ಬೆಂಗಳೂರು | ಶಂಕಿತ ಉಗ್ರರ ವಿಚಾರಣೆಗೆ ಸಿಸಿಬಿಗೆ ಇನ್ನೂ 10 ದಿನಗಳ ಕಾಲಾವಕಾಶ ನೀಡಿದ ನ್ಯಾಯಾಲಯ

Date:

Advertisements

ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನದಲ್ಲಿರುವ ಐವರು ಶಂಕಿತ ಉಗ್ರರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಅಪರಾಧ ವಿಭಾಗಕ್ಕೆ(ಸಿಸಿಬಿ) 10 ದಿನಗಳ ಕಾಲಾವಕಾಶ ನೀಡಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.

ಐವರು ಶಂಕಿತರ ಕಸ್ಟಡಿ ವಿಚಾರಣೆಗೆ ಸಿಸಿಬಿ 15 ದಿನಗಳ ಕಾಲಾವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಆದರೆ, ನ್ಯಾಯಾಲಯ 10 ದಿನಗಳ ಕಾಲಾವಕಾಶ ನೀಡಿದೆ. ಶಂಕಿತ ಉಗ್ರರು ಸ್ಫೋಟ ನಡೆಸಲು ಯೋಜಿಸಿದ್ದರು ಎನ್ನಲಾದ ಸ್ಥಳಗಳ ಬಗ್ಗೆ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ.

ಸುಲ್ತಾನಪಾಳ್ಯದ ಸೈಯದ್ ಸುಹೇಲ್ ಖಾನ್ (24), ಮೊಹಮ್ಮದ್ ಉಮರ್ ಖಾನ್(29), ಜಾಹಿದ್ ತಬ್ರೇಜ್(25), ಸೈಯದ್ ಮುದಸ್ಸಿರ್ ಪಾಷಾ(28) ಹಾಗೂ ಫ್ರೇಜರ್ ಟೌನ್‌ನ ಮೊಹಮ್ಮದ್ ಫಿಜಲ್ ರಬ್ಬಾನಿ (30) ಅವರನ್ನು ಜುಲೈ 18ರಂದು ಸುಲ್ತಾನಪಾಳ್ಯದಲ್ಲಿ ಬಂಧಿಸಲಾಗಿದೆ ಎಂದು ಸಿಸಿಬಿ ತಿಳಿಸಿದೆ. ಸದ್ಯ ಅವರು ಮಡಿವಾಳದ ಪೊಲೀಸ್ ಟೆಕ್ನಿಕಲ್ ಸೆಲ್‌ನಲ್ಲಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಅತ್ಯುತ್ತಮ ಆರ್.ಆರ್.ಆರ್ ನಗರವಾಗಿ ಆಯ್ಕೆಯಾದ ಬಿಬಿಎಂಪಿ

2008ರ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಕೇಂದ್ರ ಕಾರಾಗೃಹದಲ್ಲಿರುವ ಆರನೇ ಶಂಕಿತ ಟಿ ನಾಸೀರ್‌ನನ್ನು ಗುರುವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X