ಬೆಂಗಳೂರು | ಚಿಕ್ಕನಾಗಮಂಗಲ ಕೆರೆಗೆ ಕೊಳಚೆ ನೀರು, ಮೀನುಗಳ ಸಾವು; ನಿವಾಸಿಗಳ ಆರೋಪ

Date:

Advertisements

ಬೆಂಗಳೂರಿನ ಆನೇಕಲ್ ತಾಲೂಕಿನ ಚಿಕ್ಕನಾಗಮಂಗಲ ಕೆರೆಯಲ್ಲಿ ಭಾನುವಾರ ನೂರಾರು ಮೀನುಗಳು ಸತ್ತು ತೇಲುತ್ತಿರುವ ದೃಶ್ಯ ಕಂಡುಬಂದಿದೆ.

ಭಾನುವಾರ ಬೆಳಗ್ಗೆ ಸ್ಥಳೀಯ ನಿವಾಸಿಗಳು ಓಡಾಡುತ್ತಿರುವಾಗ ಕೆರೆಯಲ್ಲಿ ನೂರಾರು ಮೀನುಗಳು ಸತ್ತಿರುವುದು ಕಂಡುಬಂದಿದೆ. ಚಿಕ್ಕನಾಗಮಂಗಲದಲ್ಲಿರುವ ಘನತ್ಯಾಜ್ಯ ನಿರ್ವಹಣಾ ಘಟಕದಿಂದ ಕಲುಷಿತಗೊಂಡಿರುವ ನೀರು ಕೆರೆಗೆ ಹರಿದು ಬರುತ್ತಿದೆ. ಈ ಚಿಕ್ಕನಾಗಮಂಗಲ ಕೆರೆಯಲ್ಲಿ ಮೀನುಗಳು ಸಾಯುತ್ತಿರುವುದು ಇದೇ ಮೊದಲು ಎಂದು ಸ್ಥಳೀಯರು ಹೇಳಿದ್ದಾರೆ.

ಸ್ಥಳೀಯ ನಿವಾಸಿ ಪ್ರಣಯ್ ದುಬೆ ಮಾತನಾಡಿ, “ಕಲುಷಿತ ನೀರನ್ನು ಕರೆಗೆ ಬಿಡಲಾಗುತ್ತಿದೆ. ಇದು ಮಾಲಿನ್ಯಕ್ಕೆ ಕಾರಣವಾಗಿದೆ. ಇದರ ಪರಿಣಾಮವಾಗಿ ಮೀನುಗಳು ಸಾಯುತ್ತಿವೆ” ಎಂದು ದೂರಿದರು.  

Advertisements

ಈ ಸುದ್ದಿ ಓದಿದ್ದೀರಾ? ಬ್ಯಾಂಕ್ ಪರೀಕ್ಷೆ: ಹಿಂದಿಯವರು ಹಿಂದಿಯಲ್ಲಿ ಬರೆಯಬಹುದಾದರೆ ಕನ್ನಡಿಗರು ಕನ್ನಡದಲ್ಲೇಕೆ ಬರೆಯಬಾರದು?: ಎಎಪಿ

“ಕೆರೆಯಲ್ಲಿ ಉಂಟಾಗುತ್ತಿರುವ ಮಾಲಿನ್ಯದ ಬಗ್ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಯಾವುದೇ ದೂರುಗಳು ಬಂದಿಲ್ಲ. ಸ್ಥಳೀಯ ನಿವಾಸಿಗಳು ತ್ಯಾಜ್ಯ ನಿರ್ವಹಣಾ ಘಟಕವನ್ನು ಮುಚ್ಚಲು ಬಯಸುತ್ತಾರೆ. ಪರಿಸರಕ್ಕೆ ಸಂಬಂಧಿಸಿದ ಯಾವುದಾದರೂ ಪ್ರದೇಶದಲ್ಲಿ ಅವಘಡ ಸಂಭವಿಸಿದರೆ ಅದಕ್ಕೆ ಘಟಕವನ್ನು ದೂಷಿಸುತ್ತಾರೆ. ಸ್ಥಾವರವನ್ನು ಮುಚ್ಚಲು ಸಾಧ್ಯವಿಲ್ಲ” ಎಂದು ಬಿಡಬ್ಲೂಎಸ್‌ಎಸ್‌ಬಿ ಅಧಿಕಾರಿಯೊಬ್ಬರು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X