇನ್​​ ಅನ್ನು ವಶಪಡಿಸಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X